ಗಜೇಂದ್ರ ಸಿಂಗ್-ಸುಮಲತಾ 
ದೇಶ

ಕೆಆರ್‌ಎಸ್‌ ಜಲಾಶಯಕ್ಕೆ ಅಪಾಯ ವಿಷಯ ಕೇಂದ್ರದ ಅಂಗಳಕ್ಕೆ: ಕೇಂದ್ರ ಜಲಶಕ್ತಿ ಸಚಿವರನ್ನು ಭೇಟಿಯಾದ ಸುಮಲತಾ

ಅಕ್ರಮ ಗಣಿಗಾರಿಕೆಯಿಂದ ವಿಶ್ವವಿಖ್ಯಾತ ಕೆಆರ್ ಎಸ್ ಜಲಾಶಯಕ್ಕೆ ಅಪಾಯ ಉಂಟಾಗುತ್ತಿದ್ದು ಇದರ ಬಗ್ಗೆ ಸೂಕ್ತ ಎಚ್ಚರಿಕೆ ವಹಿಸಿ ಈ ಕುರಿತು ಉನ್ನತ ಮಟ್ಟದ ತನಿಖೆ ನಡೆಸಿ ಜಲಾಶಯದ ಸುರಕ್ಷತೆ ಕಾಪಾಡುವಂತೆ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಕೇಂದ್ರ ಜಲಶಕ್ತಿ ಸಚಿವರಿಗೆ ಮನವಿ ಮಾಡಿದ್ದಾರೆ.

ನವದೆಹಲಿ: ಅಕ್ರಮ ಗಣಿಗಾರಿಕೆಯಿಂದ ವಿಶ್ವವಿಖ್ಯಾತ ಕೆಆರ್ ಎಸ್ ಜಲಾಶಯಕ್ಕೆ ಅಪಾಯ ಉಂಟಾಗುತ್ತಿದ್ದು ಇದರ ಬಗ್ಗೆ ಸೂಕ್ತ ಎಚ್ಚರಿಕೆ ವಹಿಸಿ ಈ ಕುರಿತು ಉನ್ನತ ಮಟ್ಟದ ತನಿಖೆ ನಡೆಸಿ ಜಲಾಶಯದ ಸುರಕ್ಷತೆ ಕಾಪಾಡುವಂತೆ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಕೇಂದ್ರ ಜಲಶಕ್ತಿ ಸಚಿವರಿಗೆ ಮನವಿ ಮಾಡಿದ್ದಾರೆ.

ದೆಹಲಿಯಲ್ಲಿಂದು ಕೇಂದ್ರ ಜಲ ಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿ ಮಾಡಿ ಸುತ್ತಮುತ್ತಲ ಪ್ರದೇಶದಲ್ಲಿ ನಡೆಯುತ್ತಿರುವ ಗಣಿಗಾರಿಕೆಯಿಂದ ಜಲಾಶಯಕ್ಕೆ ಭವಿಷ್ಯದಲ್ಲಿ ಅಪಾಯ ತಲೆದೋರಲಿದೆ ಇದರ ಬಗ್ಗೆ ಸೂಕ್ತ ಎಚ್ಚರಿಕೆ ವಹಿಸಸುವಂತೆ ಮನವಿ ಮಾಡಿದ್ದಾರೆ. 

ಕೆಆರ್ ಎಸ್ ಅಣೆಕಟ್ಟು ಸುತ್ತ 15 ಕಿಲೋಮೀಟರ್ ವ್ಯಾಪ್ತಿಯೊಳಗೆ ನಡೆಯುತ್ತಿರುವ ಅಕ್ರಮ ಗಣಿಗಾರಿಕೆಗೆ ನಿರ್ಬಂದ ಹಾಕಬೇಕು ಎಂದು ಮನವಿ ಮಾಡಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸುಮಲತಾ ಕೆ.ಆರ್.ಎಸ್ ಅಣೆಕಟ್ಟೆಗೆ ಅಕ್ರಮ ಗಣಿಗಾರಿಕೆಯಿಂದ ಮುಂದೆ ಬರಲಿರುವ  ಅಪಾಯವನ್ನು ಅರಿತು ಈ ವಿಚಾರವಾಗಿ ಉನ್ನತ ಮಟ್ಟದ ತನಿಖೆ ನಡೆಸಬೇಕೆಂದು ಆಗ್ರಹಿಸಿರುವುದಾಗಿ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

'China isn't afraid': ಅಮೆರಿಕದ ಶೇ.100 ರಷ್ಟು ಸುಂಕದ ಬಗ್ಗೆ ಚೀನಿಯರ ಪ್ರತಿಕ್ರಿಯೆ!

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

SCROLL FOR NEXT