ಕೋವಿಡ್-19 ಲಸಿಕೆ ಪಡೆಯುತ್ತಿರುವ ತರಕಾರಿ ಮಾರಾಟಗಾರ (ಸಂಗ್ರಹ ಚಿತ್ರ) 
ದೇಶ

'ಮುಂದಿನ 100 ದಿನ ಅತ್ಯಂತ ನಿರ್ಣಾಯಕ, ಕೊಂಚ ನಿರ್ಲಕ್ಷ್ಯ ವಹಿಸಿದರೂ ಪರಿಸ್ಥಿತಿ ಕೈ ಮೀರುತ್ತದೆ: ಕೋವಿಡ್-19 3ನೇ ಅಲೆ ಕುರಿತು ಕೇಂದ್ರ ಎಚ್ಚರಿಕೆ

ಕೋವಿಡ್-19 3ನೇ ಅಲೆ ನಿರ್ವಹಣೆ ವಿಚಾರವಾಗಿ ಕೇಂದ್ರ ಸರ್ಕಾರ ಮಹತ್ವದ ಎಚ್ಚರಿಕೆ ನೀಡಿದ್ದು, ಕೊಂಚ ನಿರ್ಲಕ್ಷ್ಯ ವಹಿಸಿದರೂ ಪರಿಸ್ಥಿತಿ ಕೈ ಮೀರುತ್ತದೆ ಎಂದು ಹೇಳಿದೆ.

ನವದೆಹಲಿ: ಕೋವಿಡ್-19 3ನೇ ಅಲೆ ನಿರ್ವಹಣೆ ವಿಚಾರವಾಗಿ ಕೇಂದ್ರ ಸರ್ಕಾರ ಮಹತ್ವದ ಎಚ್ಚರಿಕೆ ನೀಡಿದ್ದು, ಕೊಂಚ ನಿರ್ಲಕ್ಷ್ಯ ವಹಿಸಿದರೂ ಪರಿಸ್ಥಿತಿ ಕೈ ಮೀರುತ್ತದೆ ಎಂದು ಹೇಳಿದೆ.

ಹೌದು.. ಭಾರತ ಈಗಾಗಲೇ ಕೋವಿಡ್-19 2ಅಲೆಯಿಂದಾಗಿ ಹಿಂದೆಂದೂ ಕಂಡು ಕೇಳರಿಯದ ರೀತಿಯಲ್ಲಿ ತತ್ತರಿಸಿಹೋಗಿದ್ದು, ಇದೀಗ ಕೆಲವೇ ದಿನಗಳ ಅಂತರದಲ್ಲಿ ಮೂರನೇ ಅಲೆಯ ಭೀತಿ ಆರಂಭವಾಗಿದೆ. ಇದೇ ವಿಚಾರವಾಗಿ ಕಳೆದ ಕೆಲ ವಾರಗಳಿಂದಲು ಕೇಂದ್ರ ಸರ್ಕಾರ ಮತ್ತು ಕೇಂದ್ರ ಆರೋಗ್ಯ ಇಲಾಖೆ  ಕಠಿಣ ಎಚ್ಚರಿಕೆಗಳನ್ನು ನೀಡುತ್ತಾಬಂದಿದ್ದು, ಇದೀಗ ಇದೇ ವಿಚಾರವಾಗಿ ನೀತಿ ಆಯೋಗ ಆರೋಗ್ಯ ವಿಭಾಗ ಕೂಡ ಮಹತ್ವದ ಎಚ್ಚರಿಕೆ ನೀಡಿದೆ.

ಈ ಕುರಿತಂತೆ ಕೇಂದ್ರ ಆರೋಗ್ಯ ಸಚಿವಾಲಯದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ನೀತಿ ಆಯೋಗದ ಆರೋಗ್ಯ ವಿಭಾಗದ ಸದಸ್ಯ ಡಾ.ವಿ.ಕೆ ಪಾಲ್ ಅವರು, 'ಭಾರತದ ಕೋವಿಡ್-19 3ನೇ ಅಲೆಯ ವಿಚಾರಕ್ಕೆ ಸಂಬಂಧಿಸಿದಂತೆ ಮುಂದಿನ 100 ರಿಂದ 125 ದಿನಗಳು ಅತ್ಯಂತ ನಿರ್ಣಾಯಕವಾದದ್ದು. ಇತ್ತೀಚಿನ  ದಿನಗಳಲ್ಲಿ ಹೊಸ ಪ್ರಕರಣಗಳಲ್ಲಿನ ಕುಸಿತವು ನಿಧಾನವಾಗಿದೆ. ಇದು ಖಂಡಿತಾ ನಮದೆ ಎಚ್ಚರಿಕೆಯ ಸಂಕೇತವಾಗಿದೆ ಎಂದು ಹೇಳಿದ್ದಾರೆ.

ಇದೇ ವೇಳೆ ಭಾರತದ ಲಸಿಕೀಕರಣ ಕುರಿತು ಮಾತನಾಡಿದ ಅವರು, ನೀತಿ ಆಯೋಗ ಮತ್ತು ಐಸಿಎಂಆರ್ ನಡೆಸಿದ ಅಧ್ಯಯನವೊಂದರ ವರದಿಯನ್ನು ಹಂಚಿಕೊಂಡರು. ಈ ವರದಿಯನ್ವಯ ಹೆಚ್ಚಿನ ಅಪಾಯಕಾರಿ ವರ್ಗದ ಪೊಲೀಸ್ ಸಿಬ್ಬಂದಿಗಳಲ್ಲಿ ಲಸಿಕೆ ಪರಿಣಾಮಕಾರಿತ್ವವನ್ನು ವಿಶ್ಲೇಷಿಸಲಾಗಿದೆ. ಕೋವಿಡ್  2ನೇ ಅಲೆಯಲ್ಲಿ ಶೇ.95 ರಷ್ಟು ಕೋವಿಡ್-19 ಸಾವುಗಳನ್ನು ತಡೆಗಟ್ಟುವಲ್ಲಿ ಎರಡು ಪ್ರಮಾಣದ ಕೋವಿಡ್ ಲಸಿಕೆ ಯಶಸ್ವಿಯಾಗಿದೆ ಎಂದು ಅಧ್ಯಯನವು ತೋರಿಸುತ್ತದೆ.

"ಒಂದು ಡೋಸ್ ಲಸಿಕೆ ಮರಣ ಪ್ರಮಾಣವನ್ನು ಶೇಕಡಾ 82 ರಷ್ಟು ಕಡಿಮೆ ಮಾಡಲು ಸಾಧ್ಯವಾಗಿದ್ದು, ಎರಡನೇ ಅಲೆಯಲ್ಲಿ ಕೋವಿಡ್-19 ನಿಂದ ಉಂಟಾಗುವ ಶೇ. 95 ರಷ್ಟು ಸಾವುಗಳನ್ನು ತಡೆಗಟ್ಟುವಲ್ಲಿ ಎರಡು ಪ್ರಮಾಣದ ಲಸಿಕೆ ಯಶಸ್ವಿಯಾಗಿದೆ. ನಾವು ಜುಲೈ ಗೂ ಮೊದಲು 50 ಕೋಟಿ ಡೋಸೇಜ್ ನೀಡುವ  ನಿಗದಿತ ಗುರಿಯತ್ತ ಸಾಗುತ್ತಿದ್ದೇವೆ. ನಾವು ಅದನ್ನು ಸಾಧಿಸುವ ಹಾದಿಯಲ್ಲಿದ್ದೇವೆ. ಕೋವಿಶೀಲ್ಡ್ ಮತ್ತು ಕೊವಾಕ್ಸಿನ್ 66 ಕೋಟಿ ಡೋಸ್ ಗಳಿಗೆ ಸರ್ಕಾರ ಆದೇಶಿಸಿದೆ. ಹೆಚ್ಚುವರಿಯಾಗಿ, 22 ಕೋಟಿ ಡೋಸ್ ಲಸಿಕೆ ಖಾಸಗಿ ವಲಯಕ್ಕೆ ಹೋಗುತ್ತದೆ ಎಂದು ಅವರು ಹೇಳಿದರು.

ಇದೇ ವೇಳೆ ಮಾತನಾಡಿದ ಕೇಂದ್ರ ಆರೋಗ್ಯ ಸಚಿವಾಲಯದ ಜಂಟಿ ಕಾರ್ಯದರ್ಶಿ ಲಾವ್ ಅಗರ್ವಾಲ್ ಅವರು, 'ದೇಶದಲ್ಲಿ ಕೋವಿಡ್-19 ಮೂರನೇ ಅಲೆ ಇರಬಾರದು ಎಂಬ ಗುರಿಯನ್ನು ಪ್ರಧಾನಿ ನರೇಂದ್ರ ಮೋದಿ ನೀಡಿದ್ದಾರೆ. ನಾವು ಚಟುವಟಿಕೆಗಳನ್ನು ಪುನರಾರಂಭಿಸುವಾಗ ಫೇಸ್ ಮಾಸ್ಕ್ ಬಳಕೆಯಲ್ಲಿನ  ಕುಸಿತವನ್ನು ವಿಶ್ಲೇಷಣೆಯು ತೋರಿಸುತ್ತದೆ. ಫೇಸ್ ಮಾಸ್ಕ್ ಗಳ ಬಳಕೆಯನ್ನು ನಾವು ನಮ್ಮ ಜೀವನದಲ್ಲಿ ಹೊಸ ಅಂಶವಾಗಿ ಸೇರಿಸಿಕೊಳ್ಳಬೇಕು ಎಂದು ಹೇಳಿದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ಮೊದಲ ಬಾರಿಗೆ ದಾಳಿ ಕುರಿತು ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

ಚಾಮುಂಡೇಶ್ವರಿ ದೇವಿ ಬಗ್ಗೆ ಗೌರವವಿದ್ದು, ಧಾರ್ಮಿಕ ಭಾವನೆಗಳ ಗೌರವಿಸುತ್ತೇನೆ; ಬಾನು ಮುಷ್ತಾಕ್

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

SCROLL FOR NEXT