ಸಂಗ್ರಹ ಚಿತ್ರ 
ದೇಶ

ಇಡಿ ಅಧಿಕಾರಿಯಂತೆ ನಟಿಸಿ ಟಿಎಂಸಿ ಸಂಸದನಿಗೆ ವಂಚಿಸಲು ಯತ್ನಿಸಿದ್ದ ವ್ಯಕ್ತಿ ಅರೆಸ್ಟ್

ಜಾರಿ ನಿರ್ದೇಶನಾಲಯದ ಅಧಿಕಾರಿಯಾಗಿ ನಟಿಸಿ ತೃಣಮೂಲ ಕಾಂಗ್ರೆಸ್ ಸಂಸದ ಶಂತನು ನು ಸೇನ್ ಅವರಿಗೆ ಹಣದ ಬದಲಾಗಿ ಏಜೆನ್ಸಿಯಲ್ಲಿ ದಾಖಲಾದ ಹಲವಾರು ಪ್ರಕರಣಗಳನ್ನು ನಿಭಾಯಿಸಲು ನೆರವಾದ ಆರೋಪದ ಮೇಲೆ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಕೋಲ್ಕತ್ತಾ ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.

ಕೋಲ್ಕತ್ತಾ: ಜಾರಿ ನಿರ್ದೇಶನಾಲಯದ ಅಧಿಕಾರಿಯಾಗಿ ನಟಿಸಿ ತೃಣಮೂಲ ಕಾಂಗ್ರೆಸ್ ಸಂಸದ ಶಂತನು ಸೇನ್ ಅವರಿಗೆ ಹಣದ ಬದಲಾಗಿ ಏಜೆನ್ಸಿಯಲ್ಲಿ ದಾಖಲಾದ ಹಲವಾರು ಪ್ರಕರಣಗಳನ್ನು ನಿಭಾಯಿಸಲು ನೆರವಾದ ಆರೋಪದ ಮೇಲೆ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಕೋಲ್ಕತ್ತಾ ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.

ಎಸ್ಪ್ಲನಡೆ ಬಸ್ ಟರ್ಮಿನಸ್ನಲ್ಲಿದ್ದ ಆರೋಪಿಯನ್ನು ಚಂದನ್ ರಾಯ್ (38) ಎಂದು ಗುರುತಿಸಲಾಗಿದೆ. ಆತ ಡಮ್ ಡಮ್ ಪ್ರದೇಶದ ನಿವಾಸಿ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

"ಸಂಸದರಿಗೆ ಅಪರಿಚಿತ ಸಂಖ್ಯೆಯಿಂದ ಕರೆ ಮಾಡಿ ಇಡಿ ಅಧಿಕಾರಿಯಾಗಿ ನಟಿಸಿದ ಆರೋಪಿ ಕೇಂದ್ರ ಏಜೆನ್ಸಿಯಲ್ಲಿ ದಾಖಲಾದ ಹಲವಾರು ಪ್ರಕರಣಗಳ ಸಂಬಂಧ ನೆರವಾಗಿದ್ದಾನೆ. ಒಮ್ಮೆ ಸಂಸದ ಸೇನ್ ಸಂಶಯ ವ್ಯಕ್ತಪಡಿಸಿದ್ದು ಲಾಲ್ ಬಜಾರ್ ನಲ್ಲಿರುವ ನಮ್ಮ ಅಧಿಕಾರಿಗಳನ್ನು ಸಂಪರ್ಕಿಸಿದರು. ದೂರಿನ ಮೇರೆಗೆ, ನಾವು ಫೋನ್ ಸಂಖ್ಯೆಯನ್ನು ಪತ್ತೆಹಚ್ಚಲು ಪ್ರಾರಂಭಿಸಿದ್ದೇವೆ ಮತ್ತು ವ್ಯಕ್ತಿಯ ವಿವರಗಳನ್ನು ಪತ್ತೆಹಚ್ಚಿದ್ದೇವೆ" ಎಂದು ಅವರು ಹೇಳಿದರು.

ಕರೇಯಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಗಾಗಿ ಬಲೆ ಬೀಸಿ ಎಸ್ಪ್ಲನಡೆ ಪ್ರದೇಶದ 12 ಬಿ ಬಸ್ ನಿಲ್ದಾಣದಿಂದ ವ್ಯಕ್ತಿಯನ್ನು ಬಂಧಿಸಿದ್ದಾರೆ. ಟಿಎಂಸಿ ರಾಜ್ಯಸಭಾ ಸಂಸದರಿಗೆ ಕರೆ ಮಾಡಲು ಬಳಸುತ್ತಿದ್ದ ಮೊಬೈಲ್ ಫೋನ್ ಅನ್ನು ವಶಪಡಿಸಿಕೊಳ್ಳಲಾಗಿದೆ.

"ಈ ವ್ಯಕ್ತಿಯು ಇತರ ಹಲವಾರು ಜನರನ್ನು ಇದೇ ರೀತಿ ಬ್ಲ್ಯಾಕ್ ಮೇಲ್ ಮಾಡಲು ಪ್ರಯತ್ನಿಸಿದ್ದಾನೆ. ಅವನ ವಿರುದ್ಧ ಇತರ ದೂರುಗಳು ಬಂದಿವೆ ಎಂದು ನಾವು ಪತ್ತೆ ಮಾಡಿದ್ದೇವೆ" ಅಧಿಕಾರಿಗಳು ಹೇಳಿದ್ದಾರೆ.

ಕೋಲ್ಕತ್ತಾ ಮುನ್ಸಿಪಲ್ ಕಾರ್ಪೊರೇಶನ್‌ನ ಜಂಟಿ ಆಯುಕ್ತರಾಗಿ ಮಾಸ್ಕ್ವೆರೇಡಿಂಗ್ ಮತ್ತು ನಗರದಲ್ಲಿ ಸಂಶಯಾಸ್ಪದ ಲಸಿಕೆ ಶಿಬಿರಗಳನ್ನು ಆಯೋಜಿಸಿದ್ದಕ್ಕಾಗಿ 28 ವರ್ಷದ ವ್ಯಕ್ತಿಯನ್ನು ಬಂಧಿಸಿದ ಎರಡು ವಾರಗಳ ನಂತರ ಈ ಬೆಳವಣಿಗೆ ನಡೆದಿದೆ. ಅಲ್ಲಿ ಟಿಎಂಸಿ ಸಂಸದೆ ಮಿಮಿ ಚಕ್ರವರ್ತಿ ಸೇರಿದಂತೆ ಹಲವಾರು ಜನರಿಗೆ ನಕಲಿ ಲಸಿಕೆಯನ್ನು ನೀಡಲಾಗಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

SCROLL FOR NEXT