ಪ್ರಧಾನಿ ಮೋದಿ 
ದೇಶ

'ರಾಷ್ಟ್ರ ಮೊದಲು ಯಾವಾಗಲೂ ಮೊದಲು' ಎನ್ನುವ ಮಂತ್ರದೊಂದಿಗೆ ಮುನ್ನಡೆಯಬೇಕಿದೆ: ಪ್ರಧಾನಿ ಮೋದಿ

‘ರಾಷ್ಟ್ರ ಮೊದಲು, ಯಾವಾಗಲೂ ಮೊದಲು’ ಎನ್ನುವ ಮಂತ್ರದೊಂದಿಗೆ ದೇಶವು ಮುನ್ನಡೆಯಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಭಾನುವಾರ ಹೇಳಿದ್ದಾರೆ. 

ನವದೆಹಲಿ: ‘ರಾಷ್ಟ್ರ ಮೊದಲು, ಯಾವಾಗಲೂ ಮೊದಲು’ ಎನ್ನುವ ಮಂತ್ರದೊಂದಿಗೆ ದೇಶವು ಮುನ್ನಡೆಯಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಭಾನುವಾರ ಹೇಳಿದ್ದಾರೆ. 

ಮನ್ ಕಿ ಬಾತ್ ಕಾರ್ಯಕ್ರಮದಲ್ಲಿಂದು ಪ್ರಧಾನಿ ಮೋದಿಯವರು 75ನೇ ವರ್ಷದ ಸ್ವಾತಂತ್ರ್ಯೋತ್ಸವದ ಆಚರಣೆ ಕುರಿತಂತೆ ಮಾತನಾಡಿದರು. 

ಮಹಾತ್ಮ ಗಾಂಧೀಜಿ ಅವರು ‘ಭಾರತ ಚೋಡೊ ಆಂದೋಲನ’(ಭಾರತ ಬಿಟ್ಟು ತೊಲಗಿ) ಆರಂಭಿಸಿದ್ದರು. ಅದೇ ರೀತಿಯ ವಿಭಿನ್ನವಾದ ಚಳವಳಿ ಈಗಿನ ಸಂದರ್ಭದಲ್ಲಿ ಅಗತ್ಯವಿದೆ. ಪ್ರತಿಯೊಬ್ಬ ಭಾರತೀಯ ‘ಭಾರತ ಜೋಡೊ ಆಂದೋಲನ’ (ಭಾರತ ಜೋಡಿಸಿ ಆಂದೋಲನ) ಆರಂಭಿಸಬೇಕು ಎಂದು ಸಲಹೆ ನೀಡಿದ್ದಾರೆ.

ಸಂಪೂರ್ಣ ವೈವಿಧ್ಯತೆ ಹೊಂದಿರುವ ಭಾರತದಲ್ಲಿ ಈ ಆಂದೋಲನವು ದೇಶವನ್ನು ಒಗ್ಗೂಡಿಸಲು ಪೂರಕವಾಗುವಂತೆ ನಾವೆಲ್ಲರೂ ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದ್ದಾರೆ.

ಮುಂದಿನ ಆಗಸ್ಟ್‌ 15ರಂದು ಭಾರತದಲ್ಲಿ 75ನೇ ಸ್ವಾತಂತ್ರ್ಯೋತ್ಸವದ ಆಚರಣೆ ನಡೆಯಲಿದೆ. ಈ ಅಮೃತ ಮಹೋತ್ಸವವನ್ನು ದೇಶದಾದ್ಯಂತ ಸಂಭ್ರಮದಿದಂದ ಆಚರಿಸಲಾಗುವುದು. ಅಮೃತ ಮಹೋತ್ಸವಕ್ಕೆ ಸಂಬಂಧಿಸಿದಂತೆ ಹಲವಾರು ಕಾರ್ಯಕ್ರಮಗಳು ನಡೆಯುತ್ತಿವೆ. ರಾಷ್ಟ್ರಗೀತೆಯನ್ನು ಗರಿಷ್ಠ ಸಂಖ್ಯೆಯಲ್ಲಿ ಭಾರತೀಯರು ಹಾಡುವಂತೆ ಸಂಸ್ಕೃತಿ ಸಚಿವಾಲಯ ಈಗಾಗಲೇ ಹಲವು ಕ್ರಮಗಳನ್ನು ಕೈಗೊಂಡಿದೆ. ಇದಕ್ಕಾಗಿಯೇ rashtragan.in ವೆಬ್‌ಸೈಟ್‌ ಆರಂಭಿಸಲಾಗಿದೆ. ಈ ವೆಬ್‌ಸೈಟ್‌ ನೆರವಿನಿಂದ ರಾಷ್ಟ್ರೀಯ ಗೀತೆಯನ್ನು ಹಾಡುವ ಮೂಲಕ ದಾಖಲಿಸಬಹುದು ಎಂದು ವಿವರಿಸಿದ್ದಾರೆ.

ಜುಲೈ 26ರಂದು ಕಾರ್ಗಿಲ್‌ ವಿಜಯ ದಿನ ಆಚರಿಸಲಾಗುತ್ತಿದೆ. 1999ರಲ್ಲಿ ಹುತಾತ್ಮರಾದ ಯೋಧರಿಗೆ ದೇಶದ ಜನತೆ ಶ್ರದ್ಧಾಂಜಲಿ ಸಲ್ಲಿಸಬೇಕು ಎಂದು ಇದೇ ಸಂದರ್ಭದಲ್ಲಿ ಕೋರಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT