ಮೋದಿ-ಸ್ವಪನ್ ದಾಸ್ ಗುಪ್ತಾ 
ದೇಶ

ಬಂಗಾಳದಲ್ಲಿ ಸೋಲು: ರಾಜ್ಯಸಭೆಗೆ ಸ್ವಪನ್ ದಾಸ್ ಗುಪ್ತಾ ಮರುನಾಮಕರಣ

ರಾಜ್ಯಸಭೆಗೆ ರಾಜೀನಾಮೆ ನೀಡಿ ಇತ್ತೀಚೆಗೆ ನಡೆದ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಬಿಜೆಪಿಯಿಂದ ಸ್ಪರ್ಧಿಸಿದ್ದ ಪತ್ರಕರ್ತ ಸ್ವಪನ್ ದಾಸ್‌ಗುಪ್ತಾ ಅವರನ್ನು ಕೇಂದ್ರ ಸರ್ಕಾರ ರಾಜ್ಯಸಭೆಗೆ ಮರುನಾಮಕರಣ ಮಾಡಿದೆ.

ನವದೆಹಲಿ: ರಾಜ್ಯಸಭೆಗೆ ರಾಜೀನಾಮೆ ನೀಡಿ ಇತ್ತೀಚೆಗೆ ನಡೆದ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಬಿಜೆಪಿಯಿಂದ ಸ್ಪರ್ಧಿಸಿದ್ದ ಪತ್ರಕರ್ತ ಸ್ವಪನ್ ದಾಸ್‌ಗುಪ್ತಾ ಅವರನ್ನು ಕೇಂದ್ರ ಸರ್ಕಾರ ರಾಜ್ಯಸಭೆಗೆ ಮರುನಾಮಕರಣ ಮಾಡಿದೆ.

ಇದೇ ವೇಳೆ ಕೇಂದ್ರ ಸರ್ಕಾರ ಖ್ಯಾತ ವಕೀಲ ಮಹೇಶ್ ಜೆಠ್ಮಲಾನಿ ಅವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಿದೆ.

ಭಾರತದ ಸಂವಿಧಾನದ 80ನೇ ಪರಿಚ್ಛೇಧ(1) ರ ಉಪ-ಷರತ್ತು(ಎ) ನಿಂದ ನೀಡಲ್ಪಟ್ಟ ಅಧಿಕಾರವನ್ನು ಸ್ವಪನ್ ದಾಸ್‌ಗುಪ್ತಾ ಅವರನ್ನು ಪರಿಷತ್ತಿಗೆ ಮರುನಾಮಕರಣ ಮಾಡಲು ರಾಷ್ಟ್ರಪತಿಗಳಿಗೆ ಕಳುಹಿಸಿದ್ದು ರಾಷ್ಟ್ರಪತಿಗಳು ಅಂಕಿ ಹಾಕಿದ್ದಾರೆ. 

ಗೃಹ ಸಚಿವಾಲಯದ ಅಧಿಸೂಚನೆಯ ಪ್ರಕಾರ, ಸ್ವಪನ್ ದಾಸ್ ಗುಪ್ತಾ ಅವಧಿ 24-04-2022ರ ತನಕ ಇರಲಿದೆ. ಇನ್ನು ರಘುನಾಥ್ ಮೊಹಾಪಾತ್ರ ಅವರ ನಿಧನದಿಂದಾಗಿ ಖಾಲಿ ಇದ್ದ ಸ್ಥಾನಕ್ಕೆ ಜೆಠ್ಮಲಾನಿಯನ್ನು ನಾಮನಿರ್ದೇಶನ ಮಾಡಲಾಗಿದ್ದು ಅವರ ಅವಧಿ 03-07-2024ರವರೆಗೆ ಇರಲಿದೆ.

ಸರ್ಕಾರದ ಸಲಹೆಯ ಮೇರೆಗೆ ರಾಷ್ಟ್ರಪತಿಗಳು ಪ್ರಖ್ಯಾತ ವ್ಯಕ್ತಿಗಳನ್ನು ಮೇಲ್ಮನೆಗೆ ನಾಮಕರಣ ಮಾಡುತ್ತಾರೆ. ನಾಮನಿರ್ದೇಶಿತ ಸದಸ್ಯರನ್ನು ಸಾಹಿತ್ಯ, ವಿಜ್ಞಾನ, ಕ್ರೀಡೆ, ಕಲೆ ಮತ್ತು ಸಾಮಾಜಿಕ ಸೇವೆಯಂತಹ ಕ್ಷೇತ್ರಗಳಿಂದ ಆರಿಸಲಾಗುತ್ತದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TNIE Exclusive | Air India ವಿಮಾನದಲ್ಲಿ ಭಾರೀ ತಾಂತ್ರಿಕ ದೋಷ..! Phuket-Delhi ವಿಮಾನ 300 ಅಡಿ ಕುಸಿತಕ್ಕೆ Triple hydraulic systems ವೈಫಲ್ಯ ಕಾರಣ..?

ಸಂಪುಟ ವಿಸ್ತರಣೆ ಬಿಕ್ಕಟ್ಟು ಶಮನಕ್ಕೆ ಸಿಎಂ ಡಿಕೆ.ಶಿವಕುಮಾರ್ ದೆಹಲಿಗೆ ದೌಡು: ಹೈಕಮಾಂಡ್‌ ಜೊತೆ ಮಹತ್ವದ ಚರ್ಚೆ..!

'Toxic': ಸಿನಿಮಾ ಮಾಡುವುದು ಸುಲಭವಲ್ಲ, ಇಡೀ ಪ್ರಪಂಚದ ವಿರುದ್ಧ ಯುದ್ಧಕ್ಕೆ ಹೋದಂತೆ': ವದಂತಿಗಳ ನಡುವೆ ಆ ವ್ಯಕ್ತಿ ಬಂಡೆಯಂತೆ ನಿಂತರು- ಯಶ್!

Toxic: ಯಶ್ ಜೊತೆಗೆ ಕಿಯಾರಾ ಬೋಲ್ಡ್ ಅವತಾರ, ಟ್ರೋಲರ್ ಗಳ ಬಾಯಿ ಮುಚ್ಚಿಸಿದ ಪತಿ ಸಿದ್ಧಾರ್ಥ್ ಮಲ್ಹೋತ್ರಾ!

'ಕಳ್ಳಿ, ಕಳ್ಳಿ' ಅಂತಾ ಘೋಷಣೆ ಕೂಗಿ ಮಮತಾ ಬ್ಯಾನರ್ಜಿ ಕಾರಿನ ಮೇಲೆ ಕಲ್ಲು ತೂರಾಟ, ಕೆಸರು ಎರಚಿ ಆಕ್ರೋಶ! ಭಯಾನಕ Video