ಪ್ರವಾಹದ ಚಿತ್ರ 
ದೇಶ

ಮಹಾರಾಷ್ಟ್ರ ಪ್ರವಾಹ: ರಾಯ್‌ಗಡದಲ್ಲಿ ಮಳೆಯಿಂದಾಗಿ 47 ಮಂದಿ ಸಾವು, 53 ಮಂದಿ ನಾಪತ್ತೆ!

ಮಹಾರಾಷ್ಟ್ರದ ರಾಯ್ಗಡ್ ಜಿಲ್ಲೆಯಲ್ಲಿ ಶನಿವಾರ ಮಳೆ ಸಂಬಂಧಿತ ಘಟನೆಗಳಲ್ಲಿ ಸಾವಿನ ಸಂಖ್ಯೆ 47ಕ್ಕೆ ಏರಿಕೆಯಾಗಿದ್ದು ತಾಲಿಯೆ ಗ್ರಾಮದಲ್ಲಿ ಸಂಭವಿಸಿದ ಭೂಕುಸಿತದಲ್ಲಿ 37 ಮಂದಿ ಮೃತಪಟ್ಟಿದ್ದಾರೆ.

ಮುಂಬೈ: ಮಹಾರಾಷ್ಟ್ರದ ರಾಯ್ಗಡ್ ಜಿಲ್ಲೆಯಲ್ಲಿ ಶನಿವಾರ ಮಳೆ ಸಂಬಂಧಿತ ಘಟನೆಗಳಲ್ಲಿ ಸಾವಿನ ಸಂಖ್ಯೆ 47ಕ್ಕೆ ಏರಿಕೆಯಾಗಿದ್ದು ತಾಲಿಯೆ ಗ್ರಾಮದಲ್ಲಿ ಸಂಭವಿಸಿದ ಭೂಕುಸಿತದಲ್ಲಿ 37 ಮಂದಿ ಮೃತಪಟ್ಟಿದ್ದಾರೆ.

ತಾಲಿಯೆ ಗ್ರಾಮದಲ್ಲಿ ಸಂಭವಿಸಿದ ಭೂಕುಸಿತದಲ್ಲಿ 37 ಮಂದಿ ಸಾವನ್ನಪ್ಪಿದ್ದಾರೆ. ಉಳಿದ ಕಡೆ 10 ಮಂದಿ ಸೇರಿದಂತೆ ಕೊಂಕಣ ಪ್ರದೇಶದ ರಾಯ್ಗಡ್ ಜಿಲ್ಲೆಯಲ್ಲಿ ಮಳೆ ಸಂಬಂಧಿತ ಘಟನೆಗಳಲ್ಲಿ ಒಟ್ಟು 47 ಜನರು ಸಾವನ್ನಪ್ಪಿದ್ದಾರೆ.

ಕೊಲ್ಹಾಪುರದಲ್ಲಿ ಐದು, ಮುಂಬೈ ಉಪನಗರದಲ್ಲಿ ನಾಲ್ಕು, ಸಿಂಧುದರ್ಗ್ನಲ್ಲಿ ಎರಡು ಮತ್ತು ಪುಣೆಯಲ್ಲಿ ಒಂದು ಸಾವು ಸಂಭವಿಸಿದೆ ಎಂದು ವರದಿ ತಿಳಿಸಿದೆ.

ಇನ್ನೂ ಮಹಾರಾಷ್ಟ್ರದಲ್ಲಿ ಒಟ್ಟಾರೆ 138 ಮಂದಿ ಮೃತಪಟ್ಟಿದ್ದು 59 ಜನರು ಕಾಣೆಯಾಗಿದ್ದಾರೆ. ಅದರಲ್ಲಿ 53 ಮಂದಿ ರಾಯಗಡ್, ನಾಲ್ವರು ಸತಾರಾ ಮತ್ತು ಇಬ್ಬರು ಥಾಣೆ ಮೂಲದವರಾಗಿದ್ದಾರೆ. ಭಾರೀ ಮಳೆಯಿಂದಾಗಿ ಇದುವರೆಗೆ 89 ಜನರಿಗೆ ಗಾಯಗಳಾಗಿವೆ.

ಕೊಲ್ಹಾಪುರ ಜಿಲ್ಲೆಯಲ್ಲೇ ಭಾರೀ ಮಳೆ ಹಾಗೂ ಪ್ರವಾಹದ ಮುನ್ನೆಚ್ಚರಿಕೆಯಾಗಿ 40,882 ಸೇರಿದಂತೆ ಇದುವರೆಗೆ 89,333 ಜನರನ್ನು ಸ್ಥಳಾಂತರಿಸಲಾಗಿದೆ ಎಂದು ಇಲಾಖೆ ವರದಿಯಲ್ಲಿ ತಿಳಿಸಿದೆ.

ವಿವಿಧ ಸರ್ಕಾರಿ ಸಂಸ್ಥೆಗಳ 21 ತಂಡಗಳು ಮತ್ತು 59 ದೋಣಿಗಳು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT