ಫಿಜರ್ ಬಯೋಂಟೆಕ್ ಲಸಿಕೆ 
ದೇಶ

ಭಾರತದಲ್ಲಿ ಕೋವಿಡ್ ಲಸಿಕೆ ಲೈಸೆನ್ಸ್ ಗಾಗಿ ಫೈಜರ್, ಜಾನ್ಸನ್ ಅಂಡ್ ಜಾನ್ಸನ್ ಇನ್ನೂ ಅರ್ಜಿ ಸಲ್ಲಿಸಿಲ್ಲ: ಮೂಲಗಳು

ತಮ್ಮ ಕೋವಿಡ್ ಲಸಿಕೆ ತುರ್ತು ಬಳಕೆಯ ದೃಢೀಕರಣಕ್ಕಾಗಿ ಅರ್ಜಿ ಸಲ್ಲಿಸುವಂತೆ ಭಾರತೀಯ ಔಷಧ ನಿಯಂತ್ರಕ ಮಹಾಮಂಡಳಿ(ಡಿಸಿಜಿಐ) ಫೈಜರ್, ಜಾನ್ಸನ್ ಅಂಡ್ ಜಾನ್ಸನ್‌ಗೆ ಎರಡೆರಡು ಬಾರಿ ಪತ್ರ ಬರೆಯುವ ಮೂಲಕ ಒತ್ತಾಯಿಸಿದೆ.

ನವದೆಹಲಿ: ತಮ್ಮ ಕೋವಿಡ್ ಲಸಿಕೆ ತುರ್ತು ಬಳಕೆಯ ದೃಢೀಕರಣಕ್ಕಾಗಿ ಅರ್ಜಿ ಸಲ್ಲಿಸುವಂತೆ ಭಾರತೀಯ ಔಷಧ ನಿಯಂತ್ರಕ ಮಹಾಮಂಡಳಿ(ಡಿಸಿಜಿಐ) ಫೈಜರ್, ಜಾನ್ಸನ್ ಅಂಡ್ ಜಾನ್ಸನ್‌ಗೆ ಎರಡೆರಡು ಬಾರಿ ಪತ್ರ ಬರೆಯುವ ಮೂಲಕ ಒತ್ತಾಯಿಸಿದೆ. ಇದರಿಂದಾಗಿ ಅರ್ಜಿಯನ್ನು ಸಮಯಕ್ಕೆ ಸರಿಯಾಗಿ ಪ್ರಕ್ರಿಯೆಗೊಳಿಸಲಾಗುತ್ತದೆ ಆದರೆ ಫಾರ್ಮಾ ಕಂಪನಿಗಳು ಪರವಾನಗಿಗಾಗಿ ಇನ್ನೂ ಅರ್ಜಿ ಸಲ್ಲಿಸಿಲ್ಲ.

ಎಎನ್‌ಐ ಮೂಲಗಳ ಪ್ರಕಾರ, ಔಷಧ ನಿಯಂತ್ರಕರು ಅವರೊಂದಿಗೆ ಮಾತನಾಡುತ್ತಿದ್ದು ಫಾರ್ಮಾ ಕಂಪನಿಗಳು ಅದರ ಮೇಲೆ ಕೆಲಸ ಮಾಡುತ್ತಿರುವುದಾಗಿ ಹೇಳಿರುವುದಾಗಿ ಮೂಲಗಳು ತಿಳಿಸಿವೆ. 

ಮತ್ತೊಂದು ದೈತ್ಯ ಫಾರ್ಮಾ ಕಂಪನಿ ಮಾಡರ್ನಾ ಕೋವಾಕ್ಸ್ ಅಡಿಯಲ್ಲಿ ಅಮೆರಿಕಾದಿಂದ ಭಾರತಕ್ಕೆ ಏಳು ಮಿಲಿಯನ್ ಡೋಸ್ಗಳನ್ನು ನೀಡಬೇಕಿದೆ.

ಡಿಸಿಜಿಐ ಮಾಡರ್ನಾವನ್ನು ಅನುಮೋದಿಸಿದೆ. ಅಂದರಂತೆ ಸಿಪ್ಲಾ ಅಮೆರಿಕಾದಿಂದ ಲಸಿಕೆಗಳನ್ನು ಆಮದು ಮಾಡಿಕೊಳ್ಳಲ್ಲಿದೆ. ಆದರೆ ಕಾನೂನು ನಷ್ಟ ಪರಿಹಾರದ ಬಗ್ಗೆ ಇದುವರೆಗೂ ಯಾವುದೇ ನಿರ್ಧಾರವಾಗಿಲ್ಲ.

ಇತ್ತೀಚೆಗೆ, ನೀತಿ ಆಯೋಗದ ಸದಸ್ಯ ಡಾ.ವಿ.ಕೆ ಪಾಲ್, ಮಾತನಾಡಿ, ಮಾತುಕತೆ ಉಪಕ್ರಮವಾಗಿ ಅವರಿಂದ ಯಾವುದೇ ಉತ್ತರ ಬಂದಿಲ್ಲ. ನಾವು ಪ್ರಕ್ರಿಯೆಗಾಗಿ ಕಾಯುತ್ತಿದ್ದೇವೆ. ಸಕಾರಾತ್ಮಕ ಮನಸ್ಸಿನಿಂದ ಮಾತುಕತೆ ನಡೆಯುತ್ತಿದೆ ಎಂದು ಹೇಳಿದರು.

ನಾವು ಅದನ್ನು ಗಳಿಸುವ ಪ್ರಯತ್ನದಲ್ಲಿದ್ದೇವೆ ಆದರೆ ಇದು ಸಂಧಾನದ ಪ್ರಕ್ರಿಯೆಯಾಗಿ ಹಿಂದಕ್ಕೆ ಮತ್ತು ಮುಂದಕ್ಕೆ ಹೋಗುತ್ತಿದೆ ಎಂದು ಡಾ ವಿ ಕೆ ಪಾಲ್ ಎಎನ್‌ಐಗೆ ತಿಳಿಸಿದರು.

ಮಾಡರ್ನಾ ಮತ್ತು ಫಿಜರ್ ನಷ್ಟ ಪರಿಹಾರವನ್ನು ಕೋರಿತ್ತು, ಇದು ಲಸಿಕೆಯ ಯಾವುದೇ ವ್ಯತಿರಿಕ್ತ ಪರಿಣಾಮದ ಸಂದರ್ಭದಲ್ಲಿ ಅವುಗಳನ್ನು ಕಾಯ್ದಿರಿಸಲಾಗುವುದಿಲ್ಲ ಎಂದು ಖಚಿತಪಡಿಸುತ್ತದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!