ನವಜೋತ್ ಸಿಂಗ್ ಸಿಧು 
ದೇಶ

ಪಂಜಾಬ್ ರಾಜಕೀಯ ಬೇಗುದಿ ಉಲ್ಬಣ: ಸೋನಿಯಾ, ರಾಹುಲ್ ಗಾಂಧಿ ಭೇಟಿ ಮಾಡಿದ ನವಜೋತ್ ಸಿಂಗ್ ಸಿಧು

ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಜೊತೆಗಿನ ಭಿನ್ನಾಭಿಪ್ರಾಯದ ನಂತರ ಕಾಂಗ್ರೆಸ್ ನಾಯಕ ನವಜೋತ್ ಸಿಂಗ್ ಸಿದು ಇಂದು ದೆಹಲಿಯಲ್ಲಿ ಸೋನಿಯಾ ಮತ್ತು ರಾಹುಲ್ ಗಾಂಧಿಯನ್ನು ಭೇಟಿ ಮಾಡಿದ್ದಾರೆ.

ನವದೆಹಲಿ: ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಜೊತೆಗಿನ ಭಿನ್ನಾಭಿಪ್ರಾಯದ ನಂತರ ಕಾಂಗ್ರೆಸ್ ನಾಯಕ ನವಜೋತ್ ಸಿಂಗ್ ಸಿದು ಇಂದು ದೆಹಲಿಯಲ್ಲಿ ಸೋನಿಯಾ ಮತ್ತು ರಾಹುಲ್ ಗಾಂಧಿಯನ್ನು ಭೇಟಿ ಮಾಡಿದ್ದಾರೆ.

ಪಂಜಾಬ್ ಸಿಎಂ ಕ್ಯಾಪ್ಟನ್‌ ಅಮರೀಂದರ್‌ ಸಿಂಗ್‌ ಮತ್ತು ಮಾಜಿ ಸಚಿವ ನವಜೋತ್‌ ಸಿಂಗ್‌ ಸಿಧು ನಡುವಿನ ಭಿನ್ನಾಭಿಪ್ರಾಯಕ್ಕೆ ಅಂತ್ಯ ಹಾಡಲು ಕೊನೆಗೂ ಸಂಧಾನ ಸೂತ್ರ ಸಿದ್ಧಪಡಿಸಿದ್ದು, ಈ ಹಿನ್ನೆಲೆಯಲ್ಲಿ ಸಿಧು ಅವರಿಗೆ ಹೈಕಮಾಂಡ್ ಬುಲಾವ್ ನೀಡಿತ್ತು.

ಈ ಹಿನ್ನೆಲೆಯಲ್ಲಿ ಇಂದು ದೆಹಲಿಯ ನಿವಾಸದಲ್ಲಿ ಸೋನಿಯಾ ಮತ್ತು ರಾಹುಲ್ ಗಾಂಧಿ ಅವರನ್ನು ನವಜೋತ್ ಸಿಂಗ್ ಸಿಧು ಭೇಟಿ ಮಾಡಿದ್ದಾರೆ.ಈ ವೇಳೆ ಪಂಜಾಬ್ ಕಾಂಗ್ರೆಸ್ ಉಸ್ತುವಾರಿ ಹರೀಶ್ ರಾವತ್ ಕೂಡ ಉಪಸ್ಥಿತರಿದ್ದರು.

ಮುಂದಿನ ವರ್ಷ ವಿಧಾನಸಭೆ ಚುನಾವಣೆ ಎದುರಿಸಲಿರುವ ಪಂಜಾಬ್‌ನಲ್ಲಿ ನಡೆಯುತ್ತಿರುವ ಭಿನ್ನಮತಕ್ಕೆ ಕೊನೆಗೂ ಪೂರ್ಣ ವಿರಾಮ ಬೀಳುವ ಸಾಧ್ಯತೆಯಿದೆ. ಪಂಜಾಬ್‌ ಪ್ರದೇಶ ಕಾಂಗ್ರೆಸ್‌ ಸಮಿತಿ (ಪಿಪಿಸಿಸಿ) ಅಧ್ಯಕ್ಷರಾಗಿ ಮಾಜಿ ಕ್ರಿಕೆಟಿಗ ನವಜೋತ್‌ ಸಿಂಗ್‌ ಸಿಧು ನೇಮಕ ಮಾಡಲು ಕಾಂಗ್ರೆಸ್‌ ವರಿಷ್ಠರ ನಿರ್ಧಾರ ಮಾಡಿದ್ದಾರೆ ಎಂದು ತಿಳಿದು ಬಂದಿದೆ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಡ್ರಗ್ಸ್ ಸೇವನೆ ದೃಢ: ಫುಕೆಟ್- ದೆಹಲಿ ಏರ್ ಇಂಡಿಯಾ ವಿಮಾನದ ಮುಖ್ಯ ಪೈಲಟ್ ವಜಾ!

Video: 'ಪೊಲೀಸರು ಬುದ್ದಿ ಕಲಿಸಿದ್ದಾರೆ, ತಪ್ಪನ್ನ ಕ್ಷಮಿಸಲ್ಲ'; ಮಗ ಸಾಮ್ರಾಟ್‌ ಬಗ್ಗೆ ಕೊನೆಗೂ ಮೌನ ಮುರಿದ ನಟ Duniya Vijay

‘ಹೂತುಹಾಕಬೇಕು ಎನ್ನುವವರಲ್ಲ ನಾವು’.. ‘ಮಹಿಳೆಯರಿಗೆ ಶಿಕ್ಷಣ, ಅವಕಾಶ ನೀಡುತ್ತಿದ್ದೇವೆ’: ‘ಮನೆಯಲ್ಲೇ ಇರಬೇಕು’ ಹೇಳಿಕೆಗೆ ಮುಸ್ಲಿಂ ಧರ್ಮಗುರು ಸ್ಪಷ್ಟನೆ, Video

ಜಮ್ಮು-ಕಾಶ್ಮೀರ: ಬುಡ್ಗಾಮ್‌ ಎನ್ ಕೌಂಟರ್ ನಲ್ಲಿ ಉಗ್ರನ ಹತ್ಯೆ; AK ರೈಫಲ್ ಮತ್ತಿತರ ಶಸ್ತ್ರಾಸ್ತ್ರಗಳು ವಶ!

Mysuru Dasara: 'ಯುವ ದಸರಾ' ಉದ್ಘಾಟನೆಗೆ ಖ್ಯಾತ ನೃತ್ಯ ನಿರ್ದೇಶಕ ಪ್ರಭುದೇವಗೆ ಆಹ್ವಾನ!