ಜಲಾವೃತ ರಸ್ತೆಗಳಲ್ಲಿ ಸಿಲುಕಿದ ವಾಹನಗಳು 
ದೇಶ

ಮಹಾರಾಷ್ಟ್ರ: ಮಳೆ ಅಬ್ಬರಕ್ಕೆ 129 ಜನ ಸಾವು; 84,452 ಮಂದಿ ಸ್ಥಳಾಂತರ

ಮಹಾರಾಷ್ಟ್ರದಲ್ಲಿ ಮಳೆಯಿಂದ ಉಂಟಾಗಿರುವ ಹಾನಿ, ಪ್ರವಾಹದ ಅನಾಹುತಗಳಿಂದ 129 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ.

ಪುಣೆ: ಮಹಾರಾಷ್ಟ್ರದಲ್ಲಿ ಮಳೆಯಿಂದ ಉಂಟಾಗಿರುವ ಹಾನಿ, ಪ್ರವಾಹದ ಅನಾಹುತಗಳಿಂದ 129 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. 

ಕಳೆದ 2 ದಿನಗಳಲ್ಲಿ ರಾಯಗಢ, ರತ್ನಗಿರಿ ಸೇರಿ ರಾಜ್ಯದ ಹಲವೆಡೆ ಭೂಕುಸಿತಗಳು ಸಂಭವಿಸಿದ್ದು, ಪುಣೆ ವಿಭಾಗದಲ್ಲಿ 84,452 ಮಂದಿಯನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸಲಾಗಿದೆ ಎಂದು ಅಲ್ಲಿನ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ರಾಯ್ ಘಡದ ಮಹದ್ ತೆಹ್ಸಿಲ್ ನಲ್ಲಿ ಸಂಭವಿಸಿದ ಭೂ ಕುಸಿತದಿಂದ 38 ಮಂದಿ ಸಾವನ್ನಪ್ಪಿದ್ದರೆ, 8 ಮಂದಿ ನೇಪಾಳಿ ಕಾರ್ಮಿಕರು ಸೇರಿ 11 ಮಂದಿಯನ್ನು ಅವರಿದ್ದ ಬಸ್ ಪ್ರವಾಹದಲ್ಲಿ ಕೊಚ್ಚಿ ಹೋಗುವುದಕ್ಕೂ ಮುನ್ನ ರಕ್ಷಿಸಿರುವ ಘಟನೆ ಪಶ್ಚಿಮ ಮಹಾರಾಷ್ಟ್ರದ ಕೊಲ್ಹಾಪುರ ಜಿಲ್ಲೆಯಲ್ಲಿ ನಡೆದಿದೆ.

48 ಗಂಟೆಗಳಲ್ಲಿ ಮಹಾರಾಷ್ಟ್ರದಲ್ಲಿ ಮಳೆ, ಪ್ರವಾಹದ ಕಾರಣಕ್ಕಾಗಿ ಸಂಭವಿಸಿರುವ ಸಾವುಗಳ ಸಂಖ್ಯೆ 129 ಕ್ಕೆ ಏರಿಕೆಯಾಗಿದೆ. ಕೊಲ್ಹಾಪುರ ಜಿಲ್ಲೆಯೊಂದರಲ್ಲೇ 40,882 ಮಂದಿಯನ್ನು ಪ್ರವಾಹ ಪೀಡಿತ ಪ್ರದೇಶಗಳಿಂದ ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸಲಾಗಿದೆ.

ಬೆಳಿಗ್ಗೆಯಿಂದಲೂ ಪರಿಸ್ಥಿತಿಯ ಬಗ್ಗೆ ಸಿಎಂ ಉದ್ಧವ್ ಠಾಕ್ರೆ ಮಾಹಿತಿ ಪಡೆಯುತ್ತಿದ್ದು, ಮಳೆ ಹಾಗೂ ಪ್ರವಾಹದಿಂದಾಗಿ ಸಂಭವಿಸಿರುವ ನಷ್ಟದ ಪ್ರಮಾಣ ಈಗಲೇ ಅಂದಾಜಿಗೆ ಸಿಗುತ್ತಿಲ್ಲ ಎಂದು ಹೇಳಿದ್ದಾರೆ. "ಪ್ರಧಾನಿ ನರೇಂದ್ರ ಮೋದಿ ನನ್ನೊಂದಿಗೆ ಮಾತನಾಡಿದ್ದು, ಪರಿಸ್ಥಿತಿ ಎದುರಿಸಲು ಎಲ್ಲಾ ರೀತಿಯ ನೆರವು ನೀಡುವುದಾಗಿ ಭರವಸೆ ನೀಡಿದ್ದಾರೆ" ಎಂದು ಉದ್ಧವ್ ಠಾಕ್ರೆ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT