ರಂದೀಪ್ ಸಿಂಗ್ ಸುರ್ಜೆವಾಲಾ 
ದೇಶ

ಯಡಿಯೂರಪ್ಪ ಮೋದಿಯ ಇತ್ತೀಚಿನ ಬಲಿಪಶು: ಕಾಂಗ್ರೆಸ್ ವರಿಷ್ಠರು 

ಸಿಎಂ ಯಡಿಯೂರಪ್ಪ ರಾಜೀನಾಮೆ ನೀಡಿರುವುದು ಈಗ ವಿಪಕ್ಷ ಕಾಂಗ್ರೆಸ್ ಗೆ ಆಹಾರವಾಗಿ ಪರಿಣಮಿಸಿದೆ.

ನವದೆಹಲಿ: ಸಿಎಂ ಯಡಿಯೂರಪ್ಪ ರಾಜೀನಾಮೆ ನೀಡಿರುವುದು ಈಗ ವಿಪಕ್ಷ ಕಾಂಗ್ರೆಸ್ ಗೆ ಆಹಾರವಾಗಿ ಪರಿಣಮಿಸಿದೆ. ರಾಜ್ಯ ರಾಜಕಾರಣದ ಬೆಳವಣಿಗೆಗಳ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ನ ರಾಷ್ಟ್ರೀಯ ನಾಯಕರು ಯಡಿಯೂರಪ್ಪ ರಾಜೀನಾಮೆ ವಿಷಯವನ್ನು ಮೋದಿ ವಿರುದ್ಧ ವಾಗ್ದಾಳಿ ನಡೆಸಲು ಬಳಸಿಕೊಂಡಿದ್ದಾರೆ. 

ಹಿರಿಯ ಬಿಜೆಪಿ ನಾಯಕರಿಗೆ ಒತ್ತಾಯಪೂರ್ವಕ ರಾಜೀನಾಮೆ ಕೊಡಿಸುತ್ತಿರುವ ಮೋದಿ ಅವರ ಇತ್ತೀಚಿನ ಬಲಿಪಶು ಯಡಿಯೂರಪ್ಪ ಎಂದು ಕಾಂಗ್ರೆಸ್ ನ ಪ್ರಧಾನ ಕಾರ್ಯದರ್ಶಿ ರಣ್ದೀಪ್ ಸುರ್ಜೆವಾಲ ಆರೋಪಿಸಿದ್ದಾರೆ. 

ಮುಖ್ಯಮಂತ್ರಿಗಳ ಆಯ್ಕೆ ಶಾಸಕರ ಇಚ್ಛೆಯ ಪ್ರಕಾರ ನಡೆಯುವುದಿಲ್ಲ. ಬದಲಾಗಿ ದೆಹಲಿಯ ದಬ್ಬಾಳಿಕೆಯ ಪ್ರಕಾರ ನಡೆಯಲಿದೆ. ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದಿದ್ದೇ ಅಕ್ರಮವಾಗಿ, ಭ್ರಷ್ಟಾಚಾರ ಹಾಗೂ ಶಾಸಕರ ಪಕ್ಷಾಂತರದಿಂದ ಬಂದಿದ್ದಾಗಿದೆ ಎಂದು ಸುರ್ಜೆವಾಲ ಆರೋಪಿಸಿದ್ದಾರೆ.  

ಮೋದಿ ಅವರು ಯಡಿಯೂರಪ್ಪ ಅವರಿಗೆ ಮಾಡಿದ ಅವಮಾನ, ಹಿಂಸೆ ರಾಜೀನಾಮೆ ನೀಡುವುದಕ್ಕೆ ಕಾರಣವಾಗಿದ್ದು ಒತ್ತಾಯಪೂರ್ವಕ ರಾಜೀನಾಮೆ ನೀಡುವ ಸಾಲಿನಲ್ಲಿ ಯಡಿಯೂರಪ್ಪ ಮೋದಿ ಅವರ ಇತ್ತೀಚಿನ ಬಲಿಪಶುವಾಗಿದ್ದಾರೆ

ಸುಮಿತ್ರಾ ಮಹಾಜನ್, ಸುಷ್ಮಾ ಸ್ವರಾಜ್, ಉಮಾ ಭಾರತಿ, ಸಿಪಿ ಠಾಕೂರ್, ಎಕೆ ಪಟೇಲ್, ಹರೇನ್ ಪಾಂಡ್ಯ, ಹರೇನ್ ಪಾಠಕ್, ಕಲ್ಯಾಣ್ ಸಿಂಗ್, ಮುಂತಾದವರನ್ನು ಪಕ್ಷದಲ್ಲಿ ಒತ್ತಾಯಪೂರ್ವಕವಾಗಿ ನೇಪಥ್ಯಕ್ಕೆ ಸರಿಸಲಾಯಿತು. ಇತ್ತೀಚಿನ ದಿನಗಳಲ್ಲಿ ರವಿಶಂಕರ್ ಪ್ರಸಾದ್, ಹರ್ಷವರ್ಧನ್, ಸುಶೀಲ್ ಮೋದಿ ಅವರನ್ನು ನೇಪಥ್ಯಕ್ಕೆ ಸರಿಸಲಾಗಿದೆ ಎಂದು ಕಾಂಗ್ರೆಸ್ ಆರೋಪಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Coal mafia: ಜಾರ್ಖಂಡ್-ಪಶ್ಚಿಮ ಬಂಗಾಳದಲ್ಲಿ 40 ಕ್ಕೂ ಹೆಚ್ಚು ಸ್ಥಳಗಳ ಮೇಲೆ ED ದಾಳಿ, ತೀವ್ರ ಶೋಧ

LKG, UKG in Anganwadis: ರಾಜ್ಯದ 5000 ಅಂಗನವಾಡಿಗಳಲ್ಲಿ ನ.28ರಿಂದ ತರಗತಿಗಳು ಆರಂಭ..!

ಅಯ್ಯಪ್ಪ ಸ್ವಾಮಿ ಕಠಿಣ ವ್ರತ: ಶಬರಿಮಲೆ ಉಪವಾಸ ಹೇಗೆ ಪ್ರಾರಂಭಿಸಬೇಕು? 41 ದಿನಗಳವರೆಗೆ ಬ್ರಹ್ಮಚರ್ಯ ಏಕೆ ಪಾಲಿಸಬೇಕು?

ಬಳ್ಳಾರಿಯಲ್ಲಿ 36 ಜೀನ್ಸ್ ಘಟಕಗಳು ಸ್ಥಗಿತ: ಸರ್ಕಾರದ ವಿರುದ್ಧ ಮುಗಿಬಿದ್ದ ವಿಪಕ್ಷ, 22 ಕೋಟಿ ರೂ. ವೆಚ್ಚದ ತ್ಯಾಜ್ಯ ಸಂಸ್ಕರಣಾ ಘಟಕಗಳ ಸ್ಥಾಪನೆಗೆ ಸಿಎಂ ಅನುಮೋದನೆ

KPCC ಅಧ್ಯಕ್ಷ ಸ್ಥಾನದ ಬಗ್ಗೆ ಡಿ.ಕೆ.ಶಿವಕುಮಾರ್ ಅವರನ್ನೇ ಕೇಳಬೇಕು: ಸಚಿವ ಸತೀಶ್ ಜಾರಕಿಹೊಳಿ

SCROLL FOR NEXT