ಸಾಂದರ್ಭಿಕ ಚಿತ್ರ 
ದೇಶ

ಕೊರೋನಾ ಕಲಿಸಿದ ಪಾಠಗಳು: ಕೊನೆಗೂ ಆರೋಗ್ಯ ಕ್ಷೇತ್ರಕ್ಕೆ ಸಿಕ್ಕಿದೇ ಆದ್ಯತೆ!

ಆರೋಗ್ಯ ರಕ್ಷಣೆಗೆ ಆದ್ಯತೆ ನೀಡಲು ಈ ದೇಶಕ್ಕೆ ಪ್ರಚೋದನೆ ಅಗತ್ಯವಿದ್ದಂತಹ ಸಂದರ್ಭದಲ್ಲಿ ಸಾಂಕ್ರಾಮಿಕವು ಹಲವಾರು ನ್ಯೂನತೆಗಳನ್ನು ಬಹಿರಂಗಪಡಿಸಿದೆ.  

ನವದೆಹಲಿ: ಆರೋಗ್ಯ ರಕ್ಷಣೆಗೆ ಆದ್ಯತೆ ನೀಡಲು ಈ ದೇಶಕ್ಕೆ ಪ್ರಚೋದನೆ ಅಗತ್ಯವಿದ್ದಂತಹ ಸಂದರ್ಭದಲ್ಲಿ ಸಾಂಕ್ರಾಮಿಕವು ಹಲವಾರು ನ್ಯೂನತೆಗಳನ್ನು ಬಹಿರಂಗಪಡಿಸಿದೆ.  

ಆಸ್ಪತ್ರೆಗಳಲ್ಲಿನ ಹಾಸಿಗೆಗಳ ಕೊರತೆ, ವೆಂಟಿಲೇಟರ್, ಇಸಿಎಂಒನಂತಹ ವಿಶೇಷ ಸಲಕರಣೆಗಳು ಮತ್ತು ಸಾಕಷ್ಟು ವೈದ್ಯಕೀಯ ಸಿಬ್ಬಂದಿ ಕೊರತೆಯಂತಹ ಸವಾಲುಗಳು ಕೋವಿಡ್-19 ಎರಡನೇ ಅವಧಿಯಲ್ಲಿ ಮುಂಚೂಣಿಯಲ್ಲಿರುವುದರೊಂದಿಗೆ, ಆರೋಗ್ಯ ಕ್ಷೇತ್ರದ ಮಿತಿಯನ್ನು ಅಲ್ಲಗಳೆಯುವಂತಿಲ್ಲ.

ದೇಶದ ಎಲ್ಲಾ ಜಿಲ್ಲೆಗಳಲ್ಲಿ  ಆಕ್ಸಿಜನ್ ಪ್ಲಾಂಟ್ ಗಳು, ತುರ್ತು ನಿಗಾ ಹಾಸಿಗೆಗಳು, ಅಂತಿಮ ವರ್ಷದ ವೈದ್ಯಕೀಯ ಮತ್ತು ನರ್ಸಿಂಗ್ ವಿದ್ಯಾರ್ಥಿಗಳನ್ನು ಕರ್ತವ್ಯಕ್ಕೆ ಹಾಜರುಪಡಿಸುವುದು ಮತ್ತಿತರ ಪ್ರಯತ್ನಗಳ ಮೂಲಕ ಸ್ವಲ್ಪ ಮಂಕಾಗುವಿಕೆಯಿಂದ ತಪ್ಪಿಸಿಕೊಂಡಂತಾಗಿದೆ. 

ಆದಾಗ್ಯೂ, ಒಟ್ಟಾರೇಯಾಗಿ ಆರೋಗ್ಯದ ಗುಣಮಟ್ಟ ಸುಧಾರಿಸುವುದಕ್ಕೆ ಸಮಯಕ್ಕೆ ಅನುಗುಣವಾದ ಫಲಿತಾಂಶಗಳನ್ನು ಗುರಿಯಾಗಿಸುವ ಅವಶ್ಯಕತೆಯಿದೆ. ಉದಾಹರಣೆಗೆ ಜಪಾನ್ ಮತ್ತು ದಕ್ಷಿಣ ಕೊರಿಯಾದಂತಹ ರಾಷ್ಟ್ರಗಳಲ್ಲಿ ಪ್ರತಿ 10 ಸಾವಿರ ಜನಸಂಖ್ಯೆಗೆ 100 ಬೆಡ್ ಗಳಿಂದ ಐದು ಆಸ್ಪತ್ರೆ ಬೆಡ್ ಗಳಿದ್ದರೆ ಭಾರತದಲ್ಲಿ ಪ್ರತಿ 10 ಸಾವಿರ ಜನಸಂಖ್ಯೆಗೆ 8. 6 ವೈದ್ಯರು ಇರುತ್ತಾರೆ.

ಈ ನಿಟ್ಟಿನಲ್ಲಿ  ಕಿರು ಅವಧಿಯ ತುರ್ತು ಪೂರ್ವ ಸಿದ್ಧತೆಯಾಗಿ ಮಕ್ಕಳ ಆರೈಕೆಗೆ ಒಂದು ವರ್ಷಕ್ಕೆ 23,220 ಕೋಟಿಯನ್ನು ಹಣಕಾಸು ಸಚಿವರು ಘೋಷಿಸಿದ್ದಾರೆ. ಕಡಿಮೆ ಸೇವೆ ಸಲ್ಲಿಸುತ್ತಿರುವ ಪ್ರದೇಶಗಳಿಗೆ 50,000 ಕೋಟಿ ರೂ. ಮೀಸಲಿಟಿದ್ದಾರೆ.  ಆರೋಗ್ಯ ಕ್ಷೇತ್ರದಲ್ಲಿನ ವೆಚ್ಚ ಶೇ.14.9ಕ್ಕೆ ಹೆಚ್ಚಳವಾಗಿದೆ. ಆದರೆ, 2015ರ ಆರ್ಥಿಕ ವರ್ಷದಲ್ಲಿ 1,008 ರೂಪಾಯಿ ಇದ್ದ  ತಲಾ ಖರ್ಚು 2020ರ ಆರ್ಥಿಕ ವರ್ಷದಲ್ಲಿ 1944 ರೂ.ಗೆ ಏರಿಕೆಯಾಗಿದೆ. ಬ್ರಿಕ್ಸ್ ರಾಷ್ಟ್ರಗಳಿಗೆ ಹೋಲಿಸಿದರೆ ಇದು ಅಸಮರ್ಕವಾಗಿದೆ.

ಸಾಂಕ್ರಾಮಿಕ ರೋಗದ ಕಾರಣದಿಂದ ಆರೋಗ್ಯ ಕ್ಷೇತ್ರದಲ್ಲಿನ ಒಟ್ಟಾರೇ ಹಂಚಿಕೆಯು ಶೇ 1.4 ರಷ್ಟಿದೆ. ಕೋವಿಡ್-19 ವಿರುದ್ಧದ ಲಸಿಕೆ ಅಭಿಯಾನ ಮತ್ತು ಅಗತ್ಯವಿದ್ದಾಗ ಹೆಜ್ಜೆ ಹಾಕುವಲ್ಲಿ ಕೇಂದ್ರ ಸರ್ಕಾರವು ಪ್ರಮುಖ ಪಾತ್ರ ವಹಿಸುತ್ತದೆಯಾದರೂ, ಇದು ದೇಶದ ಒಟ್ಟು ಹಣದ 25 ಶೇಕಡಾವನ್ನು ಆರೋಗ್ಯಕ್ಕಾಗಿ ಖರ್ಚು ಮಾಡುತ್ತದೆ.

ಮೂಲ ಬರಹ: ಸುಬ್ರಕಾಂತ್ ಪಾಂಡ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT