ನ್ಯಾಯಮೂರ್ತಿ ಎನ್ ವಿ ರಮಣ 
ದೇಶ

ಸ್ವಾತಂತ್ರ್ಯದ 75 ವರ್ಷಗಳು ಕಳೆದರೂ "ವಸಾಹತುಶಾಹಿ"ಯ ದೇಶದ್ರೋಹದ ಕಾನೂನು ಇನ್ನೂ ಏಕಿದೆ?: ಕೇಂದ್ರಕ್ಕೆ ಸುಪ್ರೀಂ

ದೇಶದ್ರೋಹದ ಕಾನೂನು ಇನ್ನೂ ಅಸ್ತಿತ್ವದಲ್ಲಿರುವುದರ ಕುರಿತು ಕೇಂದ್ರ ಸರ್ಕಾರವನ್ನು ಸುಪ್ರೀಂ ಕೋರ್ಟ್ ಪ್ರಶ್ನಿಸಿದೆ. 

ನವದೆಹಲಿ: ದೇಶದ್ರೋಹದ ಕಾನೂನು ಇನ್ನೂ ಅಸ್ತಿತ್ವದಲ್ಲಿರುವುದರ ಕುರಿತು ಕೇಂದ್ರ ಸರ್ಕಾರವನ್ನು ಸುಪ್ರೀಂ ಕೋರ್ಟ್ ಪ್ರಶ್ನಿಸಿದೆ. 

"ಸ್ವಾತಂತ್ರ್ಯ ಹೋರಾಟಗಾರರ ವಿರುದ್ಧ ಬಳಕೆ ಮಾಡಲಾಗುತ್ತಿದ್ದ ವಸಾಹತುಶಾಹಿ ಕಾನೂನು ಅದಾಗಿದ್ದು, ದೇಶಕ್ಕೆ ಸ್ವಾತಂತ್ರ್ಯ ಬಂದ 75 ವರ್ಷಗಳೇ ಕಳೆದರೂ ಆ ಕಾನೂನನ್ನು ಇನ್ನೂ ಏಕೆ ರದ್ದುಗೊಳಿಸಿಲ್ಲ ಎಂದು ಸಿಜೆಐ ಎನ್ ವಿ ರಮಣ ಅವರು ಕೇಂದ್ರ ಸರ್ಕಾರವನ್ನು ಪ್ರಶ್ನಿಸಿದ್ದಾರೆ.

ಹಳೆಯದಾದ ಹಲವು ಕಾನೂನುಗಳನ್ನು ನಿಮ್ಮ ಸರ್ಕಾರ ರದ್ದುಗೊಳಿಸಿದೆ, ಆದರೆ ದೇಶದ್ರೋಹದ ಆರೋಪ ಹೊರಿಸಬಹುದಾದ ಐಪಿಸಿ ಸೆಕ್ಷನ್ 124A ನ್ನು ರದ್ದುಗೊಳಿಸುವುದಕ್ಕೆ ಏಕೆ ಗಮನಹರಿಸುತ್ತಿಲ್ಲ ಎಂಬುದು ತಿಳಿಯುತ್ತಿಲ್ಲ ಎಂದು ಅಟಾರ್ನಿ ಜನರಲ್ ಕೆಕೆ ವೇಣುಗೋಪಾಲ್ ಅವರನ್ನು ನ್ಯಾ.ಎನ್.ವಿ ರಮಣ ಪ್ರಶ್ನಿಸಿದ್ದಾರೆ.

ದೇಶದ್ರೋಹದ ಕಾನೂನು ವಸಾಹತುಶಾಹಿ ಕಾನೂನು. ಬ್ರಿಟಿಷರು ಇದೇ ಕಾನೂನನ್ನು ಬಳಸಿ ಮಹಾತ್ಮಾ ಗಾಂಧಿ, ಬಾಲಗಂಗಾಧರ ತಿಲಕ್ ಮುಂತಾದ ಸ್ವಾತಂತ್ರ್ಯ ಹೋರಾಟಗಾರರ ವಿರುದ್ಧ ಬಳಸುತ್ತಿದ್ದರು, ಈ ಮೂಲಕವೇ ದೇಶದ ಸ್ವಾತಂತ್ರ್ಯ ಹೋರಾಟವನ್ನು ಹತ್ತಿಕ್ಕುತ್ತಿದ್ದರು.

ಸೆಕ್ಷನ್ 124A ನ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿದ್ದ ಅರ್ಜಿಯನ್ನು ಪರಿಗಣಿಸುವುದಾಗಿ ಸಿಜೆಐ ಹೇಳಿದ್ದಾರೆ. "ತಳಮಟ್ಟದಲ್ಲಿ ಪರಿಸ್ಥಿತಿ ಹದಗೆಟ್ಟಿದೆ. ಒಂದು ಪಕ್ಷಕ್ಕೆ ಮತ್ತೊಂದು ಪಕ್ಷ ಹೇಳುತ್ತಿರುವುದು ಇಷ್ಟವಾಗದೇ ಇದ್ದರೆ 124A ಸೆಕ್ಷನ್ ನ್ನು ಬಳಕೆ ಮಾಡಲಾಗುತ್ತಿದೆ. ಪಕ್ಷಗಳು, ವ್ಯಕ್ತಿಗಳು ಕಾರ್ಯನಿರ್ವಹಿಸುವುದಕ್ಕೆ ಇದು ಗಂಭೀರವಾದ ವಿಪತ್ತು ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal floods: ಸಾವಿನ ಸಂಖ್ಯೆ 157ಕ್ಕೇರಿಕೆ, 750ಕ್ಕೂ ಅಧಿಕ ಮಂದಿ ನಾಪತ್ತೆ, ನೇಪಾಳಕ್ಕೆ ಭಾರತ ನೆರವು! ಸಹಾಯವಾಣಿ ಬಿಡುಗಡೆ

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

ನೇಪಾಳ ಪ್ರವಾಹ: ಭಾರತಕ್ಕೆ ದೊಡ್ಡ ಆತಂಕವಿಲ್ಲ, ಜಲಾಶಯಗಳ ನೀರಿನ ಮಟ್ಟ ಇಳಿಕೆ: ಕೇಂದ್ರ ಸ್ಪಷ್ಟನೆ

Sugar Price: ಈರುಳ್ಳಿ ಬೆನ್ನಲ್ಲೇ ಇದೀಗ ಸಕ್ಕರೆ ಶಾಕ್: ಕೆಜಿಗೆ 65 ರೂ ದಾಟಿದ ದರ, ಗ್ರಾಹಕರ ಜೇಬಿಗೆ 'ಸಿಹಿ ಕಹಿ'!

2nd Test: ಬೌಂಡರಿ ಲೈನ್ ಬಳಿ ದುರ್ವರ್ತನೆ ತೋರಿದ್ದ ಲಂಕಾ ಆಟಗಾರ Prabath Jayasuriyaಗೆ ಬರೆ ಹಾಕಿದ ICC!