ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ 
ದೇಶ

ಮುಂದಿನ ವಾರ ಕಾಂಗ್ರೆಸ್ ಆಡಳಿತದ ರಾಜಸ್ಥಾನ ಸಂಪುಟ ವಿಸ್ತರಣೆ ಸಾಧ್ಯತೆ- ಪಕ್ಷದ ಮೂಲಗಳು

ಮುಂದಿನ ವಾರ ಕಾಂಗ್ರೆಸ್ ಆಡಳಿತದ ರಾಜಸ್ಥಾನ ಸಚಿವ ಸಂಪುಟ ವಿಸ್ತರಣೆಯಾಗುವ ಸಾಧ್ಯತೆಯಿರುವುದಾಗಿ ಪಕ್ಷದ ಮೂಲಗಳು ಶನಿವಾರ ತಿಳಿಸಿವೆ.

ಜೈಪುರ: ಮುಂದಿನ ವಾರ ಕಾಂಗ್ರೆಸ್ ಆಡಳಿತದ ರಾಜಸ್ಥಾನ ಸಚಿವ ಸಂಪುಟ ವಿಸ್ತರಣೆಯಾಗುವ ಸಾಧ್ಯತೆಯಿರುವುದಾಗಿ ಪಕ್ಷದ ಮೂಲಗಳು ಶನಿವಾರ ತಿಳಿಸಿವೆ.

ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ. ಸಿ. ವೇಣುಗೋಪಾಲ್ ಮತ್ತು ರಾಜಸ್ಥಾನ ಐಎಸಿಸಿ ಉಸ್ತುವಾರಿ ಶನಿವಾರ ರಾತ್ರಿ ಜೈಪುರಕ್ಕೆ ಆಗಮಿಸಿ, ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರ ನಿವಾಸಕ್ಕೆ ತೆರಳಿ ಮಾತುಕತೆ ನಡೆಸಿದ್ದಾರೆ.ಸಂಪುಟ ಪುನರ್ ರಚನೆ ಮತ್ತು ಇತರ ರಾಜಕೀಯ ನೇಮಕಾತಿ ಈ ಸಭೆಯ ಅಜೆಂಡಾ ಆಗಿತ್ತು ಎಂದು ಮೂಲಗಳು ಹೇಳಿವೆ.

ಉಭಯ ನಾಯಕರು ರಸ್ತೆ ಮೂಲಕ ಜೈಪುರಕ್ಕೆ ಆಗಮಿಸಿದ್ದಾರೆ. ವೇಣುಗೋಪಾಲ್ ರಾಜಸ್ಥಾನದಿಂದ ರಾಜ್ಯಸಭೆಯ ಸದಸ್ಯರಾಗಿದ್ದಾರೆ. ಪಂಜಾಬ್ ನಂತರ ರಾಜಸ್ಥಾನದತ್ತ ಕಾಂಗ್ರೆಸ್ ಹೈಕಮಾಂಡ್ ಗಮನ ಹರಿಸಿದೆ. ಅಲ್ಲಿ ಸಚಿನ್ ಪೈಲಟ್ ಗುಂಪಿನಿಂದ ಸಂಪುಟ ವಿಸ್ತರಣೆ ಹಾಗೂ ರಾಜಕೀಯ ನೇಮಕಾತಿಗಾಗಿ ತೀವ್ರವಾದ ಬೇಡಿಕೆಯಿದೆ. ಕಳೆದ ವರ್ಷ ಗೆಹ್ಲೋಟ್ ನಾಯಕತ್ವ ವಿರುದ್ಧ ಸಚಿನ್ ಪೈಲಟ್ ನೇತೃತ್ವದಲ್ಲಿ 18 ಶಾಸಕರು ಬಂಡಾಯವೆದಿದ್ದರು.

ತಮ್ಮ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಕಾಂಗ್ರೆಸ್ ಹೈಕಮಾಂಡ್ ಶೀಘ್ರದಲ್ಲೇ ಸೂಕ್ತ ಕ್ರಮ ಕೈಗೊಳ್ಳಲಿದೆ ಎಂದು ಸಚಿನ್ ಪೈಲಟ್ ಕೆಲ ದಿನಗಳ ಹಿಂದೆ ಹೇಳಿಕೆ ನೀಡಿದ್ದರು.ಪ್ರಸ್ತುತ,ಅಲ್ಲಿ ಮುಖ್ಯಮಂತ್ರಿ ಸೇರಿದಂತೆ ಸಚಿವರ ಪರಿಷತ್ತಿನಲ್ಲಿ 21 ಸದಸ್ಯರಿದ್ದು, 9 ಸ್ಥಾನಗಳು ಖಾಲಿ ಇವೆ. ರಾಜಸ್ಥಾನ ಸರ್ಕಾರ ಗರಿಷ್ಠ 30 ಮಂತ್ರಿಗಳನ್ನು ಹೊಂದುವ ಅವಕಾಶವಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮಕ್ಕಳ ಸಾವಿಗೆ ಪ್ರತೀಕಾರ: ಇಸ್ರೇಲ್-ಅಮೆರಿಕ, ಗಲ್ಫ್ ದೇಶಗಳ ಮೇಲೆ ದಾಳಿ ನಿಲ್ಲಲ್ಲ; ಇರಾನ್ ಹೊಸ ಸರ್ವೋಚ್ಛ ನಾಯಕ ವಾರ್ನಿಂಗ್!

No shortage of fuel: ಹಾರ್ಮುಜ್ ಜಲಸಂಧಿ ತಲುಪಿಸಬಹುದಾದ ತೈಲಕ್ಕಿಂತ ಹೆಚ್ಚಿನದ್ದು ಬೇರೆಡೆಯಿಂದ ಭಾರತ ತಲುಪಿದೆ; ಪೆಟ್ರೋಲಿಯಂ ಸಚಿವ

ಮಧ್ಯಪ್ರಾಚ್ಯ ಯುದ್ಧಗ್ರಸ್ತ: ತೈಲ, ಅನಿಲ ಪೂರೈಕೆ ವ್ಯತ್ಯಯ ಸಂಕಷ್ಟ; ಆದರೂ ರಹಸ್ಯ'ಭೂಗತ ಗುಹೆ'ಗಳಿಂದ ಭಾರತಕ್ಕೆ No Tension!

ನಮ್ಮ ಶಕ್ತಿ ಇರಾನ್ ನಿರ್ನಾಮಕ್ಕೆ ಮೀಸಲು, ಹಾರ್ಮುಜ್ ಜಲಸಂಧಿಯಲ್ಲಿ ಟ್ಯಾಂಕರ್ ಗಳಿಗೆ ಬೆಂಗಾವಲು ನೀಡಲ್ಲ: ಅಮೆರಿಕ

ಮಾರ್ಚ್ 16 ರಂದು ರಾಜ್ಯದ ಎರಡು ಕ್ಷೇತ್ರಗಳ ಉಪ ಚುನಾವಣೆ ಸೇರಿದಂತೆ ಐದು ರಾಜ್ಯಗಳ ಚುನಾವಣೆ ಘೋಷಣೆ ಸಾಧ್ಯತೆ

SCROLL FOR NEXT