ಸಾಂದರ್ಭಿಕ ಚಿತ್ರ 
ದೇಶ

60 ವರ್ಷಕ್ಕೂ ಮೇಲ್ಪಟ್ಟವರಲ್ಲಿ 16 ವಾರ ನಂತರ ಸಿಂಗಲ್ ಡೋಸ್ ಕೋವಿಶೀಲ್ಡ್ ಪರಿಣಾಮಕಾರಿತ್ವ ಕ್ಷೀಣ-ಲಂಕಾ ಸಂಶೋಧಕರು

60 ವರ್ಷಕ್ಕಿಂತ ಮೇಲ್ಪಟ್ಟವರಲ್ಲಿ 16 ವಾರಗಳ ನಂತರ ಸಿಂಗಲ್ ಡೋಸ್ ಕೋವಿಶೀಲ್ಡ್ ಪರಿಣಾಮಕಾರಿತ್ವ ಕ್ಷೀಣಸಿದರೆ, ಇದೇ ಅವಧಿಯಲ್ಲಿ ಶೇ.93 ರಷ್ಟು ಯುವ ಜನಾಂಗದಲ್ಲಿ ಅತ್ಯುತ್ತಮ ರೀತಿಯ ಪ್ರತಿಕ್ರಿಯೆ ವಿಶ್ವವಿದ್ಯಾನಿಲಯವೊಂದರ ಸಂಶೋಧಕರು ನಡೆಸಿದ ಅಧ್ಯಯನದಲ್ಲಿ ತಿಳಿದುಬಂದಿದೆ.

ಕೊಲಂಬೊ: 60 ವರ್ಷಕ್ಕಿಂತ ಮೇಲ್ಪಟ್ಟವರಲ್ಲಿ 16 ವಾರಗಳ ನಂತರ ಸಿಂಗಲ್ ಡೋಸ್ ಕೋವಿಶೀಲ್ಡ್ ಪರಿಣಾಮಕಾರಿತ್ವ ಕ್ಷೀಣಸಿದರೆ, ಇದೇ ಅವಧಿಯಲ್ಲಿ ಶೇ.93 ರಷ್ಟು ಯುವ ಜನಾಂಗದಲ್ಲಿ ಅತ್ಯುತ್ತಮ ರೀತಿಯ ಪ್ರತಿಕ್ರಿಯೆ ವಿಶ್ವವಿದ್ಯಾನಿಲಯವೊಂದರ ಸಂಶೋಧಕರು ನಡೆಸಿದ ಅಧ್ಯಯನದಲ್ಲಿ ತಿಳಿದುಬಂದಿದೆ. ಆಕ್ಸಫರ್ಡ್ ವಿಶ್ವವಿದ್ಯಾನಿಲಯ ಮತ್ತು ಅಸ್ಟ್ರಜೆನೆಕಾ ಔಷಧೀಯ ಕಂಪನಿ ಈ ಲಸಿಕೆಯನ್ನು ತಯಾರಿಸಿದೆ.

ವಿಶ್ವದ ಅತಿ ದೊಡ್ಡ ಲಸಿಕೆ ತಯಾರಿಕಾ ಸಂಸ್ಥೆಯಾಗಿರುವ  ಸೆರಮ್ ಇನ್ಸಿಟಿಟ್ಯೂಟ್ ಆಫ್ ಇಂಡಿಯಾ, ಆಕ್ಸ್ ಫರ್ಡ್ ವಿಶ್ವವಿದ್ಯಾನಿಲಯ ಮತ್ತು ಅಸ್ಟಜೆನೆಕಾ ಸಹಭಾಗಿತ್ವದಲ್ಲಿ ಕೋವಿಶೀಲ್ಡ್ ತಯಾರಿಸಿದೆ. ವಯೋವೃದ್ಧರಲ್ಲಿ 16 ವಾರಗಳ ನಂತರ ಸಿಂಗಲ್ ಡೋಸ್ ಕೋವಿಶೀಲ್ಡ್ ಪರಿಣಾಮಕಾರಿತ್ವ ರೋಗನಿರೋಧಕ ಶಕ್ತಿಯನ್ನು ಕ್ಷೀಣಿಸುತ್ತದೆ ಆದರೆ,  ಮೆಮೊರಿ ಪ್ರತಿಕ್ರಿಯೆಗಳು ಹಾಗೇ ಇರುತ್ತವೆ.

ಆದಾಗ್ಯೂ, ಒಂದು ಡೋಸ್ ನಂತರವೂ, 60 ಕ್ಕಿಂತ ಕಡಿಮೆ ವಯಸ್ಸಿನವರು ಉತ್ತಮ ಪ್ರತಿಕ್ರಿಯೆಗಳನ್ನು ಹೊಂದಿದ್ದರು ಶೇಕಡಾ 93 ರಷ್ಟು ಜನರು 16 ವಾರಗಳಲ್ಲಿ ಪ್ರತಿಕಾಯಗಳನ್ನು ಹೊಂದಿದ್ದರು ಎಂದು ಶ್ರೀ ಜಯವರ್ಧನೆಪುರ ವಿಶ್ವವಿದ್ಯಾಲಯದ ರೋಗನಿರೋಧಕ ಮತ್ತು ಆನ್ವಯಿಕ ವಿಜ್ಞಾನ ವಿಭಾಗದ ಪ್ರೊಫೆಸರ್ ನೀಲಿಕಾ ಮಲಾವಿಜ್ ಅವರು ಟ್ವೀಟ್ ನಲ್ಲಿ ತಿಳಿಸಿದ್ದಾರೆ.

ಸಿಂಗಲ್ ಡೋಸ್ ಕೋವಿಶೀಲ್ಡ್ ಲಸಿಕೆಯ ಪ್ರತಿಕ್ರಿಯೆಗಳ ಕುರಿತ ನ ನಮ್ಮ ಪ್ರಬಂಧವನ್ನು ನ್ಯಾಚುರ್ ಕಾಮ್ಸ್ "ನಲ್ಲಿ ಪ್ರಕಟಿಸಲಾಗಿದೆ. ಸಿಂಗಲ್ ಡೋಸ್ ಕೋವಿಶೀಲ್ಡ್ ಲಸಿಕೆಯಿಂದ ಶೇ.93.4 ಜನರಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿದ್ದರೆ, ಶೇ.97.1 ರಷ್ಟು ಮಂದಿಯಲ್ಲಿ ರೋಗನಿರೋಧಕ ಶಕ್ತಿ ಕ್ಷೀಣಿಸಿದೆ. ಈ ಅಧ್ಯಯನಕ್ಕೆ @UKinSriLanka, @WHOSriLanka ಚೀನೀ ಅಕಾಡೆಮಿ ಆಫ್ ಸೈನ್ಸ್ ನೀಡಿದೆ ಧನಸಹಾಯ  ಮಾಡಿರುವುದಾಗಿ ಎಂದು ಅವರು ಹೇಳಿದ್ದಾರೆ.

ಇನ್ನೂ 500,000 ಜನರಿಗೆ ಕೋವಿಶೀಲ್ಡ್ ಎರಡನೇ ಡೋಸ್ ನೀಡಲು ಶ್ರೀಲಂಕಾ ಕಾಯುತ್ತಿದೆ. ಜನವರಿ ಕೊನೆಯಲ್ಲಿ ಶ್ರೀಲಂಕಾದಲ್ಲಿ ಲಸಿಕಾ ಅಭಿಯಾನ ಆರಂಭವಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT