ಪ್ರವಾಹದ ಚಿತ್ರ 
ದೇಶ

ಮಹಾರಾಷ್ಟ್ರ ಪ್ರವಾಹ: ರಾಯ್‌ಗಡದಲ್ಲಿ ಮಳೆಯಿಂದಾಗಿ 47 ಮಂದಿ ಸಾವು, 53 ಮಂದಿ ನಾಪತ್ತೆ!

ಮಹಾರಾಷ್ಟ್ರದ ರಾಯ್ಗಡ್ ಜಿಲ್ಲೆಯಲ್ಲಿ ಶನಿವಾರ ಮಳೆ ಸಂಬಂಧಿತ ಘಟನೆಗಳಲ್ಲಿ ಸಾವಿನ ಸಂಖ್ಯೆ 47ಕ್ಕೆ ಏರಿಕೆಯಾಗಿದ್ದು ತಾಲಿಯೆ ಗ್ರಾಮದಲ್ಲಿ ಸಂಭವಿಸಿದ ಭೂಕುಸಿತದಲ್ಲಿ 37 ಮಂದಿ ಮೃತಪಟ್ಟಿದ್ದಾರೆ.

ಮುಂಬೈ: ಮಹಾರಾಷ್ಟ್ರದ ರಾಯ್ಗಡ್ ಜಿಲ್ಲೆಯಲ್ಲಿ ಶನಿವಾರ ಮಳೆ ಸಂಬಂಧಿತ ಘಟನೆಗಳಲ್ಲಿ ಸಾವಿನ ಸಂಖ್ಯೆ 47ಕ್ಕೆ ಏರಿಕೆಯಾಗಿದ್ದು ತಾಲಿಯೆ ಗ್ರಾಮದಲ್ಲಿ ಸಂಭವಿಸಿದ ಭೂಕುಸಿತದಲ್ಲಿ 37 ಮಂದಿ ಮೃತಪಟ್ಟಿದ್ದಾರೆ.

ತಾಲಿಯೆ ಗ್ರಾಮದಲ್ಲಿ ಸಂಭವಿಸಿದ ಭೂಕುಸಿತದಲ್ಲಿ 37 ಮಂದಿ ಸಾವನ್ನಪ್ಪಿದ್ದಾರೆ. ಉಳಿದ ಕಡೆ 10 ಮಂದಿ ಸೇರಿದಂತೆ ಕೊಂಕಣ ಪ್ರದೇಶದ ರಾಯ್ಗಡ್ ಜಿಲ್ಲೆಯಲ್ಲಿ ಮಳೆ ಸಂಬಂಧಿತ ಘಟನೆಗಳಲ್ಲಿ ಒಟ್ಟು 47 ಜನರು ಸಾವನ್ನಪ್ಪಿದ್ದಾರೆ.

ಕೊಲ್ಹಾಪುರದಲ್ಲಿ ಐದು, ಮುಂಬೈ ಉಪನಗರದಲ್ಲಿ ನಾಲ್ಕು, ಸಿಂಧುದರ್ಗ್ನಲ್ಲಿ ಎರಡು ಮತ್ತು ಪುಣೆಯಲ್ಲಿ ಒಂದು ಸಾವು ಸಂಭವಿಸಿದೆ ಎಂದು ವರದಿ ತಿಳಿಸಿದೆ.

ಇನ್ನೂ ಮಹಾರಾಷ್ಟ್ರದಲ್ಲಿ ಒಟ್ಟಾರೆ 138 ಮಂದಿ ಮೃತಪಟ್ಟಿದ್ದು 59 ಜನರು ಕಾಣೆಯಾಗಿದ್ದಾರೆ. ಅದರಲ್ಲಿ 53 ಮಂದಿ ರಾಯಗಡ್, ನಾಲ್ವರು ಸತಾರಾ ಮತ್ತು ಇಬ್ಬರು ಥಾಣೆ ಮೂಲದವರಾಗಿದ್ದಾರೆ. ಭಾರೀ ಮಳೆಯಿಂದಾಗಿ ಇದುವರೆಗೆ 89 ಜನರಿಗೆ ಗಾಯಗಳಾಗಿವೆ.

ಕೊಲ್ಹಾಪುರ ಜಿಲ್ಲೆಯಲ್ಲೇ ಭಾರೀ ಮಳೆ ಹಾಗೂ ಪ್ರವಾಹದ ಮುನ್ನೆಚ್ಚರಿಕೆಯಾಗಿ 40,882 ಸೇರಿದಂತೆ ಇದುವರೆಗೆ 89,333 ಜನರನ್ನು ಸ್ಥಳಾಂತರಿಸಲಾಗಿದೆ ಎಂದು ಇಲಾಖೆ ವರದಿಯಲ್ಲಿ ತಿಳಿಸಿದೆ.

ವಿವಿಧ ಸರ್ಕಾರಿ ಸಂಸ್ಥೆಗಳ 21 ತಂಡಗಳು ಮತ್ತು 59 ದೋಣಿಗಳು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

SCROLL FOR NEXT