ಸಾಂದರ್ಭಿಕ ಚಿತ್ರ 
ದೇಶ

ಶಾಲೆ ಪುನರಾರಂಭಕ್ಕೆ ಕಾರ್ಯಪಡೆ ರಚನೆಗೆ ವಿಜ್ಞಾನಿಗಳು,ವೈದ್ಯರ ಒತ್ತಾಯ: ಮೂರು ರಾಜ್ಯಗಳ ಸಿಎಂಗಳಿಗೆ ಪತ್ರ

ಶಾಲೆಗಳನ್ನು ಹಂತ ಹಂತವಾಗಿ ಪುನರಾರಂಭಿಸಲು ವೈಜ್ಞಾನಿಕ ಯೋಜನೆಯ ನೆರವಿಗಾಗಿ ತುರ್ತಾಗಿ ಕಾರ್ಯಪಡೆ ರಚನೆಗಾಗಿ ದೇಶಾದ್ಯಂತ ಸುಮಾರು 50 ವೈದ್ಯರು ಮತ್ತು ಸಾರ್ವಜನಿಕ ಆರೋಗ್ಯ ಪರಿಣಿತರೊಂದಿಗೆ ದೆಹಲಿ ಮತ್ತು ಬಾಂಬೆ ಐಐಟಿ ವಿಜ್ಞಾನಿಗಳು ಕರ್ನಾಟಕ, ದೆಹಲಿ, ಮಹಾರಾಷ್ಟ್ರ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದಾರೆ.

ನವದೆಹಲಿ: ಶಾಲೆಗಳನ್ನು ಹಂತ ಹಂತವಾಗಿ ಪುನರಾರಂಭಿಸಲು ವೈಜ್ಞಾನಿಕ ಯೋಜನೆಯ ನೆರವಿಗಾಗಿ ತುರ್ತಾಗಿ ಕಾರ್ಯಪಡೆ ರಚನೆಗಾಗಿ ದೇಶಾದ್ಯಂತ ಸುಮಾರು 50 ವೈದ್ಯರು ಮತ್ತು ಸಾರ್ವಜನಿಕ ಆರೋಗ್ಯ ಪರಿಣಿತರೊಂದಿಗೆ ದೆಹಲಿ ಮತ್ತು ಬಾಂಬೆ ಐಐಟಿ ವಿಜ್ಞಾನಿಗಳು ಕರ್ನಾಟಕ, ದೆಹಲಿ, ಮಹಾರಾಷ್ಟ್ರ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದಾರೆ.

ಸುರಕ್ಷತಾ ಕ್ರಮಗಳೊಂದಿಗೆ ಶಾಲೆಗಳ ಪುನರಾರಂಭ ಸಾಧ್ಯ ಎಂಬ ಪುರಾವೆಗಳ ಹೊರತಾಗಿಯೂ ಕಳೆದ 16 ತಿಂಗಳುಗಳಿಂದ ಶಾಲೆಗಳು ಬಂದ್ ಆಗಿದ್ದರಿಂದ ಕೋಟ್ಯಂತರ ವಿದ್ಯಾರ್ಥಿಗಳ ಕಲಿಕಾ ಅಭಿವೃದ್ಧಿ ಕೊರತೆಗೆ ಕಾರಣವಾಗಿದೆ ಎಂದು ಪರಿಣಿತರು ಹೇಳಿದ್ದಾರೆ. ಐಸಿಎಂಆರ್ ಮುಖ್ಯಸ್ಥ ಬಲರಾಂ ಭಾರ್ಗವ ಮತ್ತು ದೆಹಲಿ ಏಮ್ಸ್ ನಿರ್ದೇಶಕ ರಂದೀಪ್ ಗುಲೆರಿಯಾ ನಂತಹ ಸರ್ಕಾರದ ಉನ್ನತಾಧಿಕಾರಿಗಳು, ಕಡಿಮೆ ಪಾಸಿಟಿವಿಟಿ ದರ ಇರುವ ಜಿಲ್ಲೆಗಳಲ್ಲಿ ಶಾಲೆ ಪುನರಾಂಭಿಸುವ ಪರವಾಗಿ ವಾದಿಸಿದ ಬೆನ್ನಲ್ಲೇ ತಜ್ಞರು ಈ ರೀತಿಯ ಹೇಳಿಕೆ ನೀಡಿದ್ದಾರೆ. 

ಇತ್ತೀಚಿಗೆ ಬಿಹಾರ, ಒಡಿಶಾದಂತಹ ರಾಜ್ಯಗಳನ್ನು ಹೊರತುಪಡಿಸಿದಂತೆ ಕೆಲ ರಾಜ್ಯಗಳು ಶಾಲೆಗಳನ್ನು ಪುನರಾರಂಭಿಸಲು ನಿರ್ಧರಿಸಿದ್ದವು. ಸುರಕ್ಷತಾ ಕ್ರಮಗಳೊಂದಿಗೆ ಶಾಲೆಗಳ ಪುನರಾರಂಭ ಸಾಧ್ಯ ಎಂಬ ಪುರಾವೆಗಳ ಹೊರತಾಗಿಯೂ  ತಿಂಗಳುಗಟ್ಟಲೇ ಶಾಲೆಗಳನ್ನು ಮುಚ್ಚಿದ್ದರಿಂದ ಕಲಿಕಾ ಮತ್ತು ಅಭಿವೃದ್ಧಿಯಲ್ಲಿ ಕೊರತೆಯಾಗಿದೆ ಎಂದು ದೆಹಲಿ, ಮಹಾರಾಷ್ಟ್ರ ಮತ್ತು ಕರ್ನಾಟಕ ಮುಖ್ಯಮಂತ್ರಿಗಳಿಗೆ ಬರೆದಿರುವ ಪತ್ರದಲ್ಲಿ ತಜ್ಞರು ಹೇಳಿದ್ದಾರೆ.

ಫ್ರಾನ್ಸ್, ಸ್ವಿಡನ್ ಸೇರಿದಂತೆ ವಿಶ್ವದಾದ್ಯಂತ ಸುಮಾರು 170 ರಾಷ್ಟ್ರಗಳಲ್ಲಿ ಶಾಲೆಗಳು ಸಂಪೂರ್ಣವಾಗಿ ಅಥವಾ ಭಾಗಶ: ವಾಗಿ ಪುನರಾರಂಭವಾಗಿರುವುದಾಗಿ ತಜ್ಞರು, ವೈದ್ಯರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ವಯಸ್ಕರಿಗೆ ಲಸಿಕೆಗೆ ಇನ್ನೂ ಕೆಲ ತಿಂಗಳುಗಳು ಹಿಡಿಯಬಹುದು ಎಂದು ತಜ್ಞರ ಗುಂಪು ಒತ್ತಿ ಹೇಳಿದೆ. ಏಕೆಂದರೆ ದೆಹಲಿಯಲ್ಲಿ ಅರ್ಹ ಜನಸಂಖ್ಯೆಯ ಶೇ.13 ರಷ್ಟು, ಮಹಾರಾಷ್ಟ್ರ ಮತ್ತು ಕರ್ನಾಟಕದಲ್ಲಿ ಶೇ.7 ರಷ್ಟು ಜನರು ಮಾತ್ರ ಲಸಿಕೆ ಪಡೆದುಕೊಂಡಿದ್ದಾರೆ

ಶಾಲೆಗಳನ್ನು ಇಡೀ ರಾತ್ರಿ ತೆರೆಯಲು ಸಾಧ್ಯವಿಲ್ಲ, ಎಲ್ಲಾ ಹಂತಗಳಲ್ಲಿ, ಸ್ಥಳೀಯ ಪರಿಸ್ಥಿತಿಗೆ ಸಂಬಂಧಿಸಿದಂತೆ ಎಚ್ಚರಿಕೆಯಿಂದ ಯೋಜನೆ ರೂಪಿಸಬೇಕಾಗಿದೆ. ಮುಂದಿನ ಹೆಜ್ಜೆಯಾಗಿ, ನಿಮ್ಮ ರಾಜ್ಯಗಳಲ್ಲಿ ಶಾಲೆಗಳನ್ನು ಭಾಗಶ: ಅಥವಾ ಸಂಪೂರ್ಣವಾಗಿ  ಪುನರಾರಂಭಿಸಲು ತುರ್ತು ಆಧಾರಿತ ಯೋಜನೆ ಕುರಿತು ಸಂಬಂಧಿತ ತಜ್ಞರೊಂದಿಗೆ ಕಾರ್ಯಪಡೆಯನ್ನು  ರಚನೆಯನ್ನು ಪರಿಗಣಿಸಬೇಕು ಎಂದು ತಜ್ಞರು ಪತ್ರದಲ್ಲಿ ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜ್ಯದಲ್ಲಿ ಸಿಎಂ ಗದ್ದುಗೆ ಗುದ್ದಾಟ: ಎಲ್ಲ ಗೊಂದಲಗಳಿಗೆ ಹೈಕಮಾಂಡ್ ತೆರೆ ಎಳೆಯಬೇಕು- ಸಿಎಂ ಸಿದ್ದರಾಮಯ್ಯ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಪರಸ್ತ್ರೀ ಮೋಹ, ನಂಬಿಕೆ ದ್ರೋಹ: ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಇದು ಕೇವಲ ಧ್ವಜವಲ್ಲ ಭಾರತೀಯ ನಾಗರಿಕತೆಯ ಪುನರ್‌ ಜಾಗೃತಿಯ ಧ್ವಜ, ಶತಮಾನಗಳಷ್ಟು ಹಳೆಯ ಗಾಯ ಈಗ ವಾಸಿಯಾಗುತ್ತಿದೆ: ಪ್ರಧಾನಿ ಮೋದಿ

ಕೆಲಸದ ಹೊರೆ ಖಂಡಿಸಿ ಪಶ್ಚಿಮ ಬಂಗಾಳ CEO ಕಚೇರಿ ಮುಂದೆ BLOಗಳಿಂದ ಅಹೋರಾತ್ರಿ ಧರಣಿ!

ಅಯೋಧ್ಯೆ ರಾಮ ಮಂದಿರ ನಿರ್ಮಾಣ ಪೂರ್ಣ: ರಾಮ-ಸೀತೆ ವಿವಾಹ ಪರ್ವದಂದೇ ದೇಗುಲದ ಶಿಖರದ ಮೇಲೆ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

SCROLL FOR NEXT