ಅಮಿತ್ ಶಾ 
ದೇಶ

ಅಸ್ಸಾಂ- ಮಿಜೋರಾಂ ಗಡಿಯಲ್ಲಿ ಹಿಂಸಾಚಾರ: ಶಾ ವಿರುದ್ಧ ಕಾಂಗ್ರೆಸ್ ಕಿಡಿ

ಅಸ್ಸಾಂ ಮತ್ತು ಮಿಜೋರಾಂ ಗಡಿಯಲ್ಲಿ ಸೋಮವಾರ ಸಂಭವಿಸಿದ ಹಿಂಸಾಚಾರದಲ್ಲಿ ಆರು ಮಂದಿ ಪೊಲೀಸರು ಸಾವನ್ನಪ್ಪಿದ್ದ ಘಟನೆ ಕುರಿತು ಬಿಜೆಪಿ ವಿರುದ್ಧ ಕಾಂಗ್ರೆಸ್ ಕಿಡಿಕಾರಿದೆ.

ನವದೆಹಲಿ: ಅಸ್ಸಾಂ ಮತ್ತು ಮಿಜೋರಾಂ ಗಡಿಯಲ್ಲಿ ಸೋಮವಾರ ಸಂಭವಿಸಿದ ಹಿಂಸಾಚಾರದಲ್ಲಿ ಆರು ಮಂದಿ ಪೊಲೀಸರು ಸಾವನ್ನಪ್ಪಿದ್ದ ಘಟನೆ ಕುರಿತು ಬಿಜೆಪಿ ವಿರುದ್ಧ ಕಾಂಗ್ರೆಸ್ ಕಿಡಿಕಾರಿದೆ.

ಸಮಸ್ಯೆ ಬಗೆಹರಿಸಲು ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಸಭೆ ನಡೆದ ಒಂದು ದಿನದ ಅಂತರದಲ್ಲೇ ಉದ್ವಿಗ್ನತೆ ಹೆಚ್ಚಾಗಿರುವುದು ನಾಚಿಕೆಗೇಡಿನ ಸಂಗತಿಯಾಗಿದೆ ಎಂದು ಕಾಂಗ್ರೆಸ್ ಹೇಳಿದೆ.

ಈಶಾನ್ಯ ಪ್ರಜಾಸತಾತ್ಮಕ ಒಕ್ಕೂಟಕ್ಕೆ (ನೆಡಾ) ಸೇರಿದ ಉಭಯ ರಾಜ್ಯಗಳ ಮುಖ್ಯಮಂತ್ರಿಗಳು ಉದ್ವಿಗ್ನತೆ ಬಿಗಡಾಯಿ ಸಿರುವಂತೆಯೇ ಟ್ವಿಟರ್ ನಲ್ಲಿ ಪರಸ್ಪರ ಬಹಿರಂಗ ವಾದದಲ್ಲಿ ತೊಡಗಿರುವುದಾಗಿ ಕಳವಳಕಾರಿ ಸಂಗತಿಯಾಗಿದೆ ಎಂದಿದೆ.

ನಿನ್ನೆಯಷ್ಟೇ ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಗಡಿ ವಿಚಾರ ಕುರಿತಂತೆ ಈಶಾನ್ಯ ರಾಜ್ಯಗಳು ಮುಖ್ಯಮಂತ್ರಿಗಳು, ಮುಖ್ಯ ಕಾರ್ಯದರ್ಶಿಗಳೊಂದಿಗೆ ಚರ್ಚಿಸಿದ್ದಾರೆ. ಅವರ ನಡುವೆ ಏನು ರವಾನೆಯಾಗಿದೆ? ಗಡಿ ವಿವಾದಗಳನ್ನು ತಗ್ಗಿಸುವ ನೀತಿಗಳು ಯಾವುವು ಎಂದು ತಿಳಿಯಲು ಕಾಂಗ್ರೆಸ್ ಬಯಸಿದ್ದು, ಬಿಜೆಪಿ ಸರ್ಕಾರ ಟ್ವಿಟರ್ ಮೂಲಕ ದೇಶವನ್ನು ನಡೆಸುತ್ತಿದೆ ಎಂಬುದನ್ನು ತೋರುತ್ತದೆ ಎಂದು ಟೀಕಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭೀಕರ ಮಳೆಗೆ ಜಮ್ಮು-ಕಾಶ್ಮೀರ ತತ್ತರ: ಸಾವಿನ ಸಂಖ್ಯೆ 41ಕ್ಕೆ ಏರಿಕೆ; ಕೇಂದ್ರದಿಂದ ನೆರವಿನ ಭರವಸೆ; ಮುಂದುವರೆದ ರಕ್ಷಣಾ ಕಾರ್ಯಾಚರಣೆ

ಭಾರತದ ಮೇಲೆ ಅಮೆರಿಕಾ ಸುಂಕಾಸ್ತ್ರ: ದೇಶ ರಕ್ಷಿಸುವಲ್ಲಿ ಪ್ರಧಾನಿ ಮೋದಿ ವಿಫಲ; AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

ಜಮ್ಮು-ಕಾಶ್ಮೀರದ ಬಂಡಿಪೋರಾದಲ್ಲಿ ಗುಂಡಿನ ಚಕಮಕಿ: ಇಬ್ಬರು ಉಗ್ರರ ಹತ್ಯೆ

RSS Song Controversy: ಡಿಕೆಶಿ ಆರ್‌ಎಸ್‌ಎಸ್‌ ಗೀತೆ ಹಾಡಿದ್ದು ತಪ್ಪು, ಕ್ಷಮೆ ಕೇಳಿದ್ದರಿಂದ ಎಲ್ಲವೂ ಮುಗಿದಿದೆ; ಮಲ್ಲಿಕಾರ್ಜುನ ಖರ್ಗೆ

ವಾಲ್ಮೀಕಿ ನಿಗಮ ಹಗರಣ: ಜಾರಿ ನಿರ್ದೇಶನಾಲಯದಿಂದ 5 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು !

SCROLL FOR NEXT