ಸಂಸತ್ 
ದೇಶ

ಪೆಗಾಸಸ್ ಹಗರಣ: ಸಂಸತ್ ಕಲಾಪಕ್ಕೆ ಅಡ್ಡಿಯಿಂದ 130 ಕೋಟಿ ರೂ. ತೆರಿಗೆದಾರರ ಹಣ ವ್ಯರ್ಥ 

ಪೆಗಾಸಸ್ ಸ್ನೂಪಿಂಗ್ ಹಗರಣದ ಕುರಿತು ಪ್ರಧಾನಿ ನರೇಂದ್ರ ಮೋದಿ ಆಡಳಿತ ಮತ್ತು ಪ್ರತಿಪಕ್ಷಗಳ ನಡುವಿನ ಬಿಕ್ಕಟ್ಟು ಶಮನವಾಗುವ ಲಕ್ಷಣಗಳು ಗೋಚರಿಸುತ್ತಿಲ್ಲ. ಪದೇ ಪದೇ ಸಂಸತ್ ಕಲಾಪಕ್ಕೆ ಅಡ್ಡಿಯಿಂದಾಗಿ ರೂ. 130 ಕೋಟಿ ಗೂ ಹೆಚ್ಚು ತೆರಿಗೆದಾರರ ಹಣ ವ್ಯರ್ಥವಾಗಿದೆ ಎಂದು ಸರ್ಕಾರದ ಮೂಲಗಳು ಶನಿವಾರ ಹೇಳಿವೆ.

ನವದೆಹಲಿ: ಪೆಗಾಸಸ್ ಸ್ನೂಪಿಂಗ್ ಹಗರಣದ ಕುರಿತು ಪ್ರಧಾನಿ ನರೇಂದ್ರ ಮೋದಿ ಆಡಳಿತ ಮತ್ತು ಪ್ರತಿಪಕ್ಷಗಳ ನಡುವಿನ ಬಿಕ್ಕಟ್ಟು ಶಮನವಾಗುವ ಲಕ್ಷಣಗಳು ಗೋಚರಿಸುತ್ತಿಲ್ಲ. ಪದೇ ಪದೇ ಸಂಸತ್ ಕಲಾಪಕ್ಕೆ ಅಡ್ಡಿಯಿಂದಾಗಿ ರೂ. 130 ಕೋಟಿ ಗೂ ಹೆಚ್ಚು ತೆರಿಗೆದಾರರ ಹಣ ವ್ಯರ್ಥವಾಗಿದೆ ಎಂದು ಸರ್ಕಾರದ ಮೂಲಗಳು ಶನಿವಾರ ಹೇಳಿವೆ.

ಜುಲೈ 19 ರಂದು ಸಂಸತ್ ಅಧಿವೇಶನ ಆರಂಭವಾದಾಗಿನಿಂದಲೂ ಈ ವಿಷಯದ ಬಗ್ಗೆ ಚರ್ಚೆಗೆ ಪಟ್ಟು ಹಿಡಿದಿರುವ ಪ್ರತಿಪಕ್ಷಗಳು ಸುಪ್ರೀಂಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ಸ್ವತಂತ್ರವಾದ ತನಿಖೆಯೊಂದಕ್ಕೆ ಒತ್ತಾಯಿಸುತ್ತಿವೆ. ಪ್ರತಿಪಕ್ಷಗಳ ಬೇಡಿಕೆಗಳನ್ನು ಸರ್ಕಾರ ನಿರಾಕರಿಸಿದೆ.

ಲೋಕಸಭೆಯು ಸಂಭವನೀಯ 54 ಗಂಟೆಗಳ ಪೈಕಿ 7 ಗಂಟೆಗಳ ಕಾಲ ಮಾತ್ರ ಕಾರ್ಯನಿರ್ವಹಿಸಿದ್ದರೆ, ರಾಜ್ಯಸಭೆ ಸಂಭವನೀಯ 53 ಗಂಟೆಗಳಲ್ಲಿ 11 ಗಂಟೆಗಳ ಕಾಲ ಕಾರ್ಯನಿರ್ವಹಿಸಿದೆ. ಈವರೆಗೆ ಸಂಸತ್ತು 107 ಗಂಟೆಗಳಲ್ಲಿ ಕೇವಲ 18 ಗಂಟೆಗಳು ಮಾತ್ರ ಕಾರ್ಯನಿರ್ವಹಿಸಿದೆ. ಹೀಗಾಗಿ ಸುಮಾರು 89 ಗಂಟೆಗಳ ಕೆಲಸದ ಸಮಯ ವ್ಯರ್ಥವಾಗಿದೆ. ಇದರರ್ಥ ತೆರಿಗೆದಾರರಿಗೆ ಒಟ್ಟು 133 ಕೋಟಿ ರೂಪಾಯಿಗಳಿಗಿಂತ ಹೆಚ್ಚು ನಷ್ಟವಾಗಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT