ವಿವೇಕ್ ತನ್ಖಾ 
ದೇಶ

ಸಂಜಯ್ ಗಾಂಧಿ ರೂಪಿಸಿದ್ದ ಕುಟುಂಬ ಯೋಜನೆ ಕಾರ್ಯಕ್ರಮದಿಂದ ಆಕ್ರೋಶ, ಸೋಲು ಉಂಟಾಯಿತು: ಕಾಂಗ್ರೆಸ್ ಸಂಸದ

ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ ಸಂಜಯ್ ಗಾಂಧಿ ಉತ್ತೇಜಿಸಿದ್ದ ಕುಟುಂಬ ಯೋಜನೆಯ ಕಾರ್ಯಕ್ರಮದಿಂದ ಸಾರ್ವಜನಿಕರಲ್ಲಿ ಆಕ್ರೋಶ ಉಂಟಾಗಿ, ಚುನಾವಣೆಯಲ್ಲಿ ಪಕ್ಷಕ್ಕೆ ಮುಳುವಾಯಿತು

ಇಂದೋರ್: ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ ಸಂಜಯ್ ಗಾಂಧಿ ಉತ್ತೇಜಿಸಿದ್ದ ಕುಟುಂಬ ಯೋಜನೆಯ ಕಾರ್ಯಕ್ರಮದಿಂದ ಸಾರ್ವಜನಿಕರಲ್ಲಿ ಆಕ್ರೋಶ ಉಂಟಾಗಿ, ಚುನಾವಣೆಯಲ್ಲಿ ಪಕ್ಷಕ್ಕೆ ಮುಳುವಾಯಿತು ಎಂದು ಕಾಂಗ್ರೆಸ್ ನ ನಾಯಕ ಹಾಗೂ ರಾಜ್ಯಸಭಾ ಸದಸ್ಯ ವಿವೇಕ್ ತನ್ಖಾ ಹೇಳಿದ್ದಾರೆ. 

ತಾನ್ಖಾ ಸ್ವತಃ ತಾವು ಕುಟುಂಬ ಯೋಜನೆ ಕಾರ್ಯಕ್ರಮದ ಪರವಾಗಿರುವುದಾಗಿ ಹೇಳಿದ್ದು ಆದರೆ ಅದನ್ನು ರಾಜಕೀಯಗೊಳಿಸಬಾರದು ಎಂದು ತನ್ಖಾ ಅಭಿಪ್ರಾಯಪಟ್ಟಿದ್ದಾರೆ. ವಿವೇಕ್ ತನ್ಖಾ ಉತ್ತರ ಪ್ರದೇಶದ ಪ್ರಸ್ತಾವಿತ ಜನಸಂಖ್ಯಾ ನಿಯಂತ್ರಣ ಕಾನೂನು ಬಗ್ಗೆ ಮಾತನಾಡುತ್ತಿದ್ದರು. 

"ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ ಸಂಜಯ್ ಗಾಂಧಿ ಅವರೂ ಸಹ ಜನಸಂಖ್ಯಾ ನಿಯಂತ್ರಣ ಕಾನೂನನ್ನು ಪ್ರಸ್ತಾಪಿಸಿದ್ದರು. ಇದು ಒಳ್ಳೆಯ ಯೋಜನೆ. ಆದರೆ ಸಮಯ ಹಾಗೂ ಅದನ್ನು ಜಾರಿಗೊಳಿಸಲು ಮುಂದಾದ ರೀತಿ ಸರಿ ಇರಲಿಲ್ಲ ಏಕೆಂದರೆ ಜನರನ್ನು ಒತ್ತಾಯಪೂರ್ವಕವಾಗಿ ಜನಸಂಖ್ಯಾ ನಿಯಂತ್ರಣಕ್ಕೆ ಒಳಪಡಿಸುವುದಾಗಿತ್ತು, ಇದರಿಂದ ಜನರು ಆಕ್ರೋಶಗೊಂಡಿದ್ದರು ಇದೇ ಕಾಂಗ್ರೆಸ್ ನ ಸೋಲಿಕೆ ಕಾರಣವಾಯಿತು ಎಂದು ಇಂದೋರ್ ನ ಪ್ರೆಸ್ ಕ್ಲಬ್ ನಲ್ಲಿ ಮಾತನಾಡಿರುವ ವಿವೇಕ್ ತನ್ಖಾ ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

SCROLL FOR NEXT