ಸಿಜೆಐ ಎನ್ ವಿ ರಮಣ 
ದೇಶ

ಪೆಗಾಸಸ್ ಬೇಹುಗಾರಿಕೆ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಧ್ಯಸ್ಥಿಕೆ ಕೋರಿ 500 ಜನರಿಂದ ಸಿಜೆಐಗೆ ಪತ್ರ!

ಪೆಗಾಸಸ್ ಬೇಹುಗಾರಿಕೆ ವಿವಾದಕ್ಕೆ ಸಂಬಂಧಿಸಿದಂತೆ ತಕ್ಷಣ ಸುಪ್ರೀಂ ಕೋರ್ಟ್‌ ಮಧ್ಯಸ್ಥಿಕೆ ವಹಿಸುವಂತೆ ಕೋರಿ 500ಕ್ಕೂ ಹೆಚ್ಚು ಜನರು ಮತ್ತು ಸಂಘಟನೆಗಳಿಂದ ಸಿಜೆಐ ಎನ್‌ವಿ ರಮಣ ಅವರಿಗೆ ಪತ್ರ ಬರೆದಿದ್ದಾರೆ. 

ನವದೆಹಲಿ: ಪೆಗಾಸಸ್ ಬೇಹುಗಾರಿಕೆ ವಿವಾದಕ್ಕೆ ಸಂಬಂಧಿಸಿದಂತೆ ತಕ್ಷಣ ಸುಪ್ರೀಂ ಕೋರ್ಟ್‌ ಮಧ್ಯಸ್ಥಿಕೆ ವಹಿಸುವಂತೆ ಕೋರಿ 500ಕ್ಕೂ ಹೆಚ್ಚು ಜನರು ಮತ್ತು ಸಂಘಟನೆಗಳಿಂದ ಸಿಜೆಐ ಎನ್‌ವಿ ರಮಣ ಅವರಿಗೆ ಪತ್ರ ಬರೆದಿದ್ದಾರೆ. 

ಅಲ್ಲದೆ ಭಾರತದಲ್ಲಿ ಇಸ್ರೇಲಿ ಸಂಸ್ಥೆ ಎನ್‌ಎಸ್‌ಒನ ಪೆಗಾಸಸ್ ಸ್ಪೈವೇರ್ ಮಾರಾಟ, ವರ್ಗಾವಣೆ ಮತ್ತು ಬಳಕೆಯನ್ನು ನಿಷೇಧಿಸುವಂತೆ ಕೋರಿದ್ದಾರೆ.

ಸ್ಪೈವೇರ್ ಅನ್ನು ಮಹಿಳಾ ವಿದ್ಯಾರ್ಥಿಗಳು, ಶಿಕ್ಷಣ ತಜ್ಞರು, ಪತ್ರಕರ್ತರು, ಮಾನವ ಹಕ್ಕುಗಳ ಹೋರಾಟಗಾರರು, ವಕೀಲರು ಮತ್ತು ಲೈಂಗಿಕ ದೌರ್ಜನ್ಯಕ್ಕೆ ಒಳಗಾದವರ ಕಣ್ಗಾವಲುಗಾಗಿ ಬಳಸಲಾಗಿದೆ ಎಂಬ ಮಾಧ್ಯಮ ವರದಿಗಳ ಬಗ್ಗೆ ಆಘಾತ ವ್ಯಕ್ತಪಡಿಸಿರುವ ಅವರು ಲಿಂಗ-ತಟಸ್ಥ ಲೈಂಗಿಕ ಕಿರುಕುಳ, ದತ್ತಾಂಶ ಸಂರಕ್ಷಣೆ ಮತ್ತು ಗೌಪ್ಯತೆ ನೀತಿಯನ್ನು ಅಳವಡಿಸಿಕೊಳ್ಳಲು ಉನ್ನತ ನ್ಯಾಯಾಲಯವನ್ನು ಕೋರಿದ್ದಾರೆ.

ಅಲ್ಲದೆ ಸುಪ್ರೀಂ ಕೋರ್ಟ್ ನ ಮಾಜಿ ಸಿಜೆಐ ರಂಜನ್ ಗೊಗೊಯ್ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಮಾಡಿದ್ದ ಸುಪ್ರೀಂ ಕೋರ್ಟ್ ಅಧಿಕಾರಿಯ ಮೇಲೆ ಬೇಹುಗಾರಿಕೆ ನೀಡಿರುವ ಆರೋಪವನ್ನು ಪತ್ರದಲ್ಲಿ ಉಲ್ಲೇಖಿಸಲಾಗಿದೆ. ಮಹಿಳೆಯರಿಗೆ, ಪೆಗಾಸಸ್ ಹಗರಣವು ಆಳವಾಗಿ ಸಂಬಂಧಿಸಿದೆ. ಏಕೆಂದರೆ ಉನ್ನತ ಸ್ಥಾನದಲ್ಲಿರುವ ಪುರುಷರು ಅಂತಹ ಬೇಹುಗಾರಿಕೆಯಿಂದ ಅವರ ಜೀವನವನ್ನು ಶಾಶ್ವತವಾಗಿ ಹಾಳುಮಾಡುತ್ತಾರೆ ಎಂದು ಅರ್ಥೈಸಲಾಗಿದೆ. 

ಮಾನವ ಹಕ್ಕುಗಳ ಹೋರಾಟಗಾರರು ಜೈಲಿನಲ್ಲಿದ್ದಾರೆ. ಇದು ರಾಜ್ಯ ಭಯೋತ್ಪಾದನೆಯ ಡಿಜಿಟಲ್ ರೂಪಗಳಿಗೆ ಹೋಲುತ್ತದೆ ಎಂದು ಪತ್ರದಲ್ಲಿ ತಿಳಿಸಲಾಗಿದೆ. ಈ ಪತ್ರಕ್ಕೆ ಅರುಣಾ ರಾಯ್, ಅಂಜಲಿ ಭರದ್ವಾಜ್, ಹರ್ಷ್ ಮಾಂಡರ್ ಸೇರಿದಂತೆ ವಿವಿಧ ಕಾರ್ಯಕರ್ತರು ಸಹಿ ಹಾಕಿದ್ದಾರೆ.

ಪೆಗಾಸಸ್ ಸ್ಪೈವೇರ್ ಬಳಸಿ ಬೇಹುಗಾರಿಕೆ ಸಂಭವನೀಯ ಗುರಿಗಳ ಪಟ್ಟಿಯಲ್ಲಿ 300ಕ್ಕೂ ಹೆಚ್ಚು ಪರಿಶೀಲಿಸಿದ ಭಾರತೀಯ ಮೊಬೈಲ್ ಫೋನ್ ಸಂಖ್ಯೆಗಳಿವೆ ಎಂದು ಅಂತಾರಾಷ್ಟ್ರೀಯ ಮಾಧ್ಯಮ ಒಕ್ಕೂಟ ವರದಿ ಮಾಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ವಿಶ್ವಕಪ್ ವಿಜೇತ ಅಂಧ ಕರ್ನಾಟಕದ ಆಟಗಾರ್ತಿಯರಿಗೆ ತಲಾ 10 ಲಕ್ಷ ನಗದು, ಸರ್ಕಾರಿ ಉದ್ಯೋಗ: ಸಿಎಂ ಸಿದ್ದರಾಮಯ್ಯ ಘೋಷಣೆ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಮತ್ತೊಂದು ಹೆಣ್ಣಿನೊಂದಿಗೆ ಮೋಹ, ನಂಬಿಕೆ ದ್ರೋಹ; ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಅಯೋಧ್ಯ ಧ್ವಜಾರೋಹಣ: ಸ್ವಿಚ್ ಅಥವಾ ಹಗ್ಗ ಬಳಸದ ಪ್ರಧಾನಿ, ಹೇಗೆ ನೆರವೇರಿಸಿದ್ರು?ಈ ಅದ್ಬುತ Video ನೋಡಿ..

ಬರವಣಿಗೆಯಲ್ಲಿ ಖುಷಿ ಕಂಡ ಪೊಲೀಸ್ ಅಧಿಕಾರಿ: 'ಬಸವಣ್ಣನ ವಚನ' ಗಳನ್ನು ಇಂಗ್ಲೀಷ್ ಗೆ ಅನುವಾದ ಮಾಡ್ತಿರೋ DYSP ಬಸವರಾಜ್ ಯಲಿಗಾರ್!

SCROLL FOR NEXT