ಮೀರಾಬಾಯಿ ಚಾನು 
ದೇಶ

ಮಣಿಪುರ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾಗಿ ಮೀರಾಬಾಯಿ ಚಾನು ನೇಮಕ- ಮುಖ್ಯಮಂತ್ರಿ ಎನ್. ಬಿರೇನ್ ಸಿಂಗ್ ಘೋಷಣೆ

ಟೋಕಿಯೊ ಒಲಂಪಿಕ್ಸ್‌ನಲ್ಲಿ ಬೆಳ್ಳಿ ಗೆದ್ದ ವೇಟ್‌ಲಿಫ್ಟರ್ ಸೈಖೋಮ್ ಮೀರಾಬಾಯಿ ಚಾನು ಅವರನ್ನು ರಾಜ್ಯ ಪೊಲೀಸ್ ಇಲಾಖೆಯಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾಗಿ ನೇಮಕ ಮಾಡಲಾಗುವುದು ಎಂದು ಮಣಿಪುರ ಮುಖ್ಯಮಂತ್ರಿ ಎನ್ ಬಿರೆನ್ ಸಿಂಗ್ ಸೋಮವಾರ ಪ್ರಕಟಿಸಿದ್ದಾರೆ.

ಇಂಪಾಲ: ಟೋಕಿಯೊ ಒಲಂಪಿಕ್ಸ್‌ನಲ್ಲಿ ಬೆಳ್ಳಿ ಗೆದ್ದ ವೇಟ್‌ಲಿಫ್ಟರ್ ಸೈಖೋಮ್ ಮೀರಾಬಾಯಿ ಚಾನು ಅವರನ್ನು ರಾಜ್ಯ ಪೊಲೀಸ್ ಇಲಾಖೆಯಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾಗಿ ನೇಮಕ ಮಾಡಲಾಗುವುದು ಎಂದು ಮಣಿಪುರ ಮುಖ್ಯಮಂತ್ರಿ ಎನ್ ಬಿರೆನ್ ಸಿಂಗ್ ಸೋಮವಾರ ಪ್ರಕಟಿಸಿದ್ದಾರೆ.  ಅಲ್ಲದೇ, ರಾಜ್ಯ ಸರ್ಕಾರದಿಂದ 1 ಕೋಟಿ ರೂ. ಬಹುಮಾನ ನೀಡಲಾಗುವುದು ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.

ಟೋಕಿಯೊ ಒಲಂಪಿಕ್ಸ್ ನಲ್ಲಿ 49 ಕೆಜಿ ವಿಭಾಗದಲ್ಲಿ ಬೆಳ್ಳಿ ಪದಕ ಗೆದ್ದಿರುವ ಮೀರಾಬಾಯಿ ಚಾನು ಹೆಚ್ಚುವರಿ ಪೊಲೀಸ್ ಅಧೀಕ್ಷಕರಾಗಿ (ಕ್ರೀಡಾ) ನೇಮಕವಾಗಲಿದ್ದು, ರಾಜ್ಯದಲ್ಲಿ ಶೀಘ್ರದಲ್ಲೇ ವಿಶ್ವ ದರ್ಜೆ ಗುಣಮಟ್ಟದ ವೇಯ್ಟ್ ಲಿಫ್ಟಿಂಗ್ ಅಕಾಡೆಮಿ ಸ್ಥಾಪಿಸಲು ಮಣಿಪುರ ಸರ್ಕಾರ ನಿರ್ಧರಿಸಿದೆ ಎಂದು ಸಿಂಗ್ ಹೇಳಿದರು.

ಜುಡೋಕಾ ಎಲ್ ಸುಶೀಲಾ ದೇವಿಗೆ ಕಾನ್‌ ಸ್ಟೇಬಲ್  ಹುದ್ದೆಯಿಂದ ಸಬ್ ಇನ್ಸ್‌ಪೆಕ್ಟರ್ ಆಗಿ ಬಡ್ತಿ ನೀಡಲಾಗುವುದು. ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಭಾಗವಹಿಸಿದ ಎಲ್ಲರಿಗೂ 25 ಲಕ್ಷ ರೂಪಾಯಿಗಳನ್ನು ನೀಡಲಾಗುವುದು ಎಂದು ಅವರು ಪ್ರಕಟಿಸಿದರು. ಟೋಕಿಯೊ ಒಲಂಪಿಕ್ಸ್‌ನಲ್ಲಿ ಚಾನು, ದೇವಿ ಮತ್ತು ಬಾಕ್ಸರ್ ಮೇರಿ ಕೋಮ್ ಸೇರಿದಂತೆ ಮಣಿಪುರದ ಕನಿಷ್ಠ ಐದು ಕ್ರೀಡಾಪಟುಗಳು ದೇಶವನ್ನು ಪ್ರತಿನಿಧಿಸುತ್ತಿದ್ದಾರೆ.    
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

SCROLL FOR NEXT