ಪ್ರಿಯಾಂಕಾ ಗಾಂಧಿ 
ದೇಶ

ಉತ್ತರ ಪ್ರದೇಶ ಪಂಚಾಯಿತಿ ಚುನಾವಣೆ ವೇಳೆ ಹಲ್ಲೆ: ಸಮಾಜವಾದಿ ಪಕ್ಷದ ಕಾರ್ಯಕರ್ತೆಯರ ಭೇಟಿ ಮಾಡಿದ ಪ್ರಿಯಾಂಕಾ

ಉತ್ತರ ಪ್ರದೇಶ ಪಂಚಾಯಿತಿ ಅಧ್ಯಕ್ಷರ ಆಯ್ಕೆಗೆ ನಡೆದ ಚುನಾವಣೆ ವೇಳೆ ಬಿಜೆಪಿ ಕಾರ್ಯಕರ್ತರಿಂದ ಹಲ್ಲೆಗೆ ಒಳಗಾಗಿದ್ದರು ಎನ್ನಲಾದ ಸಮಾಜವಾದಿ ಪಕ್ಷದ ಇಬ್ಬರು ಮಹಿಳಾ ಸದಸ್ಯರನ್ನು ಕಾಂಗ್ರೆಸ್‌ನ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಶನಿವಾರ ಭೇಟಿ ಮಾಡಿದರು.

ಲಕ್ನೋ: ಉತ್ತರ ಪ್ರದೇಶ ಪಂಚಾಯಿತಿ ಅಧ್ಯಕ್ಷರ ಆಯ್ಕೆಗೆ ನಡೆದ ಚುನಾವಣೆ ವೇಳೆ ಬಿಜೆಪಿ ಕಾರ್ಯಕರ್ತರಿಂದ ಹಲ್ಲೆಗೆ ಒಳಗಾಗಿದ್ದರು ಎನ್ನಲಾದ ಸಮಾಜವಾದಿ ಪಕ್ಷದ ಇಬ್ಬರು ಮಹಿಳಾ ಸದಸ್ಯರನ್ನು ಕಾಂಗ್ರೆಸ್‌ನ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಶನಿವಾರ ಭೇಟಿ ಮಾಡಿದರು.

ಲಖೀಂಪುರ ಖೇರಿಯ ಗ್ರಾಮದಲ್ಲಿ ಸಂತ್ರಸ್ತ ಮಹಿಳೆಯರನ್ನು ಭೇಟಿ ಮಾಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಈ ಮಹಿಳೆಯರು ಚುನಾವಣೆಗೆ ಸ್ಪರ್ಧಿಸುವುದು, ಅದಕ್ಕಾಗಿ ನಾಮಪತ್ರ ಸಲ್ಲಿಸುವುದು ಅವರ ಸಂವಿಧಾನದತ್ತ ಹಕ್ಕು. ಆದರೆ, ಅವರ ಈ ಹಕ್ಕನ್ನು ಕಸಿಯಲಾಗಿದೆ’ ಎಂದು ದೂರಿದರು. 

ಪಕ್ಷದ ಅಭ್ಯರ್ಥಿ ಋತು ಸಿಂಗ್‌ ಹಾಗೂ ಅವರಿಗೆ ಸೂಚಕಿಯಾಗಿದ್ದ ಅನಿತಾ ಯಾದವ್‌ ಅವರ ಸೀರೆಯನ್ನು ಎಳೆಯುವ ಮೂಲಕ ಬಿಜೆಪಿ ಕಾರ್ಯಕರ್ತರು ಅಸಭ್ಯವಾಗಿ ವರ್ತಿಸಿದ್ದರು ಎಂದು ಸಮಾಜವಾದಿ ಪಾರ್ಟಿ ಮುಖ್ಯಸ್ಥ ಅಖಿಲೇಶ್‌ ಯಾದವ್‌ ಆರೋಪಿಸಿದ್ದರು.

ರೀತಿ ಮಹಿಳೆಯರ ವಿರುದ್ಧ ದೌರ್ಜನ್ಯ ಎಸಗಿದವರಿಗೆ ಆಶ್ರಯ ನೀಡುವವರಿಗೆ ಜನರು ತಕ್ಕ ಪಾಠ ಕಲಿಸುವರು. ಮಹಿಳೆ ‍ಪಂಚಾಯಿತಿಯ ಪ್ರಧಾನ ಆಗುತ್ತಾಳೆ, ಶಾಸಕಿ, ಸಂಸದೆ ಆಗುತ್ತಾಳೆ. ಪ್ರಧಾನಿಯೂ ಆಗಿ, ಈ ಸರ್ಕಾರವನ್ನು ಕಿತ್ತೊಗೆಯುತ್ತಾಳೆ ಎಂಬ ಮಾತನ್ನು ಪ್ರಜಾಪ್ರಭುತ್ವ ಮೌಲ್ಯಗಳಿಗೆ ಧಕ್ಕೆ ತಂದಿರುವ ಬಿಜೆಪಿಯ ಗೂಂಡಾಗಳು ಗಮನವಿಟ್ಟು ಕೇಳಬೇಕು’ ಎಂದು ಅವರು ಹಿಂದಿಯಲ್ಲಿ ಟ್ವೀಟ್‌ ಮಾಡಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಐವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

SCROLL FOR NEXT