ಸಿಧು-ಅಮರಿಂದರ್ ಸಿಂಗ್ 
ದೇಶ

ನವಜೋತ್ ಸಿಂಗ್ ಸಿಧು ಪದಗ್ರಹಣ ಸಮಾರಂಭದಲ್ಲಿ ಭಾಗಿಯಾಗಲಿರುವ ಸಿಎಂ ಅಮರಿಂದರ್ ಸಿಂಗ್

 ಪಂಜಾಬ್ ಸಿಎಂ ಅಮರಿಂದರ್ ಸಿಂಗ್ ಪಕ್ಷದ ಶಾಸಕರನ್ನು ಜು.23 ರಂದು "ಚಹಾ"ಕೂಟಕ್ಕೆ ಆಹ್ವಾನಿಸಿದ್ದು, ಅಲ್ಲಿಂದ ಎಲ್ಲರೂ ಕಾಂಗ್ರೆಸ್ ಅಧ್ಯಕ್ಷರ ಪದಗ್ರಹಣ ಕಾರ್ಯಕ್ರಮಕ್ಕೆ ತೆರಳಲಿದ್ದಾರೆ. 

ಚಂಡೀಗಢ: ಪಂಜಾಬ್ ಸಿಎಂ ಅಮರಿಂದರ್ ಸಿಂಗ್ ಪಕ್ಷದ ಶಾಸಕರನ್ನು ಜು.23 ರಂದು "ಚಹಾ"ಕೂಟಕ್ಕೆ ಆಹ್ವಾನಿಸಿದ್ದು, ಅಲ್ಲಿಂದ ಎಲ್ಲರೂ ಕಾಂಗ್ರೆಸ್ ಅಧ್ಯಕ್ಷರ ಪದಗ್ರಹಣ ಕಾರ್ಯಕ್ರಮಕ್ಕೆ ತೆರಳಲಿದ್ದಾರೆ. 

ನವಜೋತ್ ಸಿಂಗ್ ಸಿಧು ಜು.23 ರಂದು ಪಂಜಾಬ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಸಿಧು ಅವರನ್ನು ಭೇಟಿ ಮಾಡುವುದಕ್ಕೂ ನಿರಾಕರಿಸುತ್ತಿದ್ದ ಸಿಎಂ ಅಮರಿಂದರ್ ಸಿಂಗ್ ಈಗ ಪದಗ್ರಹಣ ಕಾರ್ಯಕ್ರಮದಲ್ಲಿ ಭಾಗವಹಿಸಲು ನಿರ್ಧರಿಸಿರುವುದು ಪಂಜಾಬ್ ನಲ್ಲಿ ಅರಿಂದರ್ ಸಿಂಗ್-ಸಿಧು ನಡುವಿನ ಭಿನ್ನಾಭಿಪ್ರಾಯ ಕೊನೆಗೊಳ್ಳುವ ಸೂಚನೆಯಾಗಿದೆ. 

ಸಿಎಂ ಮಾಧ್ಯಮ ಸಲಹೆಗಾರರ ಟ್ವೀಟ್ ನ ಪ್ರಕಾರ ನೂತನವಾಗಿ ನೇಮಕಗೊಂಡಿರುವ್ ಕುಲ್ಜೀತ್ ಸಿಂಗ್ ನಗ್ರಾ, ಸಂಗತ್ ಸಿಂಗ್ ಗಿಲ್ಜಿಯಾನ್ ಅಮರಿಂದರ್ ಸಿಂಗ್ ಗೆ ಕಾರ್ಯಕ್ರಮದಲ್ಲಿ ಭಾಗಿಯಾಗಲು ಆಹ್ವಾನ ನೀಡಿದ್ದರು ಎಂದು ತಿಳಿಸಿದ್ದಾರೆ. 
 
ಅಮರಿಂದರ್ ಸಿಂಗ್ ವಿರುದ್ಧ ಸಿಧು ಅವಹೇಳನಕಾರಿ ಟ್ವೀಟ್, ಆರೋಪ ಮಾಡಿದ್ದರಿಂದ ಉಭಯ ನಾಯಕರ ನಡುವೆ ಭಿನ್ನಾಭಿಪ್ರಾಯ ಮೂಡಿತ್ತು. ಅಮರಿಂದರ್ ಸಿಂಗ್ ಅವರು "ನನ್ನ ವಿರುದ್ಧ ಸಿಧು ಮಾಡಿದ್ದ ಅವಹೇಳನಕಾರಿ ಟ್ವೀಟ್ ಗಳಿಗೆ ಕ್ಷಮೆ  ಕೋರುವವರೆಗೂ ಭೇಟಿ ಸಾಧ್ಯವಿಲ್ಲ" ಎಂದು ಹೇಳಿದ್ದರು. ಮುಖ್ಯಮಂತ್ರಿಗಳ ಈ ನಿಲುವಿನಲ್ಲಿ ಯಾವುದೇ ಬದಲಾವಣೆಗಳೂ ಇಲ್ಲ ಎಂದು ಸಿಎಂ ಸಲಹೆಗಾರ ರವೀನ್ ತುಕ್ರಾಲ್ ಹೇಳಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT