ಪ್ರಧಾನಿ ಮೋದಿ 
ದೇಶ

'ರಾಷ್ಟ್ರ ಮೊದಲು ಯಾವಾಗಲೂ ಮೊದಲು' ಎನ್ನುವ ಮಂತ್ರದೊಂದಿಗೆ ಮುನ್ನಡೆಯಬೇಕಿದೆ: ಪ್ರಧಾನಿ ಮೋದಿ

‘ರಾಷ್ಟ್ರ ಮೊದಲು, ಯಾವಾಗಲೂ ಮೊದಲು’ ಎನ್ನುವ ಮಂತ್ರದೊಂದಿಗೆ ದೇಶವು ಮುನ್ನಡೆಯಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಭಾನುವಾರ ಹೇಳಿದ್ದಾರೆ. 

ನವದೆಹಲಿ: ‘ರಾಷ್ಟ್ರ ಮೊದಲು, ಯಾವಾಗಲೂ ಮೊದಲು’ ಎನ್ನುವ ಮಂತ್ರದೊಂದಿಗೆ ದೇಶವು ಮುನ್ನಡೆಯಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಭಾನುವಾರ ಹೇಳಿದ್ದಾರೆ. 

ಮನ್ ಕಿ ಬಾತ್ ಕಾರ್ಯಕ್ರಮದಲ್ಲಿಂದು ಪ್ರಧಾನಿ ಮೋದಿಯವರು 75ನೇ ವರ್ಷದ ಸ್ವಾತಂತ್ರ್ಯೋತ್ಸವದ ಆಚರಣೆ ಕುರಿತಂತೆ ಮಾತನಾಡಿದರು. 

ಮಹಾತ್ಮ ಗಾಂಧೀಜಿ ಅವರು ‘ಭಾರತ ಚೋಡೊ ಆಂದೋಲನ’(ಭಾರತ ಬಿಟ್ಟು ತೊಲಗಿ) ಆರಂಭಿಸಿದ್ದರು. ಅದೇ ರೀತಿಯ ವಿಭಿನ್ನವಾದ ಚಳವಳಿ ಈಗಿನ ಸಂದರ್ಭದಲ್ಲಿ ಅಗತ್ಯವಿದೆ. ಪ್ರತಿಯೊಬ್ಬ ಭಾರತೀಯ ‘ಭಾರತ ಜೋಡೊ ಆಂದೋಲನ’ (ಭಾರತ ಜೋಡಿಸಿ ಆಂದೋಲನ) ಆರಂಭಿಸಬೇಕು ಎಂದು ಸಲಹೆ ನೀಡಿದ್ದಾರೆ.

ಸಂಪೂರ್ಣ ವೈವಿಧ್ಯತೆ ಹೊಂದಿರುವ ಭಾರತದಲ್ಲಿ ಈ ಆಂದೋಲನವು ದೇಶವನ್ನು ಒಗ್ಗೂಡಿಸಲು ಪೂರಕವಾಗುವಂತೆ ನಾವೆಲ್ಲರೂ ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದ್ದಾರೆ.

ಮುಂದಿನ ಆಗಸ್ಟ್‌ 15ರಂದು ಭಾರತದಲ್ಲಿ 75ನೇ ಸ್ವಾತಂತ್ರ್ಯೋತ್ಸವದ ಆಚರಣೆ ನಡೆಯಲಿದೆ. ಈ ಅಮೃತ ಮಹೋತ್ಸವವನ್ನು ದೇಶದಾದ್ಯಂತ ಸಂಭ್ರಮದಿದಂದ ಆಚರಿಸಲಾಗುವುದು. ಅಮೃತ ಮಹೋತ್ಸವಕ್ಕೆ ಸಂಬಂಧಿಸಿದಂತೆ ಹಲವಾರು ಕಾರ್ಯಕ್ರಮಗಳು ನಡೆಯುತ್ತಿವೆ. ರಾಷ್ಟ್ರಗೀತೆಯನ್ನು ಗರಿಷ್ಠ ಸಂಖ್ಯೆಯಲ್ಲಿ ಭಾರತೀಯರು ಹಾಡುವಂತೆ ಸಂಸ್ಕೃತಿ ಸಚಿವಾಲಯ ಈಗಾಗಲೇ ಹಲವು ಕ್ರಮಗಳನ್ನು ಕೈಗೊಂಡಿದೆ. ಇದಕ್ಕಾಗಿಯೇ rashtragan.in ವೆಬ್‌ಸೈಟ್‌ ಆರಂಭಿಸಲಾಗಿದೆ. ಈ ವೆಬ್‌ಸೈಟ್‌ ನೆರವಿನಿಂದ ರಾಷ್ಟ್ರೀಯ ಗೀತೆಯನ್ನು ಹಾಡುವ ಮೂಲಕ ದಾಖಲಿಸಬಹುದು ಎಂದು ವಿವರಿಸಿದ್ದಾರೆ.

ಜುಲೈ 26ರಂದು ಕಾರ್ಗಿಲ್‌ ವಿಜಯ ದಿನ ಆಚರಿಸಲಾಗುತ್ತಿದೆ. 1999ರಲ್ಲಿ ಹುತಾತ್ಮರಾದ ಯೋಧರಿಗೆ ದೇಶದ ಜನತೆ ಶ್ರದ್ಧಾಂಜಲಿ ಸಲ್ಲಿಸಬೇಕು ಎಂದು ಇದೇ ಸಂದರ್ಭದಲ್ಲಿ ಕೋರಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹಿರಿಯ ನಾಯಕರೊಂದಿಗಿನ ಚರ್ಚೆ ಬಳಿಕ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ: ದೆಹಲಿಗೆ ತೆರಳುವ ಮುನ್ನ ಮಲ್ಲಿಕಾರ್ಜುನ ಖರ್ಗೆ ಪ್ರತಿಕ್ರಿಯೆ

ಡಿಕೆಶಿ ಪರ ಒಕ್ಕಲಿಗ ಸ್ವಾಮೀಜಿ ಬ್ಯಾಟಿಂಗ್, ಸಿದ್ದರಾಮಯ್ಯ ಪರ ಅಖಾಡಕ್ಕಿಳಿದ 'ಕಾಗಿನೆಲೆ' ಸ್ವಾಮೀಜಿ!

ತಮಿಳು ನಾಡು: ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ TVK ಪಕ್ಷ ಸೇರಿದ ಸೆಂಗೊಟ್ಟೈಯನ್

ನಾಯಕತ್ವ ಬದಲಾವಣೆ ಬಗ್ಗೆ ಹೈಕಮಾಂಡ್ ತೀರ್ಮಾನಿಸಿದರೆ ಡಿಕೆಶಿಯನ್ನು CM ಆಗಿ ಒಪ್ಪಿಕೊಳ್ಳುವೆ : ಕುರ್ಚಿ ಕದನಕ್ಕೆ ಪರಮೇಶ್ವರ್ ಟ್ವಿಸ್ಟ್

CM ಪಟ್ಟಕ್ಕಾಗಿ ಕಿತ್ತಾಟ: ಡಿಕೆಶಿಗೆ 'ಹೈಕಮಾಂಡ್' ಒಲವು ತೋರಿದ್ರೆ, ಸಿದ್ದರಾಮಯ್ಯರ ಮುಂದಿನ ಪ್ಲಾನ್ ಏನು?

SCROLL FOR NEXT