ಲೋಕಸಭೆ ಅಧಿವೇಶನ 
ದೇಶ

ವಿರೋಧ ಪಕ್ಷ ನಾಯಕರ ತೀವ್ರ ಗದ್ದಲ, ಕೋಲಾಹಲ: ಲೋಕಸಭಾ ಅಧಿವೇಶನ ಶುಕ್ರವಾರಕ್ಕೆ ಮುಂದೂಡಿಕೆ

ಇತ್ತೀಚಿನ ಮೂರು ಕೃಷಿ ಕಾಯ್ದೆ ಸೇರಿದಂತೆ ವಿವಿಧ ವಿಷಯಗಳನ್ನು ಮುಂದಿಟ್ಟುಕೊಂಡು ಪ್ರತಿಪಕ್ಷದ ಸದಸ್ಯರು ಘೋಷಣೆಗಳನ್ನು ಕೂಗುತ್ತಾ ಲೋಕಸಭಾ ಅಧಿವೇಶನಕ್ಕೆ ಅಡ್ಡಿಪಡಿಸಿದ್ದರಿಂದ ಗುರುವಾರ ಪದೇ ಪದೇ ಮುಂದೂಡಲಾಯಿತು.

ನವದೆಹಲಿ: ಇತ್ತೀಚಿನ ಮೂರು ಕೃಷಿ ಕಾಯ್ದೆ ಸೇರಿದಂತೆ ವಿವಿಧ ವಿಷಯಗಳನ್ನು ಮುಂದಿಟ್ಟುಕೊಂಡು ಪ್ರತಿಪಕ್ಷದ ಸದಸ್ಯರು ಘೋಷಣೆಗಳನ್ನು ಕೂಗುತ್ತಾ ಲೋಕಸಭಾ ಅಧಿವೇಶನಕ್ಕೆ ಅಡ್ಡಿಪಡಿಸಿದ್ದರಿಂದ ಗುರುವಾರ ಪದೇ ಪದೇ ಮುಂದೂಡಲಾಯಿತು.

ಪದೇ ಪದೇ ಮುಂದೂಡಿಕೆ ನಂತರ ಸಂಜೆ 4 ಗಂಟೆಗೆ ಮತ್ತೆ ಅಧಿವೇಶನ ಆರಂಭವಾಯಿತು. ಈ ವೇಳೆ ಅಧ್ಯಕ್ಷರಾಗಿದ್ದ ಭರ್ತುಹಾರಿ ಮಹತಾಬ್ ಅವರು ಪ್ರತಿಭಟನಾ ನಿರತ ಸದಸ್ಯರನ್ನು ತಮ್ಮ ಆಸನಗಳಿಗೆ ಹಿಂತಿರುಗುವಂತೆ ಕೇಳಿಕೊಂಡಾಗಲೂ ಸದಸ್ಯರು ಮಾತುಗಳನ್ನು ಕೇಳದೆ ಪ್ರತಿಭಟನೆ ಮುಂದುವರೆಸಿದ್ದವು.

ಈ ಹಿನ್ನಲೆಯಲ್ಲಿ ಲೋಕಸಭೆ ಅಧಿವೇಶನವನ್ನು ಶುಕ್ರವಾರ ಬೆಳಿಗ್ಗೆ 11 ಗಂಟೆಗೆ ಮುಂದೂಡಲಾಗಿದೆ.

ಪೆಗಾಸಸ್ ಬೇಹುಗಾರಿಕೆ ವಿವಾದ ಮತ್ತು ಮೂರು ಕೃಷಿ ಕಾಯ್ದೆ ಹಿಂತೆಗೆದುಕೊಳ್ಳುವಂತೆ ಒತ್ತಾಯಿಸಿ ಹಲವಾರು ವಿಷಯಗಳ ಕುರಿತು ಪ್ರತಿಪಕ್ಷದ ಸದಸ್ಯರು ಘೋಷಣೆಗಳನ್ನು ಕೂಗುತ್ತಾ ಕೋಲಾಹಲ ಸೃಷ್ಟಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

ಬೆಂಗಳೂರಿಗೂ ಎಂಟ್ರಿ ಕೊಟ್ಟಿತೇ ಮಹಾಮಾರಿ ಎಬೋಲಾ? ಆಫ್ರಿಕಾದಿಂದ ಬಂದ ಮಹಿಳೆಯಲ್ಲಿ ಸೋಂಕಿನ ಲಕ್ಷಣ ಪತ್ತೆ, ಆರೋಗ್ಯ ಇಲಾಖೆ ಹೈ ಅಲರ್ಟ್

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

SCROLL FOR NEXT