ಮುಕ್ತಾರ್ ಅಬ್ಬಾಸ್ ನಖ್ವಿ 
ದೇಶ

ರಾಜ್ಯಸಭೆಯ ಉಪ ನಾಯಕ ಸ್ಥಾನಕ್ಕೆ ಮುಖ್ತಾರ್ ಅಬ್ಬಾಸ್ ನಖ್ವಿ ಹೆಸರು!

ಕೇಂದ್ರ ಸಚಿವ ಮುಖ್ತಾರ್ ಅಬ್ಬಾಸ್ ನಖ್ವಿ ಅವರನ್ನು ರಾಜ್ಯಸಭೆಯಲ್ಲಿ ಸದನದ ಉಪ ನಾಯಕ ಸ್ಥಾನಕ್ಕೆ ಹೆಸರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ನವದೆಹಲಿ: ಕೇಂದ್ರ ಸಚಿವ ಮುಖ್ತಾರ್ ಅಬ್ಬಾಸ್ ನಖ್ವಿ ಅವರನ್ನು ರಾಜ್ಯಸಭೆಯಲ್ಲಿ ಸದನದ ಉಪನಾಯಕ ಸ್ಥಾನಕ್ಕೆ ಹೆಸರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ರಾಜ್ಯಸಭೆಯಲ್ಲಿ ಸದನ ನಾಯಕರಾಗಿ ನೇಮಕಗೊಂಡಿರುವ ಪಿಯೂಷ್ ಗೋಯಲ್ ಅವರ ನಂತರದ ಸ್ಥಾನದಲ್ಲಿ ನಖ್ವಿ ಅವರನ್ನು ಆಯ್ಕೆ ಮಾಡಲಾಗಿದೆ.

ಪ್ರಸ್ತುತ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವರಾಗಿರುವ ನಖ್ವಿ ಅವರು ಸಂಸದೀಯ ವ್ಯವಹಾರಗಳ ಬಗ್ಗೆ ವ್ಯಾಪಕ ಜ್ಞಾನ ಹೊಂದಿದ್ದು, ಮೋದಿ ಸರ್ಕಾರದ ಮೊದಲ ಅವಧಿಯಲ್ಲಿ ಸಂಸದೀಯ ವ್ಯವಹಾರಗಳ ರಾಜ್ಯ ಸಚಿವರಾಗಿಯೂ ಸೇವೆ ಸಲ್ಲಿಸಿದ್ದರು.

ರಾಜಕೀಯ ವಲಯದಲ್ಲಿ ಬಹುತೇಕ ಎಲ್ಲ ನಾಯಕರೊಂದಿಗೆ ಸೌಹಾರ್ದಯುತ ಸಂಬಂಧ ಹೊಂದಿರುವ ನಖ್ವಿ ಅವರನ್ನು ರಾಜ್ಯಸಭೆಯಲ್ಲಿ ಸದನದ ಉಪನಾಯಕ ಸ್ಥಾನಕ್ಕೆ ಆಯ್ಕೆ ಮಾಡಿರುವುದು ಮಹತ್ವ ಪಡೆದುಕೊಂಡಿದೆ. ಕೋವಿಡ್ ನಿರ್ವಹಣೆ ಇಂಧನ ಬೆಲೆ ಏರಿಕೆ, ಕೋವಿಡ್ ನಿರ್ವಹಣೆ, ರೈತರ ಪ್ರತಿಭಟನೆ  ವಿಚಾರವಾಗಿ ಅಧಿವೇಶನದಲ್ಲಿ ವಿಪಕ್ಷಗಳು ಕೇಂದ್ರ ಸರ್ಕಾರದ ವಿರುದ್ಧ ಮುಗಿಬೀಳಲು ಸಿದ್ಧರಾಗಿರುವ ಈ ಹೊತ್ತಿನಲ್ಲಿ ನಖ್ವಿ ಅವರ ಆಯ್ಕೆ ಮೋದಿ ಸರ್ಕಾರ ಎಷ್ಟರಪಟ್ಟಿಗೆ ನೆರವಾಗಲಿದೆ ಎಂಬುದನ್ನು ಕಾದು ನೋಡಬೇಕಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT