ಮಾಜಿ ಎಜಿ ಮುಕುಲ್ ರೋಹಟಗಿ 
ದೇಶ

ದೇಶದ್ರೋಹ ಕಾನೂನು ಪುರಾತನವಾದದ್ದು, ತನ್ನ ಉದ್ದೇಶವನ್ನು ಮೀರಿದೆ: ಮಾಜಿ ಎಜಿ ಮುಕುಲ್ ರೋಹಟಗಿ

ಪುರಾತನವಾಗಿರುವ ದೇಶದ್ರೋಹ ಕಾನೂನು ತನ್ನ ಉದ್ದೇಶವನ್ನು ಮೀರಿದೆ. ಇನ್ನು ಮುಂದೆ ಅದರಿಂದ ಯಾವುದೇ ಪ್ರಯೋಜನವಿಲ್ಲ ಎಂದು ಮಾಜಿ ಅಟಾರ್ನಿ ಜನರಲ್ ಮತ್ತು ಹಿರಿಯ ವಕೀಲ ಮುಕಲ್ ರೋಹಟಗಿ ಶುಕ್ರವಾರ ಹೇಳಿದ್ದು, ಈ ಕಾನೂನಿನ ಸಾಂವಿಧಾನಿಕ ಮಾನ್ಯತೆ ಕುರಿತ ಸುಪ್ರೀಂಕೋರ್ಟ್ ಹೇಳಿಕೆಯನ್ನು ಬೆಂಬಲಿಸಿದ್ದಾರೆ.

ನವದೆಹಲಿ: ಪುರಾತನವಾಗಿರುವ ದೇಶದ್ರೋಹ ಕಾನೂನು ತನ್ನ ಉದ್ದೇಶವನ್ನು ಮೀರಿದೆ. ಇನ್ನು ಮುಂದೆ ಅದರಿಂದ ಯಾವುದೇ ಪ್ರಯೋಜನವಿಲ್ಲ ಎಂದು ಮಾಜಿ ಅಟಾರ್ನಿ ಜನರಲ್ ಮತ್ತು ಹಿರಿಯ ವಕೀಲ ಮುಕಲ್ ರೋಹಟಗಿ ಶುಕ್ರವಾರ ಹೇಳಿದ್ದು, ಈ ಕಾನೂನಿನ ಸಾಂವಿಧಾನಿಕ ಮಾನ್ಯತೆ ಕುರಿತ ಸುಪ್ರೀಂಕೋರ್ಟ್ ಹೇಳಿಕೆಯನ್ನು ಬೆಂಬಲಿಸಿದ್ದಾರೆ.

ಎಎನ್ ಐ ಸುದ್ಧಿಸಂಸ್ಥೆಯೊಂದಿಗೆ ಮಾತನಾಡಿದ ರೋಹಟಗಿ, ಹಿಂಸಾತ್ಮಾಕವಾಗಿ ಸರ್ಕಾರವನ್ನು ಪತನಗೊಳಿಸುವ ಭೀತಿಯಿಂದ ಸ್ಥಳೀಯರಲ್ಲಿನ ಭಿನ್ನಾಭಿಪ್ರಾಯವನ್ನು ಹತ್ತಿಕರಲು ಬ್ರಿಟಿಷರು ಈ ಕಾನೂನನ್ನು ಜಾರಿಗೊಳಿಸಿದ್ದಾಗಿ ತಿಳಿಸಿದರು. 

ದೇಶ ಸ್ವಾತಂತ್ರಗೊಂಡು 75 ವರ್ಷ ಕಳೆದರೂ ಐಪಿಸಿ ಸೆಕ್ಷನ್ 124 ಎ ಅಗತ್ಯವಿದೆಯೇ ಎಂದು ಸುಪ್ರೀಂಕೋರ್ಟ್ ಕೇಂದ್ರ ಸರ್ಕಾರವನ್ನು ಪ್ರಶ್ನಿಸಿದ ಬೆನ್ನಲ್ಲೇ, ರೋಹಟಗಿ ಈ ರೀತಿಯ ಹೇಳಿಕೆ ನೀಡಿದ್ದಾರೆ. ಸುಪ್ರೀಂಕೋರ್ಟ್ ಅಬ್ಸರ್ ವೇಷನ್ ನ್ನು ಹೃದಯಪೂರ್ವಕವಾಗಿ ಒಪ್ಪಿಕೊಳ್ಳುತ್ತೇನೆ. ಈ ಕಾನೂನು ಸಂಪೂರ್ಣವಾಗಿ ಹಳೆಯದಾಗಿದೆ. ವಾಕ್ ಸ್ವಾತಂತ್ರ್ಯ ಮತ್ತು ಭಿನ್ನಾಭಿಪ್ರಾಯವನ್ನು ಹತ್ತಿಕ್ಕುವ ದೃಷ್ಟಿಯಿಂದ ಈ ಕಾನೂನನ್ನು ಜಾರಿಗೆ ತರಲಾಗಿತ್ತು ಎಂದು ಅವರು ಹೇಳಿದರು.

ಇಂಗ್ಲೆಂಡ್ ನಲ್ಲಿಯೂ ದೇಶದ್ರೋಹ ಅಪರಾಧ ಇಲ್ಲ. ಕಳೆದ 75 ವರ್ಷಗಳಲ್ಲಿ ಕೇಂದ್ರ ಅಥವಾ ರಾಜ್ಯ ಸರ್ಕಾರವನ್ನು ಉರುಳಿಸಲು ಯಾವುದೇ ಹಿಂಸಾತ್ಮಾಕ ಘಟನೆಗಳಾಗಿಲ್ಲ. ಈ ಪುರಾತನ ಕಾಲದ ಕಾನೂನಿನ ಅಗತ್ಯವಿಲ್ಲ ಎಂದಿರುವ ಅವರು, ಸಂವಿಧಾನದ ವಿಧಿ 377ನ್ನು ರದ್ದುಪಡಿಸಿದಂತೆ, ಮತ್ತೊಂದು ಪುರಾತನವಾದ ದೇಶದ್ರೋಹದ ಕಾನೂನನ್ನು ರದ್ದುಪಡಿಸಬೇಕಾಗಿದೆ ಎಂದು ರೋಹಟಗಿ ಸರ್ಕಾರವನ್ನು ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

SCROLL FOR NEXT