ಸಾಂದರ್ಭಿಕ ಚಿತ್ರ 
ದೇಶ

ಕೋವಿಡ್ ಪಾಸಿಟಿವ್ ಪ್ರಮಾಣ ಶೇ.10ಕ್ಕಿಂತ ಹೆಚ್ಚಿರುವ ಜಿಲ್ಲೆಗಳಲ್ಲಿ ಕಠಿಣ ನಿರ್ಬಂಧ ವಿಧಿಸುವ ಅಗತ್ಯ ಇದೆ: ಕೇಂದ್ರ

ದೇಶದಲ್ಲಿ ಮಹಮಾರಿ ಕೊರೋನಾ ವೈರಸ್ ಮತ್ತೆ ಹೆಚ್ಚುತ್ತಿದ್ದು, ಕಳೆದ ಕೆಲವು ವಾರಗಳಿಂದ ಕೋವಿಡ್ ಪಾಸಿಟಿವ್ ಪ್ರಮಾಣ ಶೇಕಡಾ 10ಕ್ಕಿಂತ ಹೆಚ್ಚು ವರದಿಯಾಗುತ್ತಿರುವ ಜಿಲ್ಲೆಗಳಲ್ಲಿ ಜನರ ಚಲನವಲನ ಮತ್ತು ಜನಸಂದಣಿಯನ್ನು....

ನವದೆಹಲಿ: ದೇಶದಲ್ಲಿ ಮಹಮಾರಿ ಕೊರೋನಾ ವೈರಸ್ ಮತ್ತೆ ಹೆಚ್ಚುತ್ತಿದ್ದು, ಕಳೆದ ಕೆಲವು ವಾರಗಳಿಂದ ಕೋವಿಡ್ ಪಾಸಿಟಿವ್ ಪ್ರಮಾಣ ಶೇಕಡಾ 10ಕ್ಕಿಂತ ಹೆಚ್ಚು ವರದಿಯಾಗುತ್ತಿರುವ ಜಿಲ್ಲೆಗಳಲ್ಲಿ ಜನರ ಚಲನವಲನ ಮತ್ತು ಜನಸಂದಣಿಯನ್ನು ತಡೆಯಲು ಅಥವಾ ಕಡಿಮೆ ಮಾಡಲು ಕಠಿಣ ನಿರ್ಬಂಧಗಳನ್ನು ಪರಿಗಣಿಸಬೇಕು ಎಂದು ಕೇಂದ್ರ ಸರ್ಕಾರ ಪ್ರಕರಣಗಳು ಹೆಚ್ಚುತ್ತಿರುವ 10 ರಾಜ್ಯಗಳಿಗೆ ಸೂಚಿಸಿದೆ.

ದೇಶದ 46 ಜಿಲ್ಲೆಗಳಲ್ಲಿ ಶೇಕಡಾ 10 ಕ್ಕಿಂತ ಹೆಚ್ಚು ಪಾಸಿಟಿವ್ ಪ್ರಕರಣಗಳು ವರದಿಯಾಗುತ್ತಿದ್ದು, ಇನ್ನೂ 53 ಜಿಲ್ಲೆಗಳಲ್ಲಿ ಶೇ. ಐದರಿಂದ 10ರಷ್ಟು ಪಾಸಿಟಿವ್ ಪ್ರಕರಣಗಳು ವರದಿಯಾಗುತ್ತಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಹೇಳಿದೆ.

ರಾಜ್ಯ ಸರ್ಕಾರಗಳು ಕೋವಿಡ್ -19 ಪತ್ತೆಗಾಗಿ ಪರೀಕ್ಷೆಯನ್ನು ಹೆಚ್ಚಿಸಬೇಕು. ಈ ಹಂತದಲ್ಲಿ ಯಾವುದೇ ನಿರ್ಬಂಧಗಳನ್ನು ಸಡಿಲಸಬಾರದು. ಇಲ್ಲದಿದ್ದರೆ ಈ ಜಿಲ್ಲೆಗಳಲ್ಲಿ ಪರಿಸ್ಥಿತಿ ಹದಗೆಡುತ್ತದೆ ಎಂದು ಕೇಂದ್ರ ಸರ್ಕಾರ ಎಚ್ಚರಿಸಿದೆ.

ಕೇರಳ, ಮಹಾರಾಷ್ಟ್ರ, ಕರ್ನಾಟಕ, ತಮಿಳುನಾಡು, ಒಡಿಶಾ, ಅಸ್ಸಾಂ, ಮಿಜೋರಾಂ, ಮೇಘಾಲಯ, ಆಂಧ್ರಪ್ರದೇಶ ಮತ್ತು ಮಣಿಪುರದ ಕೋವಿಡ್ -19 ಪರಿಸ್ಥಿತಿಯನ್ನು ಪರಿಶೀಲಿಸಲು ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಅವರು ಇಂದು ಉನ್ನತ ಮಟ್ಟದ ಸಭೆ ನಡೆಸಿದರು.

ಈ ರಾಜ್ಯಗಳಲ್ಲಿ ಆರೋಗ್ಯ ಅಧಿಕಾರಿಗಳು ಕೋವಿಡ್ ಕಣ್ಗಾವಲು, ನಿಯಂತ್ರಣ ಮತ್ತು ನಿರ್ವಹಣೆಗೆ ತೆಗೆದುಕೊಂಡ ಸಾರ್ವಜನಿಕ ಆರೋಗ್ಯ ಕ್ರಮಗಳನ್ನು ಸಹ ಪರಿಶೀಲಿಸಲಾಯಿತು. ಈ ರಾಜ್ಯಗಳು ದೈನಂದಿನ ಕೋವಿಡ್ ಪ್ರಕರಣಗಳಲ್ಲಿ ಹೆಚ್ಚಳ ಅಥವಾ ಪಾಸಿಟಿವ್ ಪ್ರಮಾಣ ಏರಿಕೆಯಾಗುತ್ತಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದೆ.

ಈ ರಾಜ್ಯಗಳಲ್ಲಿ ಶೇಕಡಾ 80 ಕ್ಕಿಂತಲೂ ಹೆಚ್ಚು ಸಕ್ರಿಯ ಪ್ರಕರಣಗಳು ಮನೆಯಲ್ಲೇ ಇರುವುದಾಗಿ ವರದಿಯಾಗಿರುವುದನ್ನು ಗಮನಿಸಿದರೆ, ಈ ಪ್ರಕರಣಗಳನ್ನು ಪರಿಣಾಮಕಾರಿಯಾಗಿ ಮತ್ತು ಕಟ್ಟುನಿಟ್ಟಾಗಿ ಮೇಲ್ವಿಚಾರಣೆ ಮಾಡುವ ಅಗತ್ಯವಿದ್ದು ಅದು ಇತರ ಜನರನ್ನು ಭೇಟಿಯಾಗದಂತೆ ಮತ್ತು ಸೋಂಕು ಹರಡದಂತೆ ಹೇಳಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

SCROLL FOR NEXT