ಅಂತಾರಾಜ್ಯ ಘರ್ಷಣೆಯ ಬಳಿಕ ಅಸ್ಸಾಂ ಭದ್ರತಾ ಪಡೆಗಳಿಂದ ಬಿಗಿ ಬಂದೋಬಸ್ತ್ 
ದೇಶ

ವಿವಾದಿತ ಗಡಿ ಪ್ರದೇಶದಗಳಿಂದ ಪೊಲೀಸ್ ಸಿಬ್ಬಂದಿ ಹಿಂಪಡೆಯಲು ಅಸ್ಸಾಮ್, ನಾಗಾಲ್ಯಾಂಡ್ ನಿರ್ಧಾರ

ವಿವಾದಿತ ಗಡಿ ಪ್ರದೇಶಗಳಿಂದ ಭದ್ರತಾ ಪಡೆಗಳನ್ನು ಹಿಂಪಡೆಯುವುದಕ್ಕೆ ಅಸ್ಸಾಂ, ನಾಗಾಲ್ಯಾಂಡ್ ನಿರ್ಧರಿಸಿದೆ.

ಗುವಾಹಟಿ: ವಿವಾದಿತ ಗಡಿ ಪ್ರದೇಶಗಳಿಂದ ಭದ್ರತಾ ಪಡೆಗಳನ್ನು ಹಿಂಪಡೆಯುವುದಕ್ಕೆ ಅಸ್ಸಾಂ, ನಾಗಾಲ್ಯಾಂಡ್ ನಿರ್ಧರಿಸಿದೆ.

ಪ್ರಕ್ಷುಬ್ಧ ವಾತಾವರಣವನ್ನು ತಗ್ಗಿಸುವ ನಿಟ್ಟಿನಲ್ಲಿ ಉಭಯ ರಾಜ್ಯಗಳೂ ಈ ನಿರ್ಧಾರಕ್ಕೆ ಬಂದಿವೆ. ಅಂತಾರಾಜ್ಯ ಗಡಿ ವಿವಾದ ಉಂಟಾಗಿದ್ದು, ವಿವಾದಿತ ಪ್ರದೇಶಗಳಲ್ಲಿ ಭದ್ರತಾ ಪಡೆಗಳನ್ನು ನಿಯೋಜಿಸಲಾಗಿತ್ತು. 

ಅಸ್ಸಾಂ ಸಿಎಂ ಹಿಮಂತ ಬಿಸ್ವ ಶರ್ಮ ಈ ನಡೆಯನ್ನು ಐತಿಹಾಸಿಕ ನಿರ್ಧಾರ ಎಂದು ಬಣ್ಣಿಸಿದ್ದಾರೆ. ಉಭಯ ರಾಜ್ಯಗಳ ಮುಖ್ಯಕಾರ್ಯದರ್ಶಿಗಳ ನಡುವೆ ನಾಗಲ್ಯಾಂಡ್ ನ ದಿಮಾಪುರದಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಎರಡು ವಿವಾದಿತ ಪ್ರದೇಶದಲ್ಲಿ ಪೊಲೀಸರ ನಡುವೆ ಘರ್ಷಣೆ ಉಂಟಾಗಿತ್ತು.

ವಿವಾದಿತ ಎರಡೂ ಪ್ರದೇಶಗಳು ಜೋರ್ಹಟ್ ಜಿಲ್ಲೆಯಲ್ಲಿನ ಡೆಸೊಯ್ ಕಣಿವೆ ಮೀಸಲು ಅರಣ್ಯ ಪ್ರದೇಶಕ್ಕೆ ಸೇರಿದವೆಂದು ಅಸ್ಸಾಂ ಹೇಳುತ್ತಿದೆ. ಆದರೆ ನಾಗಾಲ್ಯಾಂಡ್ ಈ ಎರಡೂ ಪ್ರದೇಶಗಳು ನಾಗಾಲ್ಯಾಂಡ್  ನ ಮೊಕೊಕ್ಚುಂಗ್ ಜಿಲ್ಲೆಯ ತ್ಸುರಾಂಗ್‌ಕಾಂಗ್ ಕಣಿವೆಯ ಭಾಗವೆಂದು ಪ್ರತಿಪಾದಿಸುತ್ತಿದೆ.

ಘರ್ಷಣೆ ತಪ್ಪಿಸಲು, ಶಾಂತಿ ಕಾಪಾಡಲು ತಕ್ಷಣದ ಕ್ರಮಗಳನ್ನು ಕೈಗೊಳ್ಳಬೇಕೆಂಬ ನಿರ್ಧಾರವನ್ನು ಮುಖ್ಯಕಾರ್ಯದರ್ಶಿಗಳ ನಡುವಿನ ಸಭೆಯಲ್ಲಿ ನಿರ್ಧರಿಸಲಾಗಿದೆ. ಈ ನಿಟ್ಟಿನಲ್ಲಿ ಭದ್ರತಾ ಸಿಬ್ಬಂದಿಗಳನ್ನು ವಿವಾದಿತ ಪ್ರದೇಶದಿಂದ ತಕ್ಷಣವೇ ಉಭಯ ಪಕ್ಷಗಳೂ ವಾಪಸ್ ಕರೆಸಿಕೊಳ್ಳುವುದಕ್ಕೆ ನಿರ್ಧರಿಸಿದ್ದು, 24 ಗಂಟೆಗಳಲ್ಲಿ ಭದ್ರತಾ ಸಿಬ್ಬಂದಿಗಳನ್ನು ವಾಪಸ್ ಕರೆಸಿಕೊಳ್ಳಬೇಕೆಂಬ ನಿರ್ಧಾರ ಕೈಗೊಳ್ಳಲಾಗಿದೆ.

ಒಪ್ಪಂದದ ಪ್ರಕಾರ ನಾಗಾಲ್ಯಾಂಡ್ ಹಾಗೂ ಅಸ್ಸಾಂ ಈ ಪ್ರದೇಶದ ಮೇಲೆ ಯುಎವಿ ಮೂಲಕ ಕಣ್ಗಾವಲು ಇರಲಿದೆ. ಶಾಂತಿ ಸ್ಥಾಪನೆಗೆ ಸಹರಿಸಿದ ನಾಗಾಲ್ಯಾಂಡ್ ನ ಸಿಎಂ ಗೆ ಅಸ್ಸಾಂ ಸಿಎಂ ಹಿಮಂತ ಬಿಸ್ವ ಶರ್ಮ ಧನ್ಯವಾದ ತಿಳಿಸಿದ್ದಾರೆ.

ಅಸ್ಸಾಂ ಗಡಿಗಳಲ್ಲಿ ಶಾಂತಿ ಪಾಲನೆಗೆ ಬದ್ಧವಾಗಿದೆ ಹಾಗೂ ಈಶಾನ್ಯದ ಆರ್ಥಿಕ ಸಾಮಾಜಿಕ ಸಮೃದ್ಧಿ ಶ್ರಮಿಸುತ್ತದೆ ಎಂದು ಹಿಮಂತ ಬಿಸ್ವ ಶರ್ಮ ಟ್ವೀಟ್ ಮಾಡಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಾಂವಿಧಾನಿಕ ಕರ್ತವ್ಯಗಳು ಪ್ರಜಾಪ್ರಭುತ್ವದ ಅಡಿಪಾಯ: ದೇಶದ ನಾಗರಿಕರಿಗೆ ಪ್ರಧಾನಿ ಮೋದಿ ಪತ್ರ

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್​ ನ್ಯೂಸ್​: ಹಳದಿ ಮಾರ್ಗದ ಸಂಚಾರ ಸೋಮವಾರ ಬೆಳಗ್ಗೆ 5 ಗಂಟೆಯಿಂದಲೇ ಶುರು..!

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

SCROLL FOR NEXT