ಅರವಿಂದ್ ಕೇಜ್ರಿವಾಲ್ 
ದೇಶ

ಪದ್ಮ ಪ್ರಶಸ್ತಿಗೆ ವೈದ್ಯರು, ಆರೋಗ್ಯ ಕಾರ್ಯಕರ್ತರ ಹೆಸರು ಶಿಫಾರಸು: ಸಿಎಂ ಕೇಜ್ರಿವಾಲ್

ಈ ವರ್ಷದ ಪದ್ಮ ಪ್ರಶಸ್ತಿಗಳಿಗಾಗಿ ವೈದ್ಯರು ಮತ್ತು ಆರೋಗ್ಯ ಕಾರ್ಯಕರ್ತರ ಹೆಸರನ್ನು ಶಿಫಾರಸು ಮಾಡಲು ದೆಹಲಿ ಸರ್ಕಾರ ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಮಂಗಳವಾರ ಹೇಳಿದ್ದಾರೆ.

ನವದೆಹಲಿ: ಈ ವರ್ಷದ ಪದ್ಮ ಪ್ರಶಸ್ತಿಗಳಿಗಾಗಿ ವೈದ್ಯರು ಮತ್ತು ಆರೋಗ್ಯ ಕಾರ್ಯಕರ್ತರ ಹೆಸರನ್ನು ಶಿಫಾರಸು ಮಾಡಲು ದೆಹಲಿ ಸರ್ಕಾರ ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಮಂಗಳವಾರ ಹೇಳಿದ್ದಾರೆ.

ಇಂದು ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಕೇಜ್ರಿವಾಲ್, "ಈ ವರ್ಷದ ಪದ್ಮ ಪ್ರಶಸ್ತಿಗಳಿಗೆ ವೈದ್ಯರು ಮತ್ತು ಆರೋಗ್ಯ ಕಾರ್ಯಕರ್ತರ ಹೆಸರನ್ನು ಕಳುಹಿಸಲು ದೆಹಲಿ ಸರ್ಕಾರ ನಿರ್ಧರಿಸಿದೆ. ನಾವು ಅವರಿಗೆ ಕೃತಜ್ಞರಾಗಿರುತ್ತೇವೆ ಮತ್ತು ನಾವು ಅವರನ್ನು ಗೌರವಿಸಲು ಬಯಸುತ್ತೇವೆ" ಎಂದು ಹೇಳಿದರು.

"ಸಾರ್ವಜನಿಕರು ವೈದ್ಯರ ಮತ್ತು ಆರೋಗ್ಯ ಕಾರ್ಯಕರ್ತರ ಹೆಸರುಗಳನ್ನು ನಮಗೆ ತಿಳಿಸುತ್ತಾರೆ. ಜನರು ಆಗಸ್ಟ್ 15 ರೊಳಗೆ ತಮ್ಮ ಮೇಲ್‌ಗಳನ್ನು padmaawards.delhi@gmail.com ಗೆ ಕಳುಹಿಸಬಹುದು" ಎಂದು ದೆಹಲಿ ಮುಖ್ಯಮಂತ್ರಿ ಹೇಳಿದರು.

ಈ ಸಂಬಂಧ ದೆಹಲಿ ಸರ್ಕಾರವು ಸ್ಕ್ರೀನಿಂಗ್ ಕಮಿಟಿಯನ್ನು ರಚಿಸಿದ್ದು, ಮುಂದಿನ 15 ದಿನಗಳಲ್ಲಿ ಈ ಹೆಸರುಗಳನ್ನು ಪರಿಶೀಲಿಸುತ್ತದೆ ಮತ್ತು ದೆಹಲಿ ಸರ್ಕಾರಕ್ಕೆ ಶಿಫಾರಸು ಮಾಡುತ್ತದೆ. ಅಂತಿಮಗೊಂಡ ಹೆಸರುಗಳನ್ನು ಕೇಂದ್ರ ಸರ್ಕಾರಕ್ಕೆ ಕಳುಹಿಸಲಾಗುವುದು ಎಂದು ಅರವಿಂದ್ ಕೇಜ್ರಿವಾಲ್ ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT