ಸಂಗ್ರಹ ಚಿತ್ರ 
ದೇಶ

ಇಡಿ ಅಧಿಕಾರಿಯಂತೆ ನಟಿಸಿ ಟಿಎಂಸಿ ಸಂಸದನಿಗೆ ವಂಚಿಸಲು ಯತ್ನಿಸಿದ್ದ ವ್ಯಕ್ತಿ ಅರೆಸ್ಟ್

ಜಾರಿ ನಿರ್ದೇಶನಾಲಯದ ಅಧಿಕಾರಿಯಾಗಿ ನಟಿಸಿ ತೃಣಮೂಲ ಕಾಂಗ್ರೆಸ್ ಸಂಸದ ಶಂತನು ನು ಸೇನ್ ಅವರಿಗೆ ಹಣದ ಬದಲಾಗಿ ಏಜೆನ್ಸಿಯಲ್ಲಿ ದಾಖಲಾದ ಹಲವಾರು ಪ್ರಕರಣಗಳನ್ನು ನಿಭಾಯಿಸಲು ನೆರವಾದ ಆರೋಪದ ಮೇಲೆ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಕೋಲ್ಕತ್ತಾ ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.

ಕೋಲ್ಕತ್ತಾ: ಜಾರಿ ನಿರ್ದೇಶನಾಲಯದ ಅಧಿಕಾರಿಯಾಗಿ ನಟಿಸಿ ತೃಣಮೂಲ ಕಾಂಗ್ರೆಸ್ ಸಂಸದ ಶಂತನು ಸೇನ್ ಅವರಿಗೆ ಹಣದ ಬದಲಾಗಿ ಏಜೆನ್ಸಿಯಲ್ಲಿ ದಾಖಲಾದ ಹಲವಾರು ಪ್ರಕರಣಗಳನ್ನು ನಿಭಾಯಿಸಲು ನೆರವಾದ ಆರೋಪದ ಮೇಲೆ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಕೋಲ್ಕತ್ತಾ ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.

ಎಸ್ಪ್ಲನಡೆ ಬಸ್ ಟರ್ಮಿನಸ್ನಲ್ಲಿದ್ದ ಆರೋಪಿಯನ್ನು ಚಂದನ್ ರಾಯ್ (38) ಎಂದು ಗುರುತಿಸಲಾಗಿದೆ. ಆತ ಡಮ್ ಡಮ್ ಪ್ರದೇಶದ ನಿವಾಸಿ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

"ಸಂಸದರಿಗೆ ಅಪರಿಚಿತ ಸಂಖ್ಯೆಯಿಂದ ಕರೆ ಮಾಡಿ ಇಡಿ ಅಧಿಕಾರಿಯಾಗಿ ನಟಿಸಿದ ಆರೋಪಿ ಕೇಂದ್ರ ಏಜೆನ್ಸಿಯಲ್ಲಿ ದಾಖಲಾದ ಹಲವಾರು ಪ್ರಕರಣಗಳ ಸಂಬಂಧ ನೆರವಾಗಿದ್ದಾನೆ. ಒಮ್ಮೆ ಸಂಸದ ಸೇನ್ ಸಂಶಯ ವ್ಯಕ್ತಪಡಿಸಿದ್ದು ಲಾಲ್ ಬಜಾರ್ ನಲ್ಲಿರುವ ನಮ್ಮ ಅಧಿಕಾರಿಗಳನ್ನು ಸಂಪರ್ಕಿಸಿದರು. ದೂರಿನ ಮೇರೆಗೆ, ನಾವು ಫೋನ್ ಸಂಖ್ಯೆಯನ್ನು ಪತ್ತೆಹಚ್ಚಲು ಪ್ರಾರಂಭಿಸಿದ್ದೇವೆ ಮತ್ತು ವ್ಯಕ್ತಿಯ ವಿವರಗಳನ್ನು ಪತ್ತೆಹಚ್ಚಿದ್ದೇವೆ" ಎಂದು ಅವರು ಹೇಳಿದರು.

ಕರೇಯಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಗಾಗಿ ಬಲೆ ಬೀಸಿ ಎಸ್ಪ್ಲನಡೆ ಪ್ರದೇಶದ 12 ಬಿ ಬಸ್ ನಿಲ್ದಾಣದಿಂದ ವ್ಯಕ್ತಿಯನ್ನು ಬಂಧಿಸಿದ್ದಾರೆ. ಟಿಎಂಸಿ ರಾಜ್ಯಸಭಾ ಸಂಸದರಿಗೆ ಕರೆ ಮಾಡಲು ಬಳಸುತ್ತಿದ್ದ ಮೊಬೈಲ್ ಫೋನ್ ಅನ್ನು ವಶಪಡಿಸಿಕೊಳ್ಳಲಾಗಿದೆ.

"ಈ ವ್ಯಕ್ತಿಯು ಇತರ ಹಲವಾರು ಜನರನ್ನು ಇದೇ ರೀತಿ ಬ್ಲ್ಯಾಕ್ ಮೇಲ್ ಮಾಡಲು ಪ್ರಯತ್ನಿಸಿದ್ದಾನೆ. ಅವನ ವಿರುದ್ಧ ಇತರ ದೂರುಗಳು ಬಂದಿವೆ ಎಂದು ನಾವು ಪತ್ತೆ ಮಾಡಿದ್ದೇವೆ" ಅಧಿಕಾರಿಗಳು ಹೇಳಿದ್ದಾರೆ.

ಕೋಲ್ಕತ್ತಾ ಮುನ್ಸಿಪಲ್ ಕಾರ್ಪೊರೇಶನ್‌ನ ಜಂಟಿ ಆಯುಕ್ತರಾಗಿ ಮಾಸ್ಕ್ವೆರೇಡಿಂಗ್ ಮತ್ತು ನಗರದಲ್ಲಿ ಸಂಶಯಾಸ್ಪದ ಲಸಿಕೆ ಶಿಬಿರಗಳನ್ನು ಆಯೋಜಿಸಿದ್ದಕ್ಕಾಗಿ 28 ವರ್ಷದ ವ್ಯಕ್ತಿಯನ್ನು ಬಂಧಿಸಿದ ಎರಡು ವಾರಗಳ ನಂತರ ಈ ಬೆಳವಣಿಗೆ ನಡೆದಿದೆ. ಅಲ್ಲಿ ಟಿಎಂಸಿ ಸಂಸದೆ ಮಿಮಿ ಚಕ್ರವರ್ತಿ ಸೇರಿದಂತೆ ಹಲವಾರು ಜನರಿಗೆ ನಕಲಿ ಲಸಿಕೆಯನ್ನು ನೀಡಲಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal Floods: ಸಾವಿನ ಸಂಖ್ಯೆ 359ಕ್ಕೆ ಏರಿಕೆ; 288 ಭಾರತೀಯರು ಸೇರಿ 826 ಮಂದಿ ನಾಪತ್ತೆ; ಮತ್ತೆ ಪ್ರವಾಹ ಭೀತಿ! ಹೊಸ ಸರೋವರ ಪತ್ತೆ!

Nepal floods: ನೇಪಾಳ ಪ್ರವಾಹದ ಭೀಕರತೆ, 150 ಕಿ.ಮೀ ದೂರದ ಉತ್ತರ ಪ್ರದೇಶಕ್ಕೆ ಕೊಚ್ಚಿಕೊಂಡು ಬಂದ ಶವಗಳು!

Nepal Floods: ‘ಸಾವಿನ ಸಂಖ್ಯೆ ಊಹೆಗೂ ನಿಲುಕದಷ್ಟು ಏರಬಹುದು’; ಚೀನಾ ನಡೆ ಕುರಿತು ನೇಪಾಳ ಮಾಜಿ ಸಚಿವರ ಅನುಮಾನ!

RSS ಪಥಸಂಚಲನದಲ್ಲಿ ಭಾಗಿ: ಯಾದಗಿರಿಯ ಇಬ್ಬರು ಸರ್ಕಾರಿ ಶಿಕ್ಷಕರ ಅಮಾನತು

ಮಣಿಪುರದಲ್ಲಿ ಉಗ್ರರ ಅಟ್ಟಹಾಸ: ನಾಲ್ವರ ಸಾವು, ಒಬ್ಬ ನಾಪತ್ತೆ