ಅರವಿಂದ್ ಕೇಜ್ರಿವಾಲ್ 
ದೇಶ

ದೆಹಲಿಯಲ್ಲಿ 944 ಬ್ಲ್ಯಾಕ್ ಫಂಗಸ್ ಪ್ರಕರಣ, 59 ಸಾವು, 41 ಮಂದಿ ಗುಣಮುಖ: ಮುಖ್ಯಮಂತ್ರಿ ಕೇಜ್ರಿವಾಲ್

ದೆಹಲಿಯಲ್ಲಿ 944 ಕಪ್ಪು ಶಿಲೀಂಧ್ರ ಪ್ರಕರಣಗಳಿದ್ದು, 59 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.

ನವದೆಹಲಿ: ದೆಹಲಿಯಲ್ಲಿ 944 ಕಪ್ಪು ಶಿಲೀಂಧ್ರ ಪ್ರಕರಣಗಳಿದ್ದು, 59 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.

ರಾಷ್ಟ್ರ ರಾಜಧಾನಿಯಲ್ಲಿ 944 ಕಪ್ಪು ಶಿಲೀಂಧ್ರ ಪ್ರಕರಣಗಳು ದಾಖಲಾಗಿದ್ದು, ಸರ್ಕಾರಿ ಆಸ್ಪತ್ರೆಗಳಲ್ಲಿ ಸುಮಾರು 650 ಮತ್ತು ಕೇಂದ್ರ ಸರ್ಕಾರಿ ಆಸ್ಪತ್ರೆಗಳಲ್ಲಿ 300 ಪ್ರಕರಣಗಳಿವೆ. ಇನ್ನು ದೆಹಲಿಯಲ್ಲಿ ಈವರೆಗೂ 41 ಮಂದಿ ಬ್ಲಾಕ್ ಫಂಗಸ್ ಸೋಂಕಿತರು ಗುಣಮುಖರಾಗಿದ್ದಾರೆ. 748 ಮಂದಿ ಸೋಂಕಿತರು ವಿವಿಧ  ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಕೇಜ್ರಿವಾಲ್ ಸುದ್ದಿಗಾರರಿಗೆ ತಿಳಿಸಿದ್ದಾರೆ. 

ಕಪ್ಪು ಶಿಲೀಂಧ್ರ ಚಿಕಿತ್ಸೆಯಲ್ಲಿ ಬಳಸುವ ಔಷಧದ ಕೊರತೆ ಇದ್ದು, ಆದಾಗ್ಯೂ, ಚುಚ್ಚುಮದ್ದಿನ ಪೂರೈಕೆ ಕಡಿಮೆ. ಈಗಾಗಲೆ ಒಂದು ಸಾವಿರ ಚುಚ್ಚುಮದ್ದು ಪೂರೈಕೆಯಾಗಿದೆ. ಓರ್ವ ಸೋಂಕಿತನಿಗೆ ಚಿಕಿತ್ಸೆ ಪರಿಣಾಮಕಾರಿಯಾಗಿರಲು ದಿನಕ್ಕೆ 3 ರಿಂದ ನಾಲ್ಕು ಇಂಜೆಕ್ಷನ್ ಗಳು ಬೇಕಾಗುತ್ತದೆ ಎಂದು ಅವರು ಹೇಳಿದ್ದಾರೆ.

ದೆಹಲಿಗೆ ಕೇವಲ 4,670 ಬಾಟಲುಗಳು ಬಂದಿದ್ದು, ವೈದ್ಯರ ಪ್ರಕಾರ, ಪ್ರತಿ ರೋಗಿಗೆ ವಾರಕ್ಕೆ ಸರಾಸರಿ 50 ಬಾಟಲ್ ಇಂಜೆಕ್ಷನ್ ಬೇಕಾಗುತ್ತವೆ. ನಾವು ಕೇಂದ್ರ ಸರ್ಕಾರದಿಂದ ಹಂಚಿಕೆ ಪಡೆದಾಗಲೆಲ್ಲಾ, ಪ್ರತಿ ಸೌಲಭ್ಯದಲ್ಲಿನ ಸೋಂಕಿತರ ಸಂಖ್ಯೆಗೆ ಅನುಗುಣವಾಗಿ ನಾವು ಅವುಗಳನ್ನು ಆಸ್ಪತ್ರೆಗಳಿಗೆ  ವಿತರಿಸುತ್ತೇವೆ. ಜೀವ ಉಳಿಸುವ ಈ  ಆಂಫೊಟೆರಿಸಿನ್-ಬಿ  ಔಷಧಿಗೆ ಭಾರಿ ಕೊರತೆ ಇದೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ಮೊದಲ ಬಾರಿಗೆ ದಾಳಿ ಕುರಿತು ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

ಚಾಮುಂಡೇಶ್ವರಿ ದೇವಿ ಬಗ್ಗೆ ಗೌರವವಿದ್ದು, ಧಾರ್ಮಿಕ ಭಾವನೆಗಳ ಗೌರವಿಸುತ್ತೇನೆ; ಬಾನು ಮುಷ್ತಾಕ್

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

SCROLL FOR NEXT