ಸಿಧು-ಅಮರಿಂದರ್ ಸಿಂಗ್ 
ದೇಶ

ಅಮರಿಂದರ್ ಸಿಂಗ್ ಭೇಟಿಗೆ ಸಿಧು ಸಮಯ ಕೇಳಿಲ್ಲ: ಪಂಜಾಬ್ ಸಿಎಂ ಸಲಹೆಗಾರ

ಪಂಜಾಬ್ ಕಾಂಗ್ರೆಸ್ ನ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ನವಜೋತ್ ಸಿಂಗ್ ಸಿಧು ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಅವರ ಭೇಟಿಗೆ ಸಮಯ ಕೇಳಿಲ್ಲ ಎಂದು ಅಮರಿಂದರ್ ಸಿಂಗ್ ಅವರ ಸಲಹೆಗಾರರು ಮಾಹಿತಿ ನೀಡಿದ್ದಾರೆ. 

ಚಂಡೀಗಢ: ಪಂಜಾಬ್ ಕಾಂಗ್ರೆಸ್ ನ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ನವಜೋತ್ ಸಿಂಗ್ ಸಿಧು ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಅವರ ಭೇಟಿಗೆ ಸಮಯ ಕೇಳಿಲ್ಲ ಎಂದು ಅಮರಿಂದರ್ ಸಿಂಗ್ ಅವರ ಸಲಹೆಗಾರರು ಮಾಹಿತಿ ನೀಡಿದ್ದಾರೆ. 

ಸಿಧು ಅಮರಿಂದರ್ ಸಿಂಗ್ ನಡುವೆ ಭಿನ್ನಾಭಿಪ್ರಾಯದ ಹೊರತಾಗಿಯೂ ಕಾಂಗ್ರೆಸ್ ಹೈಕಮಾಂಡ್ ಸಿಧು ಅವರನ್ನು ಕಾಂಗ್ರೆಸ್ ನ ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿತ್ತು. 

ನೂತನ ರಾಜ್ಯಾಧ್ಯಕ್ಷ ನವಜೋತ್ ಸಿಂಗ್ ಸಿಧು ಅವರು ಅಮರಿಂದರ್ ಸಿಂಗ್ ಅವರನ್ನು ಭೇಟಿ ಮಾಡಲು ಸಮಯ ಕೇಳಿದ್ದರ ಬಗ್ಗೆ ವರದಿಗಳು ಪ್ರಕಟವಾಗಿದ್ದವು. 

ಅಮರಿಂದರ್ ಸಿಂಗ್ ಅವರು "ನನ್ನ ವಿರುದ್ಧ ಸಿಧು ಮಾಡಿದ್ದ ಅವಹೇಳನಕಾರಿ ಟ್ವೀಟ್ ಗಳಿಗೆ ಕ್ಷಮೆ  ಕೋರುವವರೆಗೂ ಭೇಟಿ ಸಾಧ್ಯವಿಲ್ಲ" ಎಂದು ಹೇಳಿದ್ದರು. ಮುಖ್ಯಮಂತ್ರಿಗಳ ಈ ನಿಲುವಿನಲ್ಲಿ ಯಾವುದೇ ಬದಲಾವಣೆಗಳೂ ಇಲ್ಲ ಎಂದು ಸಿಎಂ ಸಲಹೆಗಾರ ರವೀನ್ ತುಕ್ರಾಲ್ ಹೇಳಿದ್ದಾರೆ. 

ತಮ್ಮ ನಿಲುವನ್ನು ಎಐಸಿಸಿಪ್ರಧಾನ ಕಾರ್ಯದರ್ಶಿ ಹರೀಶ್ ರಾವತ್ ಅವರಿಗೂ ಅಮರಿಂದರ್ ಸಿಂಗ್ ವಿವರಿಸಿದ್ದು, ಕ್ಷಮೆ ಕೋರುವವರೆಗೂ ಸಿಧು ಅವರನ್ನು ಭೇಟಿ ಮಾಡುವುದಿಲ್ಲ ಎಂಬ ಸಂದೇಶ ರವಾನೆ ಮಾಡಿದ್ದಾರೆ. ಇನ್ನು ಸಿಧು ಅವರನ್ನು ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿದ ಬಗ್ಗೆ ಸಿಎಂ ಅಮರಿಂದರ್ ಸಿಂಗ್ ಈವರೆಗೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ವಿಶ್ವಕಪ್ ವಿಜೇತ ಅಂಧ ಕರ್ನಾಟಕದ ಆಟಗಾರ್ತಿಯರಿಗೆ ತಲಾ 10 ಲಕ್ಷ ನಗದು, ಸರ್ಕಾರಿ ಉದ್ಯೋಗ: ಸಿಎಂ ಸಿದ್ದರಾಮಯ್ಯ ಘೋಷಣೆ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಮತ್ತೊಂದು ಹೆಣ್ಣಿನೊಂದಿಗೆ ಮೋಹ, ನಂಬಿಕೆ ದ್ರೋಹ; ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಅಯೋಧ್ಯ ಧ್ವಜಾರೋಹಣ: ಸ್ವಿಚ್ ಅಥವಾ ಹಗ್ಗ ಬಳಸದ ಪ್ರಧಾನಿ, ಹೇಗೆ ನೆರವೇರಿಸಿದ್ರು?ಈ ಅದ್ಭುತ Video ನೋಡಿ..

ಬರವಣಿಗೆಯಲ್ಲಿ ಖುಷಿ ಕಂಡ ಪೊಲೀಸ್ ಅಧಿಕಾರಿ: 'ಬಸವಣ್ಣನ ವಚನ' ಗಳನ್ನು ಇಂಗ್ಲೀಷ್ ಗೆ ಅನುವಾದ ಮಾಡ್ತಿರೋ DYSP ಬಸವರಾಜ್ ಯಲಿಗಾರ್!

SCROLL FOR NEXT