ಶಿಲ್ಪಾ ಶೆಟ್ಟಿ-ರಾಜ್ ಕುಂದ್ರಾ 
ದೇಶ

'ಕುಟುಂಬದ ಗೌರವ ಹಾಳಾಯ್ತು.. ಎಲ್ಲವೂ ಇತ್ತಲ್ಲ.. ನಿಮಗಿನ್ನೇನು ಬೇಕಿತ್ತು'..; ಪತಿ ರಾಜ್ ಕುಂದ್ರಾ ವಿರುದ್ಧ ಶಿಲ್ಪಾ ಶೆಟ್ಟಿ ತೀವ್ರ ಆಕ್ರೋಶ!

ಅಶ್ಲೀಲ ಚಿತ್ರಗಳ ನಿರ್ಮಾಣ ಪ್ರಕರಣದಲ್ಲಿ ಬಂಧಿತರಾಗಿರುವ ಉದ್ಯಮಿ ಮತ್ತು ತಮ್ಮ ಪತಿ ರಾಜ್ ಕುಂದ್ರಾ ವಿರುದ್ಧ ನಟಿ ಶಿಲ್ಪಾ ಶೆಟ್ಟಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದ ಘಟನೆ ಬೆಳಕಿಗೆ ಬಂದಿದೆ.

ಮುಂಬೈ: ಅಶ್ಲೀಲ ಚಿತ್ರಗಳ ನಿರ್ಮಾಣ ಪ್ರಕರಣದಲ್ಲಿ ಬಂಧಿತರಾಗಿರುವ ಉದ್ಯಮಿ ಮತ್ತು ತಮ್ಮ ಪತಿ ರಾಜ್ ಕುಂದ್ರಾ ವಿರುದ್ಧ ನಟಿ ಶಿಲ್ಪಾ ಶೆಟ್ಟಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದ ಘಟನೆ ಬೆಳಕಿಗೆ ಬಂದಿದೆ.

ಅಶ್ಲೀಲ ಚಿತ್ರ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಹಿಂದೆ ರಾಜ್ ಕುಂದ್ರಾ ಅವರನ್ನು ಪೊಲೀಸರು ಬಂಧಿಸಿ ತನಿಖೆಗಾಗಿ ಮನೆಗೆ ಕರೆದೊಯ್ದಿದ್ದರು. ಈ ವೇಳೆ ಪೊಲೀಸರನ್ನು ಕಂಡ ಅವರ ಪತ್ನಿ ಶಿಲ್ಪಾ ಶೆಟ್ಟಿ ತೀವ್ರ ಆಕ್ರೋಶಗೊಂಡಿದ್ದರು. ಪತಿ ರಾಜ್‌ ಕುಂದ್ರಾ ಜೊತೆಗೆ ನಟಿ ಶಿಲ್ಪಾ ಶೆಟ್ಟಿ ಜೋರು ವಾಗ್ವಾದ ನಡೆಸಿ,  ಜಗಳ ಕೂಡ ಮಾಡಿದ್ದರು ಎಂಬ ಮಾಹಿತಿ ಹೊರಬಿದ್ದಿದೆ.

ಕಳೆದ ಜುಲೈ 19ರಂದು ರಾಜ್ ಕುಂದ್ರಾರನ್ನು ಕೆಲ ದಿನಗಳ ಹಿಂದೆ ಅವರ ಮನೆಗೆ ಕರೆದುಕೊಂಡು ಹೋಗಲಾಗಿತ್ತು. ವಿಚಾರಣೆ ಮಾಡುವ ಸಲುವಾಗಿ ಪೊಲೀಸರು ಅವರ ನಿವಾಸ ಕಿನರಾಗೆ ಕರೆದುಕೊಂಡು ಹೋಗಿದ್ದರು. ಈ ವೇಳೆ ಮನೆಯಲ್ಲಿದ್ದ ಶಿಲ್ಪಾ ಶೆಟ್ಟಿ ಪತಿಯನ್ನು ಕಂಡು ಗರಂ ಆಗಿದ್ದಾರೆ. ರಾಜ್ ಕುಂದ್ರಾ  ಜೊತೆಗೆ ಶಿಲ್ಪಾ ಶೆಟ್ಟಿ ಕೆಟ್ಟದಾಗಿ ವಾಗ್ವಾದ ನಡೆಸಿ, ಜಗಳ ಮಾಡಿದ್ದಾರೆ. 

ನಮಗೆ ಎಲ್ಲವೂ ಇತ್ತ.. ಸಮಾಜದಲ್ಲಿ ಉತ್ತಮ ಸ್ಥಾನದಲ್ಲಿದ್ದೆವು. ಆರ್ಥಿಕವಾಗಿ ಸಮಾಜಿಕವಾಗಿ ಉತ್ತಮ ಸ್ಥಿತಿಯಲ್ಲಿದ್ದೆವು. ಆದಾಗ್ಯೂ ಯಾವುದಕ್ಕಾಗಿ ಇವೆಲ್ಲ ಮಾಡಿದಿರಿ...ನಿಮ್ಮ ಈ ಕೆಲಸದಿಂದ ಕುಟುಂಬದ ಗೌರವ ಹಾಳಾಗಿದೆ. ಉದ್ಯಮದಲ್ಲಿ ಅವರ ತಮಗಿದ್ದ ಪ್ರಾಜೆಕ್ಟ್ ಗಳು, ಜಾಹಿರಾತುಗಳು ರದ್ದಾಗುತ್ತಿವೆ.  ಅನೇಕ ಯೋಜನೆಗಳನ್ನು ಕೈ ಬಿಡಬೇಕಾಗಿದೆ ಎಂದು ಶಿಲ್ಪಾ ಶೆಟ್ಟಿ ಪತಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಅಲ್ಲದೆ ದುಃಖದಿಂದ ಪೊಲೀಸರ ಎದುರೇ ಕುಸಿದುಬಿದ್ದಿದ್ದಾರೆ. 

ಶಿಲ್ಪಾ ವಿಚಾರಣೆ ಮಾಡಿದ್ದ ಅಧಿಕಾರಿಗಳು
ಇದೇ ವೇಳೆ ಶಿಲ್ಪಾ ಶೆಟ್ಟಿ ಅವರ ವಿಚಾರಣೆಯನ್ನು ಅಧಿಕಾರಿಗಳು ಮಾಡಿದ್ದರು. ಸುಮಾರು 2 ಗಂಟೆಗಳ ಕಾಲ ಅವರ ಹೇಳಿಕೆಗಳನ್ನು ಪಡೆದುಕೊಂಡಿದ್ದರು. 'ಈ ಪ್ರಕರಣಕ್ಕೂ ನನಗೂ ಯಾವುದೇ ಸಂಬಂಧವಿಲ್ಲ. ರಾಜ್ ಕುಂದ್ರಾ ತಯಾರಿಸಿದ್ದು ಅಶ್ಲೀಲ ಸಿನಿಮಾಗಳಲ್ಲ, ಬರೀ ಕಾಮಪ್ರಚೋದಕ ಸಿನಿಮಾಗಳು ಮಾತ್ರ.  ಅವರ ಆಪ್‌ನಲ್ಲಿರುವ ಸಿನಿಮಾಗಳು ಅಶ್ಲೀಲ ಸಿನಿಮಾಗಳಲ್ಲ, ಬದಲಾಗಿ ಇತರ ಓಟಿಟಿ ವೇದಿಕೆಯಲ್ಲಿರುವಂತಹ ಕಾಮಪ್ರಚೋದಕ ಸಿನಿಮಾಗಳಷ್ಟೇ' ಎಂದು ಶಿಲ್ಪಾ ಪೊಲೀಸರಿಗೆ ಹೇಳಿಕೆ ನೀಡಿದ್ದರು. ಆದರೆ, ಪೋಲಿಸರು ವಶಪಡಿಸಿಕೊಂಡಿರುವ ಕೆಲ ದಾಖಲೆಗಳಲ್ಲಿ ಶಿಲ್ಪಾ ಅವರ ಸಹಿ ಕೂಡ ಇರುವುದು  ಪತ್ತೆಯಾಗಿದೆ. ಹಾಗಾಗಿ, ಅವರನ್ನು ಇನ್ನೊಮ್ಮೆ ವಿಚಾರಣೆ ಮಾಡುವ ಸಾಧ್ಯತೆಗಳಿವೆ. ಇನ್ನು, ಅಂಧೇರಿ ಪ್ರಾಂತ್ಯದಲ್ಲಿರುವ ರಾಜ್ ಕುಂದ್ರಾ ಅವರ ಕಚೇರಿ ಮೇಲೆ ದಾಳಿ ಮಾಡಿದಾಗ ಕ್ರೈಮ್ ಬ್ರ್ಯಾಂಚ್ ಅಧಿಕಾರಿಗಳಿಗೆ ಒಂದು ರಹಸ್ಯ ಬೀರು ಸಿಕ್ಕಿದೆ. ಸದ್ಯ ಈ ಬೀರುವಿನಲ್ಲಿ ಏನಿದೆ ಎಂಬ ಮಾಹಿತಿ ಹೊರಬಿದ್ದಿಲ್ಲ.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

'The Kerala Story 2: Goes Beyond' ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ

ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತ ವರ್ತನೆ: ಪೋಕ್ಸೋ ಕೇಸ್ ದಾಖಲಾಗುತ್ತಿದಂತೆ ಮಲ್ಲಿಕಾರ್ಜುನ ಮುತ್ಯಾ video ರಿಲೀಸ್!

ನೀವು ಪಡೆದ IMF ಬೇಲ್ಔಟ್‌ಗಿಂತ 2 ಪಟ್ಟು ಹೆಚ್ಚು; ಜಾಗಬಿಟ್ಟು ಹೋಗುವುದೇ ಪಾಕ್​ಗಿರುವ ಒಂದೇ ಆಯ್ಕೆ: ವಿಶ್ವಸಂಸ್ಥೆಯಲ್ಲಿ ಭಾರತ ವಾಗ್ದಾಳಿ!

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

SCROLL FOR NEXT