ದಿಲೀಪ್ ಘೋಷ್ 
ದೇಶ

ಕೇಂದ್ರದ ನಿಧಿಗಾಗಿ ಭೀಕ್ಷೆ ಬೇಡಲು ಪ್ರಧಾನಿ ಮೋದಿ ಭೇಟಿ ಬಯಸುತ್ತಿರುವ ಮಮತಾ- ದಿಲೀಪ್ ಘೋಷ್

ಕೇಂದ್ರ ನೀಡುವ ಸಂಪನ್ಮೂಲಗಳನ್ನು ದುರುಪಯೋಗಪಡಿಸಿಕೊಂಡಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಇದೀಗ, ಮಡಿಸಿದ ಕೈಗಳಿಂದ ನಿಧಿಗಾಗಿ ಬೇಡಲು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಲು ಬಯಸಿದ್ದಾರೆ ಎಂದು ಪಶ್ಚಿಮ ಬಂಗಾಳ ಬಿಜೆಪಿ ರಾಜ್ಯಾಧ್ಯಕ್ಷ ದಿಲೀಪ್ ಘೋಷ್ ಭಾನುವಾರ ಹೇಳಿದ್ದಾರೆ. 

ಕೊಲ್ಕತ್ತಾ: ಕೇಂದ್ರ ನೀಡುವ ಸಂಪನ್ಮೂಲಗಳನ್ನು ದುರುಪಯೋಗಪಡಿಸಿಕೊಂಡಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಇದೀಗ, ಮಡಿಸಿದ ಕೈಗಳಿಂದ ನಿಧಿಗಾಗಿ ಬೇಡಲು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಲು ಬಯಸಿದ್ದಾರೆ ಎಂದು ಪಶ್ಚಿಮ ಬಂಗಾಳ ಬಿಜೆಪಿ ರಾಜ್ಯಾಧ್ಯಕ್ಷ ದಿಲೀಪ್ ಘೋಷ್ ಭಾನುವಾರ ಹೇಳಿದ್ದಾರೆ. 

ಆದಾಗ್ಯೂ, ಅವರ ಹೇಳಿಕೆಗೆ ತಿರುಗೇಟು ನೀಡಿರುವ ಆಡಳಿತಾರೂಢ ಪಕ್ಷ, ಒಕ್ಕೂಟ ವ್ಯವಸ್ಥೆ ಬಗ್ಗೆ ಘೋಷ್ ಉತ್ತಮವಾಗಿ ತಿಳಿಯಬೇಕಾಗಿದೆ. ಈ ವ್ಯವಸ್ಥೆಯಡಿ ರಾಜ್ಯದ ಮುಖ್ಯಸ್ಥರು ಯಾವಾಗಬೇಕಾದರು ಪ್ರಧಾನಿಯನ್ನು ಭೇಟಿಯಾಗಬಹುದಾಗಿದೆ ಎಂದು ಹೇಳಿದೆ.

ಮಮತಾ ಬ್ಯಾನರ್ಜಿ ದೆಹಲಿ ಭೇಟಿ ನಿಗದಿ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿದ ಘೋಷ್, ಟಿಎಂಸಿ ಸದಸ್ಯರು ರಾಜ್ಯದ ಖಜಾನೆಯಿಂದ ಹಣ ಖಾಲಿ ಮಾಡಿದ್ದಾರೆ ಎಂದು ಆರೋಪಿಸಿದರು.ಕೇಂದ್ರದಿಂದ ಹಂಚಿಕೆಯಾದ ನಿಧಿಯನ್ನು ಮಮತಾ ಬ್ಯಾನರ್ಜಿ ದುರುಪಯೋಗಪಡಿಸಿಕೊಂಡಿದ್ದಾರೆ. ರಾಜ್ಯದಲ್ಲಿ ಇದೀಗ ಆರ್ಥಿಕ ದಿವಾಳಿ ಸ್ಥಿತಿ ತಲುಪಿರುವಾಗ ಮಡಿಸಿದ ಕೈಗಳೊಂದಿಗೆ ಹೆಚ್ಚಿನ ಅನುದಾನ ಕೇಳಲು ಪ್ರಧಾನಿ ಮೋದಿ ಭೇಟಿಯಾಗಲು ಮಮತಾ ಬಯಸಿದ್ದಾರೆ ಎಂದು ಹೇಳಿದರು.

ಮಮತಾ ಬ್ಯಾನರ್ಜಿ ಸರ್ಕಾರದ ವ್ಯಾಪಕ ಭ್ರಷ್ಟಚಾರದಿಂದ ಪಶ್ಚಿಮ ಬಂಗಾಳ ಆರ್ಥಿಕ ಸಮಸ್ಯೆಯನ್ನು ಎದುರಿಸುತ್ತಿದೆ. ರಾಜ್ಯದ ಆರ್ಥಿಕ ಪರಿಸ್ಥಿತಿ ಮತ್ತು ಟಿಎಂಸಿಯಲ್ಲಿ ಹೆಚ್ಚುತ್ತಿರುವ ಬಣವಾದವನ್ನು ಗಮನಿಸಿದರೆ, 2024 ರ ಲೋಕಸಭಾ ಚುನಾವಣೆಗೆ ಮುಂಚಿತವಾಗಿ ರಾಜ್ಯವನ್ನು ಉತ್ತಮವಾಗಿ ನಡೆಸಲು ಸಾಧ್ಯವಾಗುವುದಿಲ್ಲ ಎಂದು ದೀದಿ ಅರಿತಿದ್ದಾರೆ ಎಂದು ಅವರು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?