ಬಾಲಕನಿಂದ ಸ್ವಾಬ್ ಸಂಗ್ರಹಿಸುತ್ತಿರುವ ಆರೋಗ್ಯ ಕಾರ್ಯಕರ್ತರು 
ದೇಶ

ಪ್ರಯಾಣಿಕರಿಗೆ ಆರ್ ಟಿ- ಪಿಸಿಆರ್ ವರದಿಯಿಂದ ವಿನಾಯಿತಿ ನೀಡಿದ ಮಹಾರಾಷ್ಟ್ರ ಸರ್ಕಾರ

ಕೋವಿಡ್ -19 ಲಸಿಕೆಯ ಎರಡು ಡೋಸ್ ಪಡೆದಂತಹ ಜನರು ರಾಜ್ಯಕ್ಕೆ ಭೇಟಿ ನೀಡಲು ನೆಗೆಟಿವ್ ಆರ್ ಟಿ- ಪಿಸಿಆರ್ ಪರೀಕ್ಷಾ ವರದಿಯಿಂದ ವಿನಾಯಿತಿಯನ್ನು ಮಹಾರಾಷ್ಟ್ರ ಸರ್ಕಾರ ನೀಡಿದೆ. ಆದಾಗ್ಯೂ, ರಾಜ್ಯಕ್ಕೆ ಬರುವ ಮುನ್ನ ಎರಡನೇ ಡೋಸ್ ಪಡೆದು 15 ದಿನಗಳ ಅಂತರವಿರಬೇಕು.

ಮುಂಬೈ:  ಕೋವಿಡ್ -19 ಲಸಿಕೆಯ ಎರಡು ಡೋಸ್ ಪಡೆದಂತಹ ಜನರು ರಾಜ್ಯಕ್ಕೆ ಭೇಟಿ ನೀಡಲು ನೆಗೆಟಿವ್ ಆರ್ ಟಿ- ಪಿಸಿಆರ್ ಪರೀಕ್ಷಾ ವರದಿಯಿಂದ ವಿನಾಯಿತಿಯನ್ನು ಮಹಾರಾಷ್ಟ್ರ ಸರ್ಕಾರ ನೀಡಿದೆ. ಆದಾಗ್ಯೂ, ರಾಜ್ಯಕ್ಕೆ ಬರುವ ಮುನ್ನ ಎರಡನೇ ಡೋಸ್ ಪಡೆದು 15 ದಿನಗಳ ಅಂತರವಿರಬೇಕು.

ಗುರುವಾರ ತಡರಾತ್ರಿ ಮಹಾರಾಷ್ಟ್ರದ ಮುಖ್ಯ ಕಾರ್ಯದರ್ಶಿ ಸೀತಾರಾಮ್ ಕುಂಟೆ ಈ ಆದೇಶವನ್ನು ಘೋಷಿಸಿದ್ದಾರೆ. ರಾಜ್ಯಕ್ಕೆ ಭೇಟಿ ನೀಡುವವರು ಕೋವಿಡ್-19 ಲಸಿಕೆಯ ಎರಡು ಡೋಸ್ ಗಳನ್ನು ಪಡೆದಿರಬೇಕು, ಎರಡನೇ ಡೋಸ್ ಪಡೆದು 15 ದಿನಗಳ ಅಂತರವಿರಬೇಕು. ಅಂತಹ ವ್ಯಕ್ತಿಯು ಕೋವಿನ್ ಪೋರ್ಟಲ್ ಮೂಲಕ ನೀಡುವ ಅಂತಿಮ ವ್ಯಾಕ್ಸಿನೇಷನ್ ಪ್ರಮಾಣಪತ್ರವನ್ನು ಹೊಂದಿರಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಅಂತಹ ವ್ಯಕ್ತಿಗಳು ರಾಜ್ಯಕ್ಕೆ ಭೇಟಿ ನೀಡಲು ಕಡ್ಡಾಯವಾಗಿ ನೆಗೆಟಿವ್ ಆರ್ ಟಿ- ಪಿಸಿಆರ್ ವರದಿಯನ್ನು ತೋರಿಸಬೇಕಾದ ಅಗತ್ಯವಿರುವುದಿಲ್ಲ, ಇದು ದೇಶಿಯ ಹಾಗೂ ಅಂತಾರಾಷ್ಟ್ರೀಯ ಪ್ರಯಾಣಿಕರಿಗೆ ಅನ್ವಯವಾಗಲಿದೆ ಎಂದು ಹೇಳಲಾಗಿದೆ. 

ಈ ವಿನಾಯಿತಿ ಆದೇಶದ ಹೊರತಾಗಿಯೂ ಎಲ್ಲಾ ಪ್ರಯಾಣಿಕರು ಕಡ್ಡಾಯವಾಗಿ ಕೋವಿಡ್ ನಿಯಮಗಳನ್ನು ಎಲ್ಲಾ ವೇಳೆಯಲ್ಲೂ ಪಾಲಿಸಬೇಕು ಎಂದು ಆದೇಶದಲ್ಲಿ ಹೇಳಲಾಗಿದೆ. ಇತರ ಎಲ್ಲ ವ್ಯಕ್ತಿಗಳಿಗೆ ಆರ್‌ಟಿ-ಪಿಸಿಆರ್ ಪರೀಕ್ಷೆಯ ಮಾನ್ಯತೆಯು  48 ಗಂಟೆಗಳ ಬದಲು 72 ಗಂಟೆಗಳಿರುತ್ತದೆ ಎಂದು ಅದು ಹೇಳಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

2nd test, Day 2: 2ನೇ ದಿನದಾಟದ ಆರಂಭದಲ್ಲೇ ಭಾರತಕ್ಕೆ ಆಘಾತ, ಭೋಜನ ವಿರಾಮದ ವೇಳೆಗೆ 427/4

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

SCROLL FOR NEXT