ಟಿಎಂಸಿ ಸಂಸದ ಸಂತನು ಸೇನ್ 
ದೇಶ

ಅಶಿಸ್ತಿನ ವರ್ತನೆ: ಟಿಎಂಸಿ ಸಂಸದ ಸಂತನು ಸೇನ್ ಸಂಸತ್ ಮುಂಗಾರು ಅಧಿವೇಶನದಿಂದ ಅಮಾನತು

ರಾಜ್ಯಸಭೆಯಲ್ಲಿ ಕೇಂದ್ರ ಸಚಿವ ಅಶ್ಚಿನಿ ವೈಷ್ಣವ್ ಅವರೊಂದಿಗೆ ಅಶಿಸ್ತಿನ ವರ್ತನೆ ತೋರಿದ ಹಿನ್ನೆಲೆಯಲ್ಲಿ ರಾಜ್ಯಸಭೆಯ ತೃಣಮೂಲ ಕಾಂಗ್ರೆಸ್ ಪಕ್ಷದ ಸದಸ್ಯ ಸಂತನು ಸೇನ್ ಅವರನ್ನು ಸಂಸತ್ತಿನ ಮುಂಗಾರು ಅಧಿವೇಶನದ ಉಳಿದ ಅವಧಿಗೆ ರಾಜ್ಯಸಭೆಯಿಂದ ಅಮಾನತುಗೊಳಿಸಲಾಗಿದೆ.

ನವದೆಹಲಿ: ರಾಜ್ಯಸಭೆಯಲ್ಲಿ ಕೇಂದ್ರ ಸಚಿವ ಅಶ್ಚಿನಿ ವೈಷ್ಣವ್ ಅವರೊಂದಿಗೆ ಅಶಿಸ್ತಿನ ವರ್ತನೆ ತೋರಿದ ಹಿನ್ನೆಲೆಯಲ್ಲಿ ರಾಜ್ಯಸಭೆಯ ತೃಣಮೂಲ ಕಾಂಗ್ರೆಸ್ ಪಕ್ಷದ ಸದಸ್ಯ ಸಂತನು ಸೇನ್ ಅವರನ್ನು ಸಂಸತ್ತಿನ ಮುಂಗಾರು ಅಧಿವೇಶನದ ಉಳಿದ ಅವಧಿಗೆ ರಾಜ್ಯಸಭೆಯಿಂದ ಅಮಾನತುಗೊಳಿಸಲಾಗಿದೆ.

ಗುರುವಾರ ಪ್ರತಿಪಕ್ಷದ ಸಂಸದರು ಪೆಗಾಸಸ್ ವಿವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಲಾಹಲವನ್ನು ಸೃಷ್ಟಿಸಿತ್ತು. 

ಈ ಸಂದರ್ಭದಲ್ಲಿ ರಾಜ್ಯಸಭೆಯಲ್ಲಿ ಐಟಿ ಸಚಿವ ಅಶ್ವಿನಿ ವೈಷ್ಣವ್ ಅವರು ಸ್ನೂಪಿಂಗ್ ವಿಷಯದ ಬಗ್ಗೆ ಹೇಳಿಕೆ ನೀಡಲು ಮುಂದಾಗಿದ್ದರು. ಆಗ ಸೇನ್ ಅವರು ವೈಷ್ಣವ್ ಅವರ ಕೈಯಲ್ಲಿದ್ದ ಹೇಳಿಕೆಯ ಕಾಗದ ಗಳನ್ನು ಕಸಿದುಕೊಂಡು ಹರಿದು ಹಾಕಿದ್ದರು.

ಸಂತನು ಸೇನ್ ಅವರು ಅಶಿಸ್ತಿನ ವರ್ತನೆ ಪ್ರದರ್ಶಿಸಿದ ಹಿನ್ನೆಲೆಯಲ್ಲಿ ಆಗಸ್ಟ್ 13ರವರೆಗೂ ನಡೆಯಲಿರುವ ಮುಂಗಾರು ಅಧಿವೇಶನದಿಂದ ದೂರ ಇರುವಂತೆ ರಾಜ್ಯಸಭೆ ಸಭಾಪತಿ ವೆಂಕಯ್ಯ ನಾಯ್ಡು ಸೂಚನೆ ನೀಡಿದ್ದಾರೆಂದು ತಿಳಿದುಬಂದಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal Floods: ಸಾವಿನ ಸಂಖ್ಯೆ 359ಕ್ಕೆ ಏರಿಕೆ; 288 ಭಾರತೀಯರು ಸೇರಿ 826 ಮಂದಿ ನಾಪತ್ತೆ; ಮತ್ತೆ ಪ್ರವಾಹ ಭೀತಿ! ಹೊಸ ಸರೋವರ ಪತ್ತೆ!

Nepal floods: ನೇಪಾಳ ಪ್ರವಾಹದ ಭೀಕರತೆ, 150 ಕಿ.ಮೀ ದೂರದ ಉತ್ತರ ಪ್ರದೇಶಕ್ಕೆ ಕೊಚ್ಚಿಕೊಂಡು ಬಂದ ಶವಗಳು!

Nepal Floods: ‘ಸಾವಿನ ಸಂಖ್ಯೆ ಊಹೆಗೂ ನಿಲುಕದಷ್ಟು ಏರಬಹುದು’; ಚೀನಾ ನಡೆ ಕುರಿತು ನೇಪಾಳ ಮಾಜಿ ಸಚಿವರ ಅನುಮಾನ!

RSS ಪಥಸಂಚಲನದಲ್ಲಿ ಭಾಗಿ: ಯಾದಗಿರಿಯ ಇಬ್ಬರು ಸರ್ಕಾರಿ ಶಿಕ್ಷಕರ ಅಮಾನತು

ಮಣಿಪುರದಲ್ಲಿ ಉಗ್ರರ ಅಟ್ಟಹಾಸ: ನಾಲ್ವರ ಸಾವು, ಒಬ್ಬ ನಾಪತ್ತೆ