ನವಜೋತ್ ಸಿಂಗ್ ಸಿಧು 
ದೇಶ

ಪಂಜಾಬ್ ಕಾಂಗ್ರೆಸ್ ಅಧ್ಯಕ್ಷರಾಗಿ ನವಜೋತ್ ಸಿಂಗ್ ಸಿಧು ನೇಮಕ ಸಾಧ್ಯತೆ 

ಮುಂಬರುವ ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಮುಖ್ಯಮಂತ್ರಿ ಕ್ಯಾಪ್ಟನ್ ಅಮರೀಂದರ್ ಸಿಂಗ್,  ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿಯಾಗಿರಲಿದ್ದು, ನವಜೋತ್ ಸಿಂಗ್ ಸಿಧು ಪಂಜಾಬ್ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗುವ ಸಾಧ್ಯತೆಯಿರುವುದಾಗಿ ಮೂಲಗಳು ತಿಳಿಸಿವೆ.

ನವದೆಹಲಿ:  ಪಂಜಾಬ್ ನಲ್ಲಿ ಶಾಂತಿಯುತವಾಗಿ ಬಿಕ್ಕಟ್ಟು ಬಗೆಹರಿಸಲು ಕಾಂಗ್ರೆಸ್ ಹೈ ಕಮಾಂಡ್ ಎದುರು ನೋಡುತ್ತಿದೆ.  ಮುಂಬರುವ ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಮುಖ್ಯಮಂತ್ರಿ ಕ್ಯಾಪ್ಟನ್ ಅಮರೀಂದರ್ ಸಿಂಗ್,  ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿಯಾಗಿರಲಿದ್ದು, ನವಜೋತ್ ಸಿಂಗ್ ಸಿಧು ಪಂಜಾಬ್ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗುವ ಸಾಧ್ಯತೆಯಿರುವುದಾಗಿ ಮೂಲಗಳು ತಿಳಿಸಿವೆ.

ಉಭಯ ನಾಯಕರ ನಡುವಣ ಭಿನ್ನಾಭಿಪ್ರಾಯ ಶಮನಕ್ಕೆ ಸೂತ್ರವೊಂದನ್ನು ರೂಪಿಸಲಾಗಿದ್ದು, ಶೀಘ್ರದಲ್ಲಿಯೇ ಘೋಷಣೆಯಾಗುವ ಸಾಧ್ಯತೆಯಿದೆ. ಈ ಸೂತ್ರದನ್ವಯ ಮುಖ್ಯಮಂತ್ರಿ ಹಾಗೂ ಸಿಧು ಒಟ್ಟಾಗಿ ಕಾರ್ಯ ನಿರ್ವಹಿಸಲಿದ್ದಾರೆ. ಅಮರೀಂದರ್ ಸಿಂಗ್ , ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿಯಾದರೆ, ಸಿಧುಗೆ ಪ್ರಮುಖ ಹುದ್ದೆ ಸಿಗಲಿದೆ ಎಂದು ಪಂಜಾಬ್ ಎಐಸಿಸಿ ಉಸ್ತುವಾರಿ ಹರೀಶ್ ರಾವತ್ ತಿಳಿಸಿದರು.

ಕ್ಯಾಪ್ಟನ್ ಅಮರೀಂದರ್ ಸಿಂಗ್ ಹಾಗೂ ಬಹುತೇಕ ಶಾಸಕರು, ಸಂಸದರು ಹಾಗೂ ಪಂಜಾಬ್ ಮುಖಂಡರ ತೀವ್ರ ವಿರೋಧದ ನಡುವೆಯೂ ಸಿಧು ಉನ್ನತ ಸ್ಥಾನದ ಮೇಲೆ ಕಣ್ಣಿಟ್ಟಿದ್ದಾರೆ. ಒಂದು ವೇಳೆ ಆ ಸ್ಥಾನ ದೊರೆಯದಿದ್ದರೆ ಎಎಪಿಗೆ ಸೇರ್ಪಡೆಯಾಗುವುದಾಗಿ ಬೆದರಿಕೆ ಹಾಕಿದ್ದಾರೆ. ಸಿಧುಗೆ ಪ್ರಿಯಾಂಕಾ ಗಾಂಧಿ ಅವರ ಬೆಂಬಲವಿದ್ದು, ಈ ತಿಂಗಳ ಆರಂಭದಲ್ಲಿ ಸಿಧು ಜೊತೆಗೆ ಮಾತುಕತೆ ನಡೆಸುವಂತೆ ರಾಹುಲ್ ಗಾಂಧಿ ಅವರ ಮನವೊಲಿಸಿದ್ದರು ಎಂದು ಮೂಲಗಳು ಹೇಳಿವೆ.

ಪಂಜಾಬಿನಲ್ಲಿ ಸಮತೋಲನ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಇಬ್ಬರು ಕಾರ್ಯಾಧ್ಯಕ್ಷರನ್ನು ಪಕ್ಷ  ನೇಮಕ ಮಾಡುವ ಸಾಧ್ಯತೆಯಿದೆ. ಈ ಹುದ್ದೆಗಳಿಗೆ ವಿಜಯ್ ಇಂದರ್ ಸಿಂಗ್ಲಾ ಮತ್ತು ಸಂತೋಖ್ ಸಿಂಗ್ ಚೌಧರಿ ಹೆಸರು ಕೇಳಿಬರುತ್ತಿದೆ. ಸಿಂಗ್ಲಾ ಪಂಜಾಬ್ ಸರ್ಕಾರದಲ್ಲಿ ಸಚಿವರಾಗಿದ್ದರೆ, ಚೌದರಿ ಜಲಾಂದರ್ ನ ಸಂಸದರಾಗಿದ್ದು, ದಲಿತ ಮುಖಂಡರಾಗಿ ಹೆಸರುವಾಸಿಯಾಗಿದ್ದಾರೆ. ಅಮರೀಂದರ್ ಸಿಂಗ್ ಪ್ರಚಾರ ಸಮಿತಿ ಅಧ್ಯಕ್ಷರಾಗಲಿದ್ದು, ಪ್ರತಾಪ್ ಸಿಂಗ್ ಬಾಜ್ವಾ ಪ್ರಣಾಳಿಕೆ ಸಮಿತಿ ಮುಖ್ಯಸ್ಥರಾಗುವ ಸಾಧ್ಯತೆಯಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT