ಸುಪ್ರೀಂ ಕೋರ್ಟ್ 
ದೇಶ

ಸುಪ್ರೀಂ ಕೋರ್ಟ್ ನಲ್ಲಿ ಬಾಕಿ ಇರುವ ಪ್ರಕಣಗಳ ಸಂಖ್ಯೆ ಸಾರ್ವಕಾಲಿಕ ಏರಿಕೆ!

ಕೋವಿಡ್-19 ಸಾಂಕ್ರಾಮಿಕ ಹಲವು ಕ್ಷೇತ್ರಗಳ ಬೆಳವಣಿಗೆಯನ್ನು ಕುಂಠಿತಗೊಳಿಸಿರುವುದಷ್ಟೇ ಅಲ್ಲದೇ ನ್ಯಾಯದಾನ ಪ್ರಕ್ರಿಯೆಯನ್ನೂ ಕುಂಠಿತಗೊಳಿಸಿದೆ. 

ನವದೆಹಲಿ: ಕೋವಿಡ್-19 ಸಾಂಕ್ರಾಮಿಕ ಹಲವು ಕ್ಷೇತ್ರಗಳ ಬೆಳವಣಿಗೆಯನ್ನು ಕುಂಠಿತಗೊಳಿಸಿರುವುದಷ್ಟೇ ಅಲ್ಲದೇ ನ್ಯಾಯದಾನ ಪ್ರಕ್ರಿಯೆಯನ್ನೂ ಕುಂಠಿತಗೊಳಿಸಿದೆ. 

ಇತ್ತೀಚಿನ ದಿನಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ತ್ವರಿತವಾಗಿ ಇತ್ಯರ್ಥಗೊಳಿಸಲು ಕೋರ್ಟ್ ಗಳು ನಿರ್ಧರಿಸಿದ್ದರ ಪರಿಣಾಮ ನ್ಯಾಯಾಂಗದ ಪ್ರಕ್ರಿಯೆಗಳು ಚುರುಕು ಪಡೆಯುತ್ತಿದ್ದವು. ಆದರೆ ಈ ವರ್ಷದಲ್ಲಿ ಸುಪ್ರೀಂ ಕೋರ್ಟ್ ನಲ್ಲಿ ಬಾಕಿ ಇರುವ ಪ್ರಕರಣಗಳ ಸಂಖ್ಯೆ ಶೇ.4.3 ರಷ್ಟು ಏರಿಕೆಯಾಗಿದೆ. 

ಬಾಕಿ ಇರುವ ಪ್ರಕರಣಗಳ ಸಂಖ್ಯೆ 2021 ರ ಜನವರಿಯಿಂದ ಮೇ ವರೆಗೂ 68,000 ಕ್ಕೆ ಏರಿಕೆಯಾಗಿದ್ದು ಸಾರ್ವಕಾಲಿಕ ಏರಿಕೆಯಾಗಿದೆ. 2020 ರಲ್ಲಿ ಶೇ.1.4 ರಷ್ಟು ಇನ್ನಷ್ಟೇ ಇತ್ಯರ್ಥಗೊಳ್ಳಬೇಕಿದ್ದ ಪ್ರಕರಣಗಳಿದ್ದವು. 2019 ರಲ್ಲಿ ಶೇ.1.7 ರಷ್ಟಾಗಿತ್ತು. ಈಗ 2021 ರಲ್ಲಿ ಶೇ.4.3 ರಷ್ಟು ಪ್ರಕರಣಗಳು ಇನ್ನಷ್ಟೇ ಇತ್ಯರ್ಥಗೊಳ್ಳಬೇಕಿದೆ.

ಕೋವಿಡ್-19 ಸಾಂಕ್ರಾಮಿಕದ ಅವಧಿಯಲ್ಲಿ ಸುಪ್ರೀಂ ಕೋರ್ಟ್ ಎಂದಿನ ದಿನಗಳಿಗಿಂತಲೂ ಹೆಚ್ಚಿನ ಸಮಯ ಕೆಲಸ ಮಾಡಿದೆ. ಆದರೆ ಭೌತಿಕ ವಿಚಾರಣೆಗಿಂತಲೂ ಕೋರ್ಟ್ ನ ಕಲಾಪಗಳು ಆನ್ ಲೈನ್ ಮೂಲಕ ನಡೆದಿದ್ದು ಬಾಕಿ ಇರುವ ಪ್ರಕರಣಗಳ ಸಂಖ್ಯೆ ಹೆಚ್ಚಾಗುವುದಕ್ಕೆ ಪ್ರಮುಖ ಕಾರಣ ಎಂದು ವಿಶ್ಲೇಷಿಸಲಾಗುತ್ತಿದೆ.

ಆನ್ ಲೈನ್ ವಿಚಾರಣೆಯ ಪ್ರಾರಂಭದ ದಿನಗಳಲ್ಲಿ ಪ್ರಮುಖವಾದ ಪ್ರಕರಣಗಳನ್ನಷ್ಟೇ ಕೈಗೆತ್ತಿಕೊಳ್ಳಲಾಗುತ್ತಿತ್ತು. ನಂತರದ ದಿನಗಳಲ್ಲಿ ಕ್ರಮೇಣ ಇನ್ನಿತರ ಪ್ರಕರಣಗಳನ್ನೂ ವಿಚಾರಣೆ ನಡೆಸಲಾಗುತ್ತಿತ್ತು.

ಸುಪ್ರೀಂ ಕೋರ್ಟ್ ಗೆ 34 ನ್ಯಾಯಾಧೀಶರನ್ನು ನೀಡಲಾಗಿದೆ. ಆದರೆ ಈ ಪೈಕಿ 27 ನ್ಯಾಯಾಧೀಶರಷ್ಟೇ ಈಗ ಕಾರ್ಯನಿರ್ವಹಿಸುತ್ತಿದ್ದು, ಈ ವರ್ಷ ಇನ್ನಿಬ್ಬರು ನ್ಯಾಯಾಧೀಶರು ನಿವೃತ್ತರಾಗಲಿದ್ದಾರೆ ಮುಂದಿನ ವರ್ಷವೂ ಇಬ್ಬರು ನ್ಯಾಯಾಧೀಶರು ನಿವೃತ್ತರಾಗಲಿದ್ದು, ನ್ಯಾಯಾಧೀಶರ ಸಂಖ್ಯೆಯ ಇಳಿಕೆಯ ಪರಿಣಾಮ ಬಾಕಿ ಇರುವ ಪ್ರಕರಣಗಳ ಸಂಖ್ಯೆ ಇನ್ನೂ ಏರಿಕೆಯಾಗುವ ಸಾಧ್ಯತೆ ಇದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

SCROLL FOR NEXT