ಫಿಜರ್ ಬಯೋಂಟೆಕ್ ಲಸಿಕೆ 
ದೇಶ

ಭಾರತದಲ್ಲಿ ಕೋವಿಡ್ ಲಸಿಕೆ ಲೈಸೆನ್ಸ್ ಗಾಗಿ ಫೈಜರ್, ಜಾನ್ಸನ್ ಅಂಡ್ ಜಾನ್ಸನ್ ಇನ್ನೂ ಅರ್ಜಿ ಸಲ್ಲಿಸಿಲ್ಲ: ಮೂಲಗಳು

ತಮ್ಮ ಕೋವಿಡ್ ಲಸಿಕೆ ತುರ್ತು ಬಳಕೆಯ ದೃಢೀಕರಣಕ್ಕಾಗಿ ಅರ್ಜಿ ಸಲ್ಲಿಸುವಂತೆ ಭಾರತೀಯ ಔಷಧ ನಿಯಂತ್ರಕ ಮಹಾಮಂಡಳಿ(ಡಿಸಿಜಿಐ) ಫೈಜರ್, ಜಾನ್ಸನ್ ಅಂಡ್ ಜಾನ್ಸನ್‌ಗೆ ಎರಡೆರಡು ಬಾರಿ ಪತ್ರ ಬರೆಯುವ ಮೂಲಕ ಒತ್ತಾಯಿಸಿದೆ.

ನವದೆಹಲಿ: ತಮ್ಮ ಕೋವಿಡ್ ಲಸಿಕೆ ತುರ್ತು ಬಳಕೆಯ ದೃಢೀಕರಣಕ್ಕಾಗಿ ಅರ್ಜಿ ಸಲ್ಲಿಸುವಂತೆ ಭಾರತೀಯ ಔಷಧ ನಿಯಂತ್ರಕ ಮಹಾಮಂಡಳಿ(ಡಿಸಿಜಿಐ) ಫೈಜರ್, ಜಾನ್ಸನ್ ಅಂಡ್ ಜಾನ್ಸನ್‌ಗೆ ಎರಡೆರಡು ಬಾರಿ ಪತ್ರ ಬರೆಯುವ ಮೂಲಕ ಒತ್ತಾಯಿಸಿದೆ. ಇದರಿಂದಾಗಿ ಅರ್ಜಿಯನ್ನು ಸಮಯಕ್ಕೆ ಸರಿಯಾಗಿ ಪ್ರಕ್ರಿಯೆಗೊಳಿಸಲಾಗುತ್ತದೆ ಆದರೆ ಫಾರ್ಮಾ ಕಂಪನಿಗಳು ಪರವಾನಗಿಗಾಗಿ ಇನ್ನೂ ಅರ್ಜಿ ಸಲ್ಲಿಸಿಲ್ಲ.

ಎಎನ್‌ಐ ಮೂಲಗಳ ಪ್ರಕಾರ, ಔಷಧ ನಿಯಂತ್ರಕರು ಅವರೊಂದಿಗೆ ಮಾತನಾಡುತ್ತಿದ್ದು ಫಾರ್ಮಾ ಕಂಪನಿಗಳು ಅದರ ಮೇಲೆ ಕೆಲಸ ಮಾಡುತ್ತಿರುವುದಾಗಿ ಹೇಳಿರುವುದಾಗಿ ಮೂಲಗಳು ತಿಳಿಸಿವೆ. 

ಮತ್ತೊಂದು ದೈತ್ಯ ಫಾರ್ಮಾ ಕಂಪನಿ ಮಾಡರ್ನಾ ಕೋವಾಕ್ಸ್ ಅಡಿಯಲ್ಲಿ ಅಮೆರಿಕಾದಿಂದ ಭಾರತಕ್ಕೆ ಏಳು ಮಿಲಿಯನ್ ಡೋಸ್ಗಳನ್ನು ನೀಡಬೇಕಿದೆ.

ಡಿಸಿಜಿಐ ಮಾಡರ್ನಾವನ್ನು ಅನುಮೋದಿಸಿದೆ. ಅಂದರಂತೆ ಸಿಪ್ಲಾ ಅಮೆರಿಕಾದಿಂದ ಲಸಿಕೆಗಳನ್ನು ಆಮದು ಮಾಡಿಕೊಳ್ಳಲ್ಲಿದೆ. ಆದರೆ ಕಾನೂನು ನಷ್ಟ ಪರಿಹಾರದ ಬಗ್ಗೆ ಇದುವರೆಗೂ ಯಾವುದೇ ನಿರ್ಧಾರವಾಗಿಲ್ಲ.

ಇತ್ತೀಚೆಗೆ, ನೀತಿ ಆಯೋಗದ ಸದಸ್ಯ ಡಾ.ವಿ.ಕೆ ಪಾಲ್, ಮಾತನಾಡಿ, ಮಾತುಕತೆ ಉಪಕ್ರಮವಾಗಿ ಅವರಿಂದ ಯಾವುದೇ ಉತ್ತರ ಬಂದಿಲ್ಲ. ನಾವು ಪ್ರಕ್ರಿಯೆಗಾಗಿ ಕಾಯುತ್ತಿದ್ದೇವೆ. ಸಕಾರಾತ್ಮಕ ಮನಸ್ಸಿನಿಂದ ಮಾತುಕತೆ ನಡೆಯುತ್ತಿದೆ ಎಂದು ಹೇಳಿದರು.

ನಾವು ಅದನ್ನು ಗಳಿಸುವ ಪ್ರಯತ್ನದಲ್ಲಿದ್ದೇವೆ ಆದರೆ ಇದು ಸಂಧಾನದ ಪ್ರಕ್ರಿಯೆಯಾಗಿ ಹಿಂದಕ್ಕೆ ಮತ್ತು ಮುಂದಕ್ಕೆ ಹೋಗುತ್ತಿದೆ ಎಂದು ಡಾ ವಿ ಕೆ ಪಾಲ್ ಎಎನ್‌ಐಗೆ ತಿಳಿಸಿದರು.

ಮಾಡರ್ನಾ ಮತ್ತು ಫಿಜರ್ ನಷ್ಟ ಪರಿಹಾರವನ್ನು ಕೋರಿತ್ತು, ಇದು ಲಸಿಕೆಯ ಯಾವುದೇ ವ್ಯತಿರಿಕ್ತ ಪರಿಣಾಮದ ಸಂದರ್ಭದಲ್ಲಿ ಅವುಗಳನ್ನು ಕಾಯ್ದಿರಿಸಲಾಗುವುದಿಲ್ಲ ಎಂದು ಖಚಿತಪಡಿಸುತ್ತದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT