ಸಾಂದರ್ಭಿಕ ಚಿತ್ರ 
ದೇಶ

ಜಮ್ಮು-ಕಾಶ್ಮೀರದ ಶ್ರೀನಗರ ಜಿಲ್ಲೆಯಲ್ಲಿ ಎನ್ ಕೌಂಟರ್: ಇಬ್ಬರು ಉಗ್ರರ ಹತ್ಯೆ 

ಜಮ್ಮು-ಕಾಶ್ಮೀರದ ಶ್ರೀನಗರದಲ್ಲಿರುವ ದನ್ಮಾರ್ ಪ್ರದೇಶದ ಅಲಂದಾರ್ ಕಾಲೊನಿಯಲ್ಲಿ ಶುಕ್ರವಾರ ನಸುಕಿನ ಜಾವ ನಡೆದ ಎನ್ ಕೌಂಟರ್ ನಲ್ಲಿ ಇಬ್ಬರು ಅಪರಿಚಿತ ಭಯೋತ್ಪಾದಕರ ಹತ್ಯೆಯಾಗಿದೆ.

ಶ್ರೀನಗರ: ಜಮ್ಮು-ಕಾಶ್ಮೀರದ ಶ್ರೀನಗರದಲ್ಲಿರುವ ದನ್ಮಾರ್ ಪ್ರದೇಶದ ಅಲಂದಾರ್ ಕಾಲೊನಿಯಲ್ಲಿ ಶುಕ್ರವಾರ ನಸುಕಿನ ಜಾವ ನಡೆದ ಎನ್ ಕೌಂಟರ್ ನಲ್ಲಿ ಇಬ್ಬರು ಅಪರಿಚಿತ ಭಯೋತ್ಪಾದಕರ ಹತ್ಯೆಯಾಗಿದೆ.

ಸದ್ಯ ಎನ್ ಕೌಂಟರ್ ಪ್ರದೇಶದಲ್ಲಿ ಮುಂದುವರಿದಿದ್ದು ಪೊಲೀಸರು ಮತ್ತು ಭದ್ರತಾ ಪಡೆ ಶೋಧ ಕಾರ್ಯದಲ್ಲಿ ಮುಂದುವರಿದಿದ್ದಾರೆ. ಹೆಚ್ಚಿನ ಮಾಹಿತಿ ಸಿಕ್ಕಿಲ್ಲ ಎಂದು ಜಮ್ಮು-ಕಾಶ್ಮೀರ ವಲಯದ ಪೊಲೀಸರು ತಿಳಿಸಿದ್ದಾರೆ.

ಉಗ್ರರು ಅಡಗಿ ಕುಳಿತಿರುವ ಬಗ್ಗೆ ನಿಖರ ಮಾಹಿತಿ ಪಡೆದ ಭದ್ರತಾ ಪಡೆ ದನ್ಮರ್ ಪ್ರದೇಶವನ್ನು ಸುತ್ತುವರಿದು ಶೋಧ ಕಾರ್ಯ ಮುಂದುವರಿಸಿದರು. ಸಫಕದಲ್-ಸೌರ ರಸ್ತೆಯಲ್ಲಿ ಇಂದಿನ ಎನ್ ಕೌಂಟರ್ ನಡೆದಿದೆ. ಉಗ್ರರು ಭದ್ರತಾ ಪಡೆಗೆ ಗುಂಡಿನ ಸುರಿಮಳೆಗೈಯಲು ಆರಂಭಿಸಿದ್ದರಿಂದ ಶೋಧ ಕಾರ್ಯ ಎನ್ ಕೌಂಟರ್ ಆಗಿ ಪರಿವರ್ತನೆಯಾಯಿತು, ಹತ್ಯೆಗೊಂಡ ಉಗ್ರರು ಯಾವ ಗುಂಪಿಗೆ ಸೇರಿದವರು ಎಂದು ಪತ್ತೆಯಾಗಿಲ್ಲ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT