ಗಜೇಂದ್ರ ಸಿಂಗ್-ಸುಮಲತಾ 
ದೇಶ

ಕೆಆರ್‌ಎಸ್‌ ಜಲಾಶಯಕ್ಕೆ ಅಪಾಯ ವಿಷಯ ಕೇಂದ್ರದ ಅಂಗಳಕ್ಕೆ: ಕೇಂದ್ರ ಜಲಶಕ್ತಿ ಸಚಿವರನ್ನು ಭೇಟಿಯಾದ ಸುಮಲತಾ

ಅಕ್ರಮ ಗಣಿಗಾರಿಕೆಯಿಂದ ವಿಶ್ವವಿಖ್ಯಾತ ಕೆಆರ್ ಎಸ್ ಜಲಾಶಯಕ್ಕೆ ಅಪಾಯ ಉಂಟಾಗುತ್ತಿದ್ದು ಇದರ ಬಗ್ಗೆ ಸೂಕ್ತ ಎಚ್ಚರಿಕೆ ವಹಿಸಿ ಈ ಕುರಿತು ಉನ್ನತ ಮಟ್ಟದ ತನಿಖೆ ನಡೆಸಿ ಜಲಾಶಯದ ಸುರಕ್ಷತೆ ಕಾಪಾಡುವಂತೆ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಕೇಂದ್ರ ಜಲಶಕ್ತಿ ಸಚಿವರಿಗೆ ಮನವಿ ಮಾಡಿದ್ದಾರೆ.

ನವದೆಹಲಿ: ಅಕ್ರಮ ಗಣಿಗಾರಿಕೆಯಿಂದ ವಿಶ್ವವಿಖ್ಯಾತ ಕೆಆರ್ ಎಸ್ ಜಲಾಶಯಕ್ಕೆ ಅಪಾಯ ಉಂಟಾಗುತ್ತಿದ್ದು ಇದರ ಬಗ್ಗೆ ಸೂಕ್ತ ಎಚ್ಚರಿಕೆ ವಹಿಸಿ ಈ ಕುರಿತು ಉನ್ನತ ಮಟ್ಟದ ತನಿಖೆ ನಡೆಸಿ ಜಲಾಶಯದ ಸುರಕ್ಷತೆ ಕಾಪಾಡುವಂತೆ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಕೇಂದ್ರ ಜಲಶಕ್ತಿ ಸಚಿವರಿಗೆ ಮನವಿ ಮಾಡಿದ್ದಾರೆ.

ದೆಹಲಿಯಲ್ಲಿಂದು ಕೇಂದ್ರ ಜಲ ಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿ ಮಾಡಿ ಸುತ್ತಮುತ್ತಲ ಪ್ರದೇಶದಲ್ಲಿ ನಡೆಯುತ್ತಿರುವ ಗಣಿಗಾರಿಕೆಯಿಂದ ಜಲಾಶಯಕ್ಕೆ ಭವಿಷ್ಯದಲ್ಲಿ ಅಪಾಯ ತಲೆದೋರಲಿದೆ ಇದರ ಬಗ್ಗೆ ಸೂಕ್ತ ಎಚ್ಚರಿಕೆ ವಹಿಸಸುವಂತೆ ಮನವಿ ಮಾಡಿದ್ದಾರೆ. 

ಕೆಆರ್ ಎಸ್ ಅಣೆಕಟ್ಟು ಸುತ್ತ 15 ಕಿಲೋಮೀಟರ್ ವ್ಯಾಪ್ತಿಯೊಳಗೆ ನಡೆಯುತ್ತಿರುವ ಅಕ್ರಮ ಗಣಿಗಾರಿಕೆಗೆ ನಿರ್ಬಂದ ಹಾಕಬೇಕು ಎಂದು ಮನವಿ ಮಾಡಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸುಮಲತಾ ಕೆ.ಆರ್.ಎಸ್ ಅಣೆಕಟ್ಟೆಗೆ ಅಕ್ರಮ ಗಣಿಗಾರಿಕೆಯಿಂದ ಮುಂದೆ ಬರಲಿರುವ  ಅಪಾಯವನ್ನು ಅರಿತು ಈ ವಿಚಾರವಾಗಿ ಉನ್ನತ ಮಟ್ಟದ ತನಿಖೆ ನಡೆಸಬೇಕೆಂದು ಆಗ್ರಹಿಸಿರುವುದಾಗಿ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT