ಸುಪ್ರೀಂಕೋರ್ಟ್ 
ದೇಶ

ಆಸ್ಪತ್ರೆಗಳು ಮಾನವೀಯ ಸೇವೆ ಸಲ್ಲಿಸುವ ಬದಲು ಬೃಹತ್ ರಿಯಲ್ ಎಸ್ಟೇಟ್ ಉದ್ಯಮಗಳಂತೆ ಮಾರ್ಪಟ್ಟಿವೆ: ಸುಪ್ರೀಂ

ಕೋವಿಡ್ -19 ದುರಂತದ ಸಂದರ್ಭದಲ್ಲಿ ಆಸ್ಪತ್ರೆಗಳು ಮಾನವೀಯ ಸೇವೆ ಸಲ್ಲಿಸುವ ಬದಲು ಬೃಹತ್ ರಿಯಲ್ ಎಸ್ಟೇಟ್ ಉದ್ಯಮಗಳಂತೆ ಮಾರ್ಪಟ್ಟಿವೆ ಎಂದು ಸುಪ್ರೀಂ ಕೋರ್ಟ್ ಸೋಮವಾರ ಹೇಳಿದೆ.

ನವದೆಹಲಿ: ಕೋವಿಡ್ -19 ದುರಂತದ ಸಂದರ್ಭದಲ್ಲಿ ಆಸ್ಪತ್ರೆಗಳು ಮಾನವೀಯ ಸೇವೆ ಸಲ್ಲಿಸುವ ಬದಲು ಬೃಹತ್ ರಿಯಲ್ ಎಸ್ಟೇಟ್ ಉದ್ಯಮಗಳಂತೆ ಮಾರ್ಪಟ್ಟಿವೆ ಎಂದು ಸುಪ್ರೀಂ ಕೋರ್ಟ್ ಸೋಮವಾರ ಹೇಳಿದೆ.

ವಸತಿ ಕಾಲೋನಿಗಳಲ್ಲಿ 2-3 ಕೊಠಡಿಗಳ ಫ್ಲಾಟ್ ಗಳಿಂದ ನಡೆಯುತ್ತಿರುವ ನರ್ಸಿಂಗ್ ಹೋಮ್ ಗಳು ಅಗ್ನಿ ಮತ್ತು ಕಟ್ಟಡ ಸುರಕ್ಷತಾ ನಿಯಮಗಳು ಉಲ್ಲಂಘನೆಯಾಗದಂತೆ ಸ್ವಲ್ಪ ಗಮನ ಹರಿಸಬೇಕಾಗಿದೆ ಎಂದು ನಿರ್ದೇಶನ ನೀಡಿದೆ.

ಕಟ್ಟಡದ ಉಪ-ಕಾನೂನು ಉಲ್ಲಂಘನೆಯನ್ನು ಸರಿಪಡಿಸಲು ಆಸ್ಪತ್ರೆಗಳಿಗೆ ಮುಂದಿನ ವರ್ಷದ ಜುಲೈವರೆಗೂ ಗಡುವನ್ನು ವಿಸ್ತರಿಸಿರುವ ಗುಜರಾತ್ ಸರ್ಕಾರವನ್ನು ಸುಪ್ರೀಂಕೋರ್ಟ್ ತರಾಟೆಗೆ ತೆಗೆದುಕೊಂಡಿದೆ. ಕಟ್ಟಡಗಳಿಗೆ ಬೆಂಕಿ ಬಿದ್ದ ಘಟನೆಗಳಲ್ಲಿ ಜನರು ಸಾವನ್ನಪ್ಪುವುದು ಮುಂದುವರೆದಿದೆ. ಮಾನವ ದುರಂತದ ಸಂದರ್ಭದಲ್ಲಿ ಮಾನವೀಯ ಸೇವೆ ಸಲ್ಲಿಸುವ ಬದಲು ಈ ಆಸ್ಪತ್ರೆಗಳು ಬೃಹತ್ ರಿಯಲ್ ಎಸ್ಟೇಟ್ ಉದ್ಯಮಗಳಂತೆ ಮಾರ್ಪಟ್ಟಿವೆ ಎಂದು ಹೇಳಿದೆ.

ಕಳೆದ ವರ್ಷದ ಆದೇಶದಂತೆ ಗುಜರಾತ್ ಸರ್ಕಾರ ಗಡುವು ವಿಸ್ತರಿಸಿಲ್ಲ, ಆಸ್ಪತ್ರೆಗಳು ತೊಂದರೆಯಲ್ಲಿರುವ ರೋಗಿಗಳಿಗೆ ಸಹಾಯವನ್ನು ಒದಗಿಸಲು ಉದ್ದೇಶಿಸಿವೆ ಆದರೆ ಅವು ಹಣದ ಗಣಿಗಾರಿಕೆ ಯಂತ್ರಗಳಾಗಿವೆ ಎಂದು ನ್ಯಾಯಮೂರ್ತಿಗಳಾದ ಡಿ. ವೈ. ಚಂದ್ರಚೂಡ್ ಮತ್ತು ಎಂ ಆರ್ ಶಾ ಅವರನ್ನೊಳಗೊಂಡ ನ್ಯಾಯಪೀಠ ಹೇಳಿತು. 

ಕೋವಿಡ್ ದುರಂತದ ಸಂದರ್ಭದಲ್ಲಿ ಆಸ್ಪತ್ರೆಗಳು ಬೃಹತ್ ಉದ್ಯಮಗಳಾಗಿ ರೂಪುಗೊಂಡಿವೆ. ಈ ರೀತಿಯ ನರ್ಸಿಂಗ್ ಹೋಮ್ ಗಳು, ವಸತಿ ಕಾಲೋನಿಗಳಲ್ಲಿ ಎರಡ್ಮೂರು ಕೊಠಡಿಗಳ ಫ್ಲಾಟ್ ನಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಅವುಗಳು ಕೆಲಸ ನಿರ್ವಹಿಸಲು ಅವಕಾಶ ನೀಡಬಾರದು, ಈ ಆಸ್ಪತ್ರೆಗಳನ್ನು ಬಂದ್ ಮಾಡುವುದು ಒಳ್ಳೆಯದು ಮತ್ತು ರಾಜ್ಯ ಸರ್ಕಾರ ಅಗತ್ಯ ಮೂಲಸೌಕರ್ಯ ಒದಗಿಸಬೇಕೆಂದು ನ್ಯಾಯಪೀಠ ಅಭಿಪ್ರಾಯಪಟ್ಟಿತು.

ನಾಸಿಕ್, ಮಹಾರಾಷ್ಟ್ರದಲ್ಲಿ ಕಳೆದ ವರ್ಷ ಸಂಭವಿಸಿದ ಬೆಂಕಿ ಘಟನೆಗಳನ್ನು ಉಲ್ಲೇಖಿಸಿದ ನ್ಯಾಯಪೀಠ, ಗುಜರಾತ್ ಸರ್ಕಾರ ಅಧಿಸೂಚನೆಯನ್ನು ಹಿಂದಕ್ಕೆ ಪಡೆಯಬೇಕು ಹಾಗೂ  ಒಂದು ವಾರದೊಳಗೆ ಅಧಿಸೂಚನೆ  ಕುರಿತು ವಿವರಣೆ ನೀಡಬೇಕೆಂದು ಕೋರಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

ವಿದೇಶದಲ್ಲೂ ನಂದಿನಿ ತುಪ್ಪಕ್ಕೆ ಹೆಚ್ಚಿದ ಬೇಡಿಕೆ; ಅಮೆರಿಕಾ ಸೇರಿದಂತೆ ಮೂರು ರಾಷ್ಟ್ರಗಳಿಗೆ ರಫ್ತು..!

CLP ಸಭೆಯಲ್ಲಿ ಸರ್ವಾನುಮತದಿಂದ ಸಿದ್ದರಾಮಯ್ಯ ಅವರನ್ನು ಆಯ್ಕೆ ಮಾಡಲಾಗಿತ್ತು, 50:50 ಒಪ್ಪಂದವಾಗಿಲ್ಲ: ಕೆ.ಜೆ. ಜಾರ್ಜ್ ಸ್ಪಷ್ಟನೆ

SCROLL FOR NEXT