ಮಮತಾ-ಆಲಪನ್ ಬಂದ್ಯೋಪಾಧ್ಯಾಯ 
ದೇಶ

ಆಲಪನ್ ಬಂದ್ಯೋಪಾಧ್ಯಾಯ ಮುಗಿದ ಅಧ್ಯಾಯ; ಬಂಗಾಳ ಸರ್ಕಾರ ಎಂದಿಗೂ ಅವರ ಬೆನ್ನಿಗೆ ನಿಲ್ಲುತ್ತದೆ: ಮಮತಾ ಬ್ಯಾನರ್ಜಿ

ಆಲಪನ್ ಬಂದ್ಯೋಪಾಧ್ಯಾಯ ವಿವಾದ ಈಗ ಮುಗಿದ ಅಧ್ಯಾಯ. ಕೇಂದ್ರ ಸರ್ಕಾರಕ್ಕೆ ಸೇರದ ಅವರ ಜೊತೆಗೆ ಸರ್ಕಾರ ನಿಲ್ಲುತ್ತದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ. 

ಕೋಲ್ಕತಾ: ಆಲಪನ್ ಬಂದ್ಯೋಪಾಧ್ಯಾಯ ವಿವಾದ ಈಗ ಮುಗಿದ ಅಧ್ಯಾಯ. ಕೇಂದ್ರ ಸರ್ಕಾರಕ್ಕೆ ಸೇರದ ಅವರ ಜೊತೆಗೆ ಸರ್ಕಾರ ನಿಲ್ಲುತ್ತದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ. 

ಆಲಪನ್ ಬಂದ್ಯೋಪಾಧ್ಯಾಯ ಅಧ್ಯಾಯವು ಈಗ ಮುಗಿದಿದೆ. ಆಲಪನ್ ಬಂದ್ಯೋಪಾಧ್ಯಾಯ ಅವರಿಗೆ ಏನೇ ಆದರೂ ಅವರೊಂದಿಗೆ ಪಶ್ಚಿಮ ಬಂಗಾಳ ಸರ್ಕಾರ ನಿಲ್ಲುತ್ತದೆ ಎಂದು ಬ್ಯಾನರ್ಜಿ ಸುದ್ದಿಗಾರರಿಗೆ ತಿಳಿಸಿದರು. 

ಮೇ 31ಕ್ಕೆ ಬಂದ್ಯೋಪಾಧ್ಯಾಯ ನಿವೃತ್ತರಾಗಲು ನಿರ್ಧರಿಸಿದ್ದರು. ಆದರೆ ಕೋವಿಡ್ ಸಾಂಕ್ರಾಮಿಕ ರೋಗದ ವಿರುದ್ಧದ ಹೋರಾಟದಲ್ಲಿ ಅವರು ನಿರ್ಣಾಯಕ ಪಾತ್ರ ವಹಿಸಿದ್ದರಿಂದ ರಾಜ್ಯವು ಇತ್ತೀಚೆಗೆ ಅವರ ಅಧಿಕಾರಾವಧಿಯನ್ನು ಮೂರು ತಿಂಗಳು ವಿಸ್ತರಿಸಲು ಕೇಂದ್ರ ಸರ್ಕಾರವನ್ನು ಕೋರಿತ್ತು. ಇದಕ್ಕೆ ಅನುಮೋದನೆ ನೀಡಿದ್ದ ಕೇಂದ್ರ ಸರ್ಕಾರ ನಾಲ್ಕು ದಿನಗಳ ಬಳಿಕ ನಿವೃತ್ತಿಗೆ ಆದೇಶಿಸಿತ್ತು. ಆದರೆ ಇದಕ್ಕೆ ಬಂಗಾಳ ಸರ್ಕಾರ ಒಪ್ಪದ ಕಾರಣ ಇದು ಕೇಂದ್ರ ಮತ್ತು ರಾಜ್ಯ ಸರ್ಕಾರ ನಡುವೆ ಜಂಜಾಟಕ್ಕೆ ಕಾರಣವಾಗಿತ್ತು. 

ಕೇಂದ್ರ ಮತ್ತು ಮಮತಾ ಬ್ಯಾನರ್ಜಿ ಸರ್ಕಾರದ ನಡುವಿನ ಹಗ್ಗಜಗ್ಗಾಟದ ನಡುವೆ ರಾಜ್ಯ ಸರ್ಕಾರ ಆಲಪನ್ ಅವರು ಸಿಎಂ ಮುಖ್ಯ ಸಲಹೆಗಾರರಾಗಿ ನೇಮಿಸಿತು. ಹೀಗಾಗಿ ಕೇಂದ್ರ ಗೃಹ ಸಚಿಲವಾಯ ವಿಪತ್ತು ನಿರ್ವಹಣಾ ಕಾಯ್ದೆಯ ಕಟ್ಟುನಿಟ್ಟಿನ ನಿಬಂಧನೆಯಡಿಯಲ್ಲಿ ಬಂದ್ಯೋಪಾಧ್ಯಾಯ  ಮೇಲೆ ಎರಡು ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸುವ ಶೋಕಾಸ್ ನೋಟಿಸ್ ಜಾರಿ ಮಾಡಿತ್ತು. 

ಇದು ಯಾವುದಕ್ಕೂ ತಲೆ ಕೆಡೆಸಿಕೊಳ್ಳದ ಬಂದ್ಯೋಪಾಧ್ಯಾಯ ಈಗಾಗಲೇ ಮುಖ್ಯ ಸಲಹೆಗಾರರಾಗಿ ಕೆಲಸ ಮಾಡಲು ಪ್ರಾರಂಭಿಸಿದ್ದಾರೆ. ಮಮತಾ ಬ್ಯಾನರ್ಜಿ ಅಧ್ಯಕ್ಷತೆಯಲ್ಲಿ ರಾಜ್ಯ ನೀರಾವರಿ ಇಲಾಖೆಯ ಬುಧವಾರದ ಸಭೆಯಲ್ಲಿ ಉಪಸ್ಥಿತರಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT