ಸಾಂದರ್ಭಿಕ ಚಿತ್ರ 
ದೇಶ

ಭೀಕರ ದೃಶ್ಯ: ಪತ್ನಿಯನ್ನು ಕೊಂದು ರಸ್ತೆಯಲ್ಲಿ ಶವ ಎಳೆದೊಯ್ದ ಪತಿ, ಗಾಯಗೊಂಡಿದ್ದ 9 ತಿಂಗಳ ಮಗ ಆಸ್ಪತ್ರೆಯಲ್ಲಿ ಸಾವು

ಪತ್ನಿಯನ್ನು ಹತ್ಯೆಗೈದ ಪತಿ ಆಕೆಯ ಶವವನ್ನು ಬೀದಿಯಲ್ಲಿ ಎಳೆದೊಯ್ದಿದ್ದಾನೆ. ಇನ್ನು ಗಂಭೀರವಾಗಿ ಗಾಯಗೊಂಡಿದ್ದ ಶಿಶು ಆಸ್ಪತ್ರೆಯಲ್ಲಿ ಮೃತಪಟ್ಟಿದೆ ಎಂದು ಪೊಲೀಸರು ತಿಳಿಸಿದ್ದಾರೆ. 

ಕೋಟಾ: ಪತ್ನಿಯನ್ನು ಹತ್ಯೆಗೈದ ಪತಿ ಆಕೆಯ ಶವವನ್ನು ಬೀದಿಯಲ್ಲಿ ಎಳೆದೊಯ್ದಿದ್ದಾನೆ. ಇನ್ನು ಗಂಭೀರವಾಗಿ ಗಾಯಗೊಂಡಿದ್ದ ಶಿಶು ಆಸ್ಪತ್ರೆಯಲ್ಲಿ ಮೃತಪಟ್ಟಿದೆ ಎಂದು ಪೊಲೀಸರು ತಿಳಿಸಿದ್ದಾರೆ. 

ರಾಜಸ್ಥಾನದ ರಾಂಪುರದ ಭಟಪುರ ಪ್ರದೇಶದಲ್ಲಿ ಮಂಗಳವಾರ ರಾತ್ರಿ ಘಟನೆ ನಡೆಸಿದ್ದು ಆರೋಪಿ 40 ವರ್ಷದ ಸುನಿಲ್ ವಾಲ್ಮೀಕಿ ಅಲಿಯಾಸ್ ಪಿಂಟು ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. 

ಸುನಿಲ್ ಮಂಗಳವಾರ ಮಧ್ಯಾಹ್ನ ತವರು ಮನೆಗೆ ತೆರಳಿದ್ದ ಪತ್ನಿ 35 ವರ್ಷದ ಸೀಮಾ ಮತ್ತು ಒಂಬತ್ತು ತಿಂಗಳ ಮಗ ಅವಿನಾಶ್ ನನ್ನು ಮನೆಗೆ ಕರೆದುಕೊಂಡು ಬಂದಿದ್ದಾನೆ. ಈ ವೇಳೆ ಒಂಬತ್ತು ವರ್ಷದ ಹಿರಿಯ ಮಗ  ಅಜ್ಜಿ ಮನೆಯಲ್ಲೇ ಉಳಿದುಕೊಂಡಿದ್ದರಿಂದ ಬದುಕುಳಿದಿದ್ದಾನೆ. 

ಸಂಜೆ ದಂಪತಿಗಳ ನಡುವೆ ಜಗಳ ನಡೆಸಿದ್ದು ಸುನಿಲ್ ಕೊಡಲಿಯಿಂದ ಸೀಮಾಳನ್ನು ಕೊಚ್ಚಿ ಕೊಲೆ ಮಾಡಿದ್ದಾನೆ. ನಂತರ ಆಕೆಯ ಮೃತದೇಹವನ್ನು ರಸ್ತೆಯಲ್ಲಿ ಹಲವು ಮೀಟರ್ ಗಳ ದೂರದವರೆಗೆ ಎಳೆದು ತಂದಿದ್ದಾನೆ ಎಂದು ಉಪ ಪೊಲೀಸ್ ವರಿಷ್ಠಾಧಿಕಾರಿ ರಾಮ್ ಕಲ್ಯಾಣ್ ತಿಳಿಸಿದ್ದಾರೆ. ಪತ್ನಿಯ ಶವನ್ನು ಬೀದಿಯಲ್ಲಿ 70 ರಿಂದ 80 ಮೀಟರ್ ದೂರಕ್ಕೆ ಎಳೆದು ತಂದಿದ್ದು ಇದು ಜನರಲ್ಲಿ ಭೀತಿ ಹುಟ್ಟಿಸಿದೆ ಎಂದು ಡಿಎಸ್ಪಿ ತಿಳಿಸಿದ್ದಾರೆ. 

ಇನ್ನು ಘಟನೆಯಲ್ಲಿ ಅವಿನಾಶ್ ಗಾಯಗೊಂಡಿದ್ದು, ಬುಧವಾರ ಬೆಳಿಗ್ಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಆದರೆ ಮಗುವಿಗೆ ಹೇಗೆ ಗಾಯಗಳಾಗಿವೆ ಎಂದು ಸ್ಪಷ್ಟವಾಗಿಲ್ಲ. ಮೃತ ಮಹಿಳೆ ಮತ್ತು ಮಗುವಿನ ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು ಆರೋಪಿ ವಿರುದ್ದ ಐಪಿಸಿ ಸೆಕ್ಷನ್ ಅಡಿಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ ಎಂದರು. 

ಸೀಮಾ ಮತ್ತು ಸುನಿಲ್ 15 ವರ್ಷಗಳ ಹಿಂದೆ ಮದುವೆಯಾಗಿದ್ದು ದಂಪತಿಗೆ ಇಬ್ಬರು ಗಂಡು ಮಕ್ಕಳಿದ್ದು ಅದರಲ್ಲಿ ಈಗ ಓರ್ವ ಮಗು ಮೃತಪಟ್ಟಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT