ವಿದ್ಯಾರ್ಥಿಗಳು 
ದೇಶ

2021ನೇ ಸಾಲಿನ ಸಿಬಿಎಸ್ಇ 12ನೇ ತರಗತಿ ಪರೀಕ್ಷೆ ರದ್ದು; ವಿದ್ಯಾರ್ಥಿಗಳ ಸುರಕ್ಷತೆ ಮುಖ್ಯ: ಪ್ರಧಾನಿ ಮೋದಿ

ಮಹಾಮಾರಿ ಕೊರೋನಾ ಎರಡನೇ ಅಲೆ ದೇಶದಲ್ಲಿ ಆತಂಕ ಸೃಷ್ಟಿಸುತ್ತಿದ್ದು ವಿದ್ಯಾರ್ಥಿಗಳ ಸುರಕ್ಷತೆ ದೃಷ್ಟಿಯಿಂದ 2021ನೇ ಸಾಲಿನ ಸಿಬಿಎಸ್ಇ 12ನೇ ತರಗತಿ ಪರೀಕ್ಷೆಗಳನ್ನು ರದ್ದು ಮಾಡಿರುವುದಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಘೋಷಿಸಿದ್ದಾರೆ. 

ನವದೆಹಲಿ: ಮಹಾಮಾರಿ ಕೊರೋನಾ ಎರಡನೇ ಅಲೆ ದೇಶದಲ್ಲಿ ಆತಂಕ ಸೃಷ್ಟಿಸುತ್ತಿದ್ದು ವಿದ್ಯಾರ್ಥಿಗಳ ಸುರಕ್ಷತೆ ದೃಷ್ಟಿಯಿಂದ 2021ನೇ ಸಾಲಿನ ಸಿಬಿಎಸ್ಇ 12ನೇ ತರಗತಿ ಪರೀಕ್ಷೆಗಳನ್ನು ರದ್ದು ಮಾಡಿರುವುದಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಘೋಷಿಸಿದ್ದಾರೆ. 

ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಇಂದು ಸಂಜೆ 12ನೇ ತರಗತಿ ಪರೀಕ್ಷೆ ಕುರಿತಂತೆ ನಿರ್ಣಾಯಕ ಸಭೆ ಬಳಿಕ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. 

ಕೋವಿಡ್ ಕಾರಣದಿಂದ ಅನಿಶ್ಚಿತ ಪರಿಸ್ಥಿತಿ ಹಿನ್ನೆಲೆಯಲ್ಲಿ ಮತ್ತು ವಿವಿಧ ಭಾಗೀದಾರರ ಅಭಿಪ್ರಾಯಗಳನ್ನು ಪರಿಗಣಿಸಿ ಸಿಬಿಎಸ್ಇ 12ನೇ ತರಗತಿ ಪರೀಕ್ಷೆಗಳನ್ನು ಈ ವರ್ಷ ನಡೆಸದಿರಲು ನಿರ್ಧರಿಸಲಾಗಿದೆ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಪ್ರಧಾನಮಂತ್ರಿ ಕಾರ್ಯಾಲಯ ಪ್ರಕಟಣೆಯಲ್ಲಿ ತಿಳಿಸಿದೆ.

ದೇಶದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಇಳಿಮುಖವಾಗುತ್ತಿದ್ದು, ಕೆಲ ರಾಜ್ಯಗಳಲ್ಲಿ ಸೂಕ್ತ ಕ್ರಮಗಳೊಂದಿಗೆ ಸಾಂಕ್ರಾಮಿಕವನ್ನು ನಿರ್ವಹಿಸಲಾಗುತ್ತಿದೆ. ಕೆಲ ರಾಜ್ಯಗಳು ಲಾಕ್ ಡೌನ್ ಅನ್ನು ಇನ್ನೂ ಮುಂದುವರೆಸುತ್ತಿವೆ. ಪೋಷಕರು ಮತ್ತು ಶಿಕ್ಷಕರು ಸ್ವಾಭಾವಿಕವಾಗಿ ಸದ್ಯದ ಪರಿಸ್ಥಿತಿಯಲ್ಲಿ ವಿದ್ಯಾರ್ಥಿಗಳ ಆರೋಗ್ಯದ ಬಗ್ಗೆ ಆತಂಕಗೊಂಡಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ವಿದ್ಯಾರ್ಥಿಗಳನ್ನು ಬಲವಂತವಾಗಿ ಪರೀಕ್ಷೆಗೆ ಕಳುಹಿಸುವುದು ಸೂಕ್ತವಲ್ಲ ಎಂದು ಪ್ರಧಾನಿ ಹೇಳಿರುವುದಾಗಿ ಪ್ರಕಟಣೆ ತಿಳಿಸಿದೆ. 

ಕಳೆದ ವರ್ಷದಂತೆ, ಪರೀಕ್ಷೆಗಳನ್ನು ತೆಗೆದುಕೊಳ್ಳಲು  ವಿದ್ಯಾರ್ಥಿಗಳು ಇಚ್ಛಿಸಿದರೆ, ಪರಿಸ್ಥಿತಿ ನಿಯಂತ್ರಣಕ್ಕೆ ಬಂದ ನಂತರ ಸಿಬಿಎಸ್ಇ ಇಂತಹ ಆಯ್ಕೆಯನ್ನು ಪರಿಗಣಿಸಲು ಸಹ ಸಭೆಯಲ್ಲಿ ನಿರ್ಧರಿಸಲಾಗಿದೆ. ಇದಕ್ಕೂ ಮುನ್ನ ಸರ್ಕಾರ 10ನೇ ತರಗತಿ ಪರೀಕ್ಷೆಗಳನ್ನು ರದ್ದುಪಡಿಸಿತ್ತು.

"ಭಾರತ ಸರ್ಕಾರವು ಸಿಬಿಎಸ್ಇ 12ನೇ ತರಗತಿಯ ಬೋರ್ಡ್ ಪರೀಕ್ಷೆಗಳನ್ನು ರದ್ದುಗೊಳಿಸಲು ನಿರ್ಧರಿಸಿದೆ. ವ್ಯಾಪಕ ಸಮಾಲೋಚನೆಯ ನಂತರ, ನಾವು ವಿದ್ಯಾರ್ಥಿ-ಸ್ನೇಹಿಯಾಗಿರುವ ನಿರ್ಧಾರವನ್ನು ತೆಗೆದುಕೊಂಡಿದ್ದೇವೆ. ಅದು ವಿದ್ಯಾರ್ಥಿಗಳ ಆರೋಗ್ಯ ಮತ್ತು ನಮ್ಮ ಯುವ ಭವಿಷ್ಯದ ರಕ್ಷಣೆ ದೃಷ್ಟಿಯಿಂದಾಗಿ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT