ಪಶ್ಚಿಮ ಬಂಗಾಳ ರಾಜ್ಯಪಾಲ ಜಗದೀಪ್ ಧಂಕರ್ 
ದೇಶ

'ಸಾರ್ವಜನಿಕ ಸೇವೆ ವಿರುದ್ಧ ಪ್ರತಿಷ್ಠೆಯ ಮೇಲುಗೈ': ಪ್ರಧಾನಿ ಸಭೆಗೆ ಮಮತಾ ಗೈರು ಕುರಿತು ರಾಜ್ಯಪಾಲ ಧಂಕರ್ ಕಿಡಿ

ಮೇ 28 ರಂದು ಪ್ರಧಾನಿ ನರೇಂದ್ರ ಮೋದಿ ಅವರ ಸಭೆಯಿಂದ ಹೊರಗುಳಿದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕುರಿತಂತೆ 'ಸಾರ್ವಜನಿಕ ಸೇವೆ ವಿರುದ್ಧ ಪ್ರತಿಷ್ಠೆ ಮೇಲುಗೈ ಸಾಧಿಸಿತು' ಎಂದು ಪಶ್ಚಿಮ ಬಂಗಾಳ ರಾಜ್ಯಪಾಲ ಜಗದೀಪ್ ಧಂಕರ್ ಮಂಗಳವಾರ ಹೇಳುವ ಮೂಲಕ ಹೊಸ ವಿವಾದವನ್ನು ಉಂಟು ಮಾಡಿದ್ದಾರೆ.

ಕೊಲ್ಕತ್ತಾ:  ಮೇ 28 ರಂದು ಪ್ರಧಾನಿ ನರೇಂದ್ರ ಮೋದಿ ಅವರ ಸಭೆಯಿಂದ ಹೊರಗುಳಿದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ
ಕುರಿತಂತೆ 'ಸಾರ್ವಜನಿಕ ಸೇವೆ ವಿರುದ್ಧ ಪ್ರತಿಷ್ಠೆ ಮೇಲುಗೈ ಸಾಧಿಸಿತು' ಎಂದು ಪಶ್ಚಿಮ ಬಂಗಾಳ ರಾಜ್ಯಪಾಲ ಜಗದೀಪ್ ಧಂಕರ್ ಮಂಗಳವಾರ ಹೇಳುವ ಮೂಲಕ ಹೊಸ ವಿವಾದವನ್ನು ಉಂಟು ಮಾಡಿದ್ದಾರೆ.

ರಾಜ್ಯಪಾಲರ ಹೇಳಿಕೆ ದುರದೃಷ್ಟಕರ ಎಂದು ಹೇಳಿರುವ ಆಡಳಿತರೂಢ ಟಿಎಂಸಿ, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಾರದ 24 ಗಂಟೆಯೂ ಸಾರ್ವಜನಿಕ ಸೇವೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಅವರ ಎಲ್ಲಾ ಕಾರ್ಯಗಳು ರಾಜ್ಯದ ಹಿತಾಸಕ್ತಿಗಳ ಬಗೆಗಿನ ಕಾಳಜಿಯಿಂದ ಪ್ರೇರೇಪಿಸಲ್ಪಡುತ್ತವೆ ಎಂದು ಸಮರ್ಥಿಸಿಕೊಂಡಿದೆ.

ಸುವೇಂದು ಅಧಿಕಾರಿ ಪಾಲ್ಗೊಂಡರೆ ನಾನು ಪಾಲ್ಗೊಳ್ಳುವುದಿಲ್ಲ ಎಂದು ಮಿಡ್ನಾಪುರ ಡಿಲ್ಲೆಯ ಕಲೈಕುಂಡಾದಲ್ಲಿನ ಸಭೆಗೂ ಮುಂಚಿತವಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕರೆ ಮಾಡಿದ್ದರು. ಮೇ 27 ರಂದು 11-16ಕ್ಕೆ ಮುಖ್ಯಮಂತ್ರಿ ಮಮತಾ ಕಚೇರಿಯಿಂದ ಮಾತನಾಡಬಹುದೇ? ಅರ್ಜೆಂಟ್ ಎಂಬ ಸಂದೇಶ ಬಂದಿತ್ತು ಎಂದು ಧಂಕರ್ ಟ್ವೀಟ್ ಮಾಡಿದ್ದಾರೆ.

ತದನಂತರ ಒಂದು ವೇಳೆ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ಪಾಲ್ಗೊಂಡರೆ ಯಾಸ್ ಚಂಡಮಾರುತದ 
ಪರಿಣಾಮ ಕುರಿತ ಪ್ರಧಾನಿಯ ಪರಾಮರ್ಶನಾ ಸಭೆಯನ್ನು ಬಹಿಷ್ಕರಿಸುವುದಾಗಿ ಫೋನ್ ನಲ್ಲಿ ಹೇಳಲಾಗಿತ್ತು. ಸಾರ್ವಜನಿಕ
ಸೇವೆ ವಿರುದ್ಧ ಪ್ರತಿಷ್ಠೆ ಮೇಲುಗೈ ಸಾಧಿಸಿದೆ ಎಂದು ಧಂಕರ್ ಮತ್ತೊಂದು ಟ್ವೀಟ್ ಮಾಡಿದ್ದಾರೆ.

ಧಂಕರ್, ಸುವೇಂದು ಅಧಿಕಾರಿ ಅಲ್ಲದೇ, ಬಿಜೆಪಿ ಸಂಸದ ದೆಬಾಶ್ರಿ ಚೌದರಿ ಕೂಡಾ ಸಭೆಯಲ್ಲಿ ಪಾಲ್ಗೊಂಡಿದ್ದರು. ಪ್ರಧಾನಿ- ಸಿಎಂ
ಸಭೆಯಲ್ಲಿ ಸುವೇಂದು ಅಧಿಕಾರಿ ಪಾಲ್ಗೊಂಡಿದ್ದರಿಂದ ಸಭೆಯಿಂದ ಹೊರಗುಳಿದಿದ್ದಾಗಿ ಮಮತಾ ಬ್ಯಾನರ್ಜಿ ಹೇಳಿದ್ದರು. ಇತ್ತೀಚಿಗೆ
ನಡೆದ ನಂದಿಗ್ರಾಮ ವಿಧಾನಸಭಾ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ವಿರುದ್ಧ ಮಮತಾ ಬ್ಯಾನರ್ಜಿ ಸೋತಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

ರಿಯಲ್ ಲೈಫ್‌ನಲ್ಲೂ ಒಂದಾದ ರೀಲ್ ಜೋಡಿ: ತೆಲುಗು ಸಂಪ್ರದಾಯದಂತೆ ರಶ್ಮಿಕಾ–ವಿಜಯ್ ವಿವಾಹ, ಸಂಜೆ ಕೊಡವ ಸಂಪ್ರದಾಯದಲ್ಲಿ ಮತ್ತೊಂದು ಸಮಾರಂಭ

ಅಮ್ಮಾ....ಐ ಲವ್ ಯೂ ಸೋ ಮಚ್: ಕುವೈತ್ ನಲ್ಲಿದ್ದ ತಾಯಿಗೆ ಕೊನೆಯ ಸಂದೇಶ ಕಳಿಸಿ ಯೂಟ್ಯೂಬರ್ ಆತ್ಮಹತ್ಯೆ

ಇನ್ನೂ ನನಸಾಗಿಲ್ಲ ದಶಕಗಳ ಕನಸು: ಹಾಸನ ವಿಮಾನ ನಿಲ್ದಾಣಕ್ಕೆ ಸಿಗದ ರೆಕ್ಕೆ, ಯೋಜನೆಗೆ ಅಡ್ಡಿಯಾಗಿದೆ ಸಂಪನ್ಮೂಲ-ರಾಜಕೀಯ ಇಚ್ಛಾಶಕ್ತಿ ಕೊರತೆ..!

SCROLL FOR NEXT