ಫಿಜರ್ ಬಯೋಂಟೆಕ್ ಲಸಿಕೆ 
ದೇಶ

ಭಾರತದಲ್ಲಿ ಕೋವಿಡ್ ಲಸಿಕೆ ಲೈಸೆನ್ಸ್ ಗಾಗಿ ಫೈಜರ್, ಜಾನ್ಸನ್ ಅಂಡ್ ಜಾನ್ಸನ್ ಇನ್ನೂ ಅರ್ಜಿ ಸಲ್ಲಿಸಿಲ್ಲ: ಮೂಲಗಳು

ತಮ್ಮ ಕೋವಿಡ್ ಲಸಿಕೆ ತುರ್ತು ಬಳಕೆಯ ದೃಢೀಕರಣಕ್ಕಾಗಿ ಅರ್ಜಿ ಸಲ್ಲಿಸುವಂತೆ ಭಾರತೀಯ ಔಷಧ ನಿಯಂತ್ರಕ ಮಹಾಮಂಡಳಿ(ಡಿಸಿಜಿಐ) ಫೈಜರ್, ಜಾನ್ಸನ್ ಅಂಡ್ ಜಾನ್ಸನ್‌ಗೆ ಎರಡೆರಡು ಬಾರಿ ಪತ್ರ ಬರೆಯುವ ಮೂಲಕ ಒತ್ತಾಯಿಸಿದೆ.

ನವದೆಹಲಿ: ತಮ್ಮ ಕೋವಿಡ್ ಲಸಿಕೆ ತುರ್ತು ಬಳಕೆಯ ದೃಢೀಕರಣಕ್ಕಾಗಿ ಅರ್ಜಿ ಸಲ್ಲಿಸುವಂತೆ ಭಾರತೀಯ ಔಷಧ ನಿಯಂತ್ರಕ ಮಹಾಮಂಡಳಿ(ಡಿಸಿಜಿಐ) ಫೈಜರ್, ಜಾನ್ಸನ್ ಅಂಡ್ ಜಾನ್ಸನ್‌ಗೆ ಎರಡೆರಡು ಬಾರಿ ಪತ್ರ ಬರೆಯುವ ಮೂಲಕ ಒತ್ತಾಯಿಸಿದೆ. ಇದರಿಂದಾಗಿ ಅರ್ಜಿಯನ್ನು ಸಮಯಕ್ಕೆ ಸರಿಯಾಗಿ ಪ್ರಕ್ರಿಯೆಗೊಳಿಸಲಾಗುತ್ತದೆ ಆದರೆ ಫಾರ್ಮಾ ಕಂಪನಿಗಳು ಪರವಾನಗಿಗಾಗಿ ಇನ್ನೂ ಅರ್ಜಿ ಸಲ್ಲಿಸಿಲ್ಲ.

ಎಎನ್‌ಐ ಮೂಲಗಳ ಪ್ರಕಾರ, ಔಷಧ ನಿಯಂತ್ರಕರು ಅವರೊಂದಿಗೆ ಮಾತನಾಡುತ್ತಿದ್ದು ಫಾರ್ಮಾ ಕಂಪನಿಗಳು ಅದರ ಮೇಲೆ ಕೆಲಸ ಮಾಡುತ್ತಿರುವುದಾಗಿ ಹೇಳಿರುವುದಾಗಿ ಮೂಲಗಳು ತಿಳಿಸಿವೆ. 

ಮತ್ತೊಂದು ದೈತ್ಯ ಫಾರ್ಮಾ ಕಂಪನಿ ಮಾಡರ್ನಾ ಕೋವಾಕ್ಸ್ ಅಡಿಯಲ್ಲಿ ಅಮೆರಿಕಾದಿಂದ ಭಾರತಕ್ಕೆ ಏಳು ಮಿಲಿಯನ್ ಡೋಸ್ಗಳನ್ನು ನೀಡಬೇಕಿದೆ.

ಡಿಸಿಜಿಐ ಮಾಡರ್ನಾವನ್ನು ಅನುಮೋದಿಸಿದೆ. ಅಂದರಂತೆ ಸಿಪ್ಲಾ ಅಮೆರಿಕಾದಿಂದ ಲಸಿಕೆಗಳನ್ನು ಆಮದು ಮಾಡಿಕೊಳ್ಳಲ್ಲಿದೆ. ಆದರೆ ಕಾನೂನು ನಷ್ಟ ಪರಿಹಾರದ ಬಗ್ಗೆ ಇದುವರೆಗೂ ಯಾವುದೇ ನಿರ್ಧಾರವಾಗಿಲ್ಲ.

ಇತ್ತೀಚೆಗೆ, ನೀತಿ ಆಯೋಗದ ಸದಸ್ಯ ಡಾ.ವಿ.ಕೆ ಪಾಲ್, ಮಾತನಾಡಿ, ಮಾತುಕತೆ ಉಪಕ್ರಮವಾಗಿ ಅವರಿಂದ ಯಾವುದೇ ಉತ್ತರ ಬಂದಿಲ್ಲ. ನಾವು ಪ್ರಕ್ರಿಯೆಗಾಗಿ ಕಾಯುತ್ತಿದ್ದೇವೆ. ಸಕಾರಾತ್ಮಕ ಮನಸ್ಸಿನಿಂದ ಮಾತುಕತೆ ನಡೆಯುತ್ತಿದೆ ಎಂದು ಹೇಳಿದರು.

ನಾವು ಅದನ್ನು ಗಳಿಸುವ ಪ್ರಯತ್ನದಲ್ಲಿದ್ದೇವೆ ಆದರೆ ಇದು ಸಂಧಾನದ ಪ್ರಕ್ರಿಯೆಯಾಗಿ ಹಿಂದಕ್ಕೆ ಮತ್ತು ಮುಂದಕ್ಕೆ ಹೋಗುತ್ತಿದೆ ಎಂದು ಡಾ ವಿ ಕೆ ಪಾಲ್ ಎಎನ್‌ಐಗೆ ತಿಳಿಸಿದರು.

ಮಾಡರ್ನಾ ಮತ್ತು ಫಿಜರ್ ನಷ್ಟ ಪರಿಹಾರವನ್ನು ಕೋರಿತ್ತು, ಇದು ಲಸಿಕೆಯ ಯಾವುದೇ ವ್ಯತಿರಿಕ್ತ ಪರಿಣಾಮದ ಸಂದರ್ಭದಲ್ಲಿ ಅವುಗಳನ್ನು ಕಾಯ್ದಿರಿಸಲಾಗುವುದಿಲ್ಲ ಎಂದು ಖಚಿತಪಡಿಸುತ್ತದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT