ಲೋಕಸಭೆ ಅಧಿವೇಶನ 
ದೇಶ

ವಿರೋಧ ಪಕ್ಷ ನಾಯಕರ ತೀವ್ರ ಗದ್ದಲ, ಕೋಲಾಹಲ: ಲೋಕಸಭಾ ಅಧಿವೇಶನ ಶುಕ್ರವಾರಕ್ಕೆ ಮುಂದೂಡಿಕೆ

ಇತ್ತೀಚಿನ ಮೂರು ಕೃಷಿ ಕಾಯ್ದೆ ಸೇರಿದಂತೆ ವಿವಿಧ ವಿಷಯಗಳನ್ನು ಮುಂದಿಟ್ಟುಕೊಂಡು ಪ್ರತಿಪಕ್ಷದ ಸದಸ್ಯರು ಘೋಷಣೆಗಳನ್ನು ಕೂಗುತ್ತಾ ಲೋಕಸಭಾ ಅಧಿವೇಶನಕ್ಕೆ ಅಡ್ಡಿಪಡಿಸಿದ್ದರಿಂದ ಗುರುವಾರ ಪದೇ ಪದೇ ಮುಂದೂಡಲಾಯಿತು.

ನವದೆಹಲಿ: ಇತ್ತೀಚಿನ ಮೂರು ಕೃಷಿ ಕಾಯ್ದೆ ಸೇರಿದಂತೆ ವಿವಿಧ ವಿಷಯಗಳನ್ನು ಮುಂದಿಟ್ಟುಕೊಂಡು ಪ್ರತಿಪಕ್ಷದ ಸದಸ್ಯರು ಘೋಷಣೆಗಳನ್ನು ಕೂಗುತ್ತಾ ಲೋಕಸಭಾ ಅಧಿವೇಶನಕ್ಕೆ ಅಡ್ಡಿಪಡಿಸಿದ್ದರಿಂದ ಗುರುವಾರ ಪದೇ ಪದೇ ಮುಂದೂಡಲಾಯಿತು.

ಪದೇ ಪದೇ ಮುಂದೂಡಿಕೆ ನಂತರ ಸಂಜೆ 4 ಗಂಟೆಗೆ ಮತ್ತೆ ಅಧಿವೇಶನ ಆರಂಭವಾಯಿತು. ಈ ವೇಳೆ ಅಧ್ಯಕ್ಷರಾಗಿದ್ದ ಭರ್ತುಹಾರಿ ಮಹತಾಬ್ ಅವರು ಪ್ರತಿಭಟನಾ ನಿರತ ಸದಸ್ಯರನ್ನು ತಮ್ಮ ಆಸನಗಳಿಗೆ ಹಿಂತಿರುಗುವಂತೆ ಕೇಳಿಕೊಂಡಾಗಲೂ ಸದಸ್ಯರು ಮಾತುಗಳನ್ನು ಕೇಳದೆ ಪ್ರತಿಭಟನೆ ಮುಂದುವರೆಸಿದ್ದವು.

ಈ ಹಿನ್ನಲೆಯಲ್ಲಿ ಲೋಕಸಭೆ ಅಧಿವೇಶನವನ್ನು ಶುಕ್ರವಾರ ಬೆಳಿಗ್ಗೆ 11 ಗಂಟೆಗೆ ಮುಂದೂಡಲಾಗಿದೆ.

ಪೆಗಾಸಸ್ ಬೇಹುಗಾರಿಕೆ ವಿವಾದ ಮತ್ತು ಮೂರು ಕೃಷಿ ಕಾಯ್ದೆ ಹಿಂತೆಗೆದುಕೊಳ್ಳುವಂತೆ ಒತ್ತಾಯಿಸಿ ಹಲವಾರು ವಿಷಯಗಳ ಕುರಿತು ಪ್ರತಿಪಕ್ಷದ ಸದಸ್ಯರು ಘೋಷಣೆಗಳನ್ನು ಕೂಗುತ್ತಾ ಕೋಲಾಹಲ ಸೃಷ್ಟಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಭ್ರಷ್ಟರಿಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಶಾಕ್: ಏಕ ಕಾಲದಲ್ಲಿ ರಾಜ್ಯದ 10 ಕಡೆ ದಾಳಿ- ಪರಿಶೀಲನೆ

Kabaddi World Cup 2025: ಭಾರತದ ಸಿಂಹಿಣಿಯರ ಮುಡಿಗೇರಿದ ವಿಶ್ವಕಪ್‌ ಕಿರೀಟ, ಸತತ 2ನೇ ಬಾರಿಗೆ ಪ್ರಶಸ್ತಿ ಗೆದ್ದ ಭಾರತ

ಬ್ರಾಹ್ಮಣನೊಬ್ಬ ತನ್ನ ಮಗಳನ್ನು ನನ್ನ ಮಗನಿಗೆ ದಾನ ಮಾಡುವವರೆಗೆ ಮೀಸಲಾತಿ ಮುಂದುವರೆಯಲಿ: IAS ಅಧಿಕಾರಿ ವಿವಾದಾತ್ಮಕ ಹೇಳಿಕೆ

ಆಫ್ರಿಕಾದಲ್ಲಿ ಜ್ವಾಲಾಮುಖಿ ಸ್ಫೋಟ: ಭಾರತದತ್ತ ಬರುತ್ತಿರುವ ಬೂದಿ ಹೊಗೆ, ವಿಮಾನಗಳ ಹಾರಾಟಕ್ಕೆ ಅಡ್ಡಿ

ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಫೈಟ್: ಮಲ್ಲಿಕಾರ್ಜುನ ಖರ್ಗೆಗೆ ಪ್ರಾಫಿಟ್; CM ಹುದ್ದೆ ನೀಡುವಂತೆ ಸೋನಿಯಾಗೆ ದಲಿತ ನಾಯಕರ ಪತ್ರ!

SCROLL FOR NEXT