ಸಾಂದರ್ಭಿಕ ಚಿತ್ರ 
ದೇಶ

ಕೋವಿಡ್-19: ವಿದೇಶಿ ಲಸಿಕೆಗಳಿಗೆ ಅನುಮತಿ ಪ್ರಕ್ರಿಯೆ ಮತ್ತಷ್ಟು ಸಡಿಲಗೊಳಿಸಿದ ಡಿಸಿಜಿಐ

ಭಾರತದಲ್ಲಿ ಲಸಿಕೆ ಅಭಿಯಾನಕ್ಕೆ ವೇಗ ನೀಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಹತ್ವದ ಹೆಜ್ಜೆಯನ್ನಿರಿಸಿದ್ದು, ಡ್ರಗ್ಸ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ (DCGI)ವಿದೇಶಿ ಲಸಿಕೆಗಳಿಗೆ ಅನುಮತಿ ನೀಡುವ ಪ್ರಕ್ರಿಯೆಯನ್ನು ಮತ್ತಷ್ಟು ಸಡಿಲಗೊಳಿಸಿದೆ.

ನವದೆಹಲಿ: ಭಾರತದಲ್ಲಿ ಲಸಿಕೆ ಅಭಿಯಾನಕ್ಕೆ ವೇಗ ನೀಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಹತ್ವದ ಹೆಜ್ಜೆಯನ್ನಿರಿಸಿದ್ದು, ಡ್ರಗ್ಸ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ (DCGI)ವಿದೇಶಿ ಲಸಿಕೆಗಳಿಗೆ ಅನುಮತಿ ನೀಡುವ ಪ್ರಕ್ರಿಯೆಯನ್ನು ಮತ್ತಷ್ಟು ಸಡಿಲಗೊಳಿಸಿದೆ.

ಹೌದು.. ವಿದೇಶಿ ಲಸಿಕೆಗಳಿಗೆ ಅನುಮತಿ ನೀಡುವ ಪ್ರಕ್ರಿಯೆಯನ್ನು ಮತ್ತಷ್ಟು ಸಡಿಲಗೊಳಿಸಿದ್ದು, ವಿದೇಶಗಳು ತಯಾರಿಸಿದ ಕೋವಿಡ್‌ ಲಸಿಕೆಗಳ ಪ್ರತಿ ಬ್ಯಾಚ್‌ ಅನ್ನು ಕಸೌಲಿಯ ಕೇಂದ್ರ ಔಷಧ ಪ್ರಯೋಗಾಲಯದಲ್ಲಿ ಪರೀಕ್ಷಿಸುವ ಮತ್ತು ಅವುಗಳ ಬಿಡುಗಡೆಗೂ ಮುನ್ನ ನಡೆಸಬೇಕಿದ್ದ ಪ್ರಯೋಗಗಳಿಗೆ ಭಾರತೀಯ  ಪ್ರಧಾನ ಔಷಧ ನಿಯಂತ್ರಕ (ಡಿಸಿಜಿಐ) ಸಂಸ್ಥೆ ವಿನಾಯಿತಿ ನೀಡಿದೆ. ಇದು ದೇಶದಲ್ಲಿ ಲಸಿಕೆಗಳ ಲಭ್ಯತೆಯ ಪ್ರಮಾಣವನ್ನು ಹೆಚ್ಚಿಸಲು ನೆರವಾಗಲಿದೆ ಎಂದು ಹೇಳಲಾಗಿದೆ.

ವಿದೇಶಿ ಲಸಿಕೆಗಳನ್ನು ಪೂರೈಸುವ ಮಾತುಕತೆ ವೇಳೆ ಫೈಜರ್‌ ಮತ್ತು ಸಿಪ್ಲಾ ಕಂಪನಿಗಳು ಈ ಕುರಿತು ಬೇಡಿಕೆಗಳನ್ನು ಸರ್ಕಾರದ ಮುಂದಿಟ್ಟಿದ್ದವು. ಈ ಹಿನ್ನೆಲೆಯಲ್ಲಿ ಡಿಸಿಜಿಐ ಈ ನಿರ್ಧಾರ ಪ್ರಕಟಿಸಿದ್ದು, 'ದೇಶದಲ್ಲಿ ಕೋವಿಡ್‌ ವ್ಯಾಪಕವಾಗಿ ಪಸರಿಸುತ್ತಿದೆ. ಈ ಸಂದರ್ಭದಲ್ಲಿ ಭಾರಿ ಪ್ರಮಾಣದಲ್ಲಿ ಲಸಿಕೆಗಳ  ಅವಶ್ಯಕತೆಗಳಿರುವ ಕಾರಣ ಆಮದು ಮಾಡಿಕೊಳ್ಳುವ ಲಸಿಕೆಗಳಿಗೆ ಈ ವಿನಾಯಿತಿ ನೀಡಲಾಗಿದೆ ಎಂದು ಡಿಸಿಜಿಐ ಹೇಳಿದೆ. ಈ ಹಿಂದೆ ದೇಶೀಯ ಲಸಿಕೆಗಳಾದ ಕೋವಿಶೀಲ್ಡ್ ಹಾಗೂ ಕೋವ್ಯಾಕ್ಸಿನ್ ಲಸಿಕೆಗಳು ಕೂಡ ಕೊರೊನಾ ಸೋಂಕಿನ ವಿರುದ್ಧ ತುರ್ತು ಬಳಕೆಗೆ ಸ್ಥಳೀಯವಾಗಿ ಹಲವು ಹಂತದ ಪರೀಕ್ಷೆಗಳಿಗೆ  ಒಳಪಟ್ಟಿದ್ದವು.

'ತುರ್ತು ಸ್ಥಿತಿ ಸಂದರ್ಭದಲ್ಲಿ ನಿರ್ಬಂಧಿತ ಬಳಕೆಗಾಗಿ ಭಾರತದಲ್ಲಿ ಕೋವಿಡ್‌ ಲಸಿಕೆಗಳನ್ನು ಅನುಮೋದಿಸಲಾಗಿದೆ. ಇದೇ ರೀತಿ ಈಗಾಗಲೇ ಅಮೆರಿಕದ ಎಫ್‌ಡಿಎ, ಇಎಂಎ, ಯುಕೆ ಎಂಎಚ್‌ಆರ್‌ಎ, ಪಿಎಂಆರ್‌ಡಿ ಜಪಾನ್‌ನಲ್ಲಿ ನಿರ್ಬಂಧಿತ ಬಳಕೆಗೆ ಅನುಮೋದನೆ ದೊರೆತಿರುವ ಅಥವಾ ವಿಶ್ವ ಆರೋಗ್ಯ ಸಂಸ್ಥೆಯ  ತುರ್ತು ಬಳಕೆ ಪಟ್ಟಿಯಲ್ಲಿ ಇರುವ ಲಸಿಕೆಗಳಿಗೆ ಈ ವಿನಾಯಿತಿ ನೀಡಲಾಗಿದೆ ಎಂದು ಡಿಸಿಜಿಐ ಸ್ಪಷ್ಟನೆ ನೀಡಿದೆ.

ಆದಾಗ್ಯೂ, ಅವರ ಸಾರಾಂಶ ಲಾಟ್ ಪ್ರೋಟೋಕಾಲ್ ಮತ್ತು ಬ್ಯಾಚ್ ಅಥವಾ ಲಾಟ್ ವಿಶ್ಲೇಷಣೆಯ ಪ್ರಮಾಣಪತ್ರದ ಪರಿಶೀಲನೆಯನ್ನು ಸಿಡಿಎಲ್, ಕಸೌಲಿ ಪ್ರಮಾಣಿತ ಕಾರ್ಯವಿಧಾನಗಳ ಪ್ರಕಾರ ಬಿಡುಗಡೆ ಮಾಡಲು ಮತ್ತು ಲಸಿಕೆ ಬಿಡುಗಡೆ ಮೊದಲು ಸುರಕ್ಷತಾ ಫಲಿತಾಂಶಗಳಿಗಾಗಿ ಮೊದಲ 100  ಫಲಾನುಭವಿಗಳ ಮೇಲೆ ಏಳು ದಿನಗಳವರೆಗೆ ಮೌಲ್ಯಮಾಪನದ ಅಗತ್ಯವನ್ನು ಕೈಗೊಳ್ಳಬೇಕು ಎಂದು ಡಿಸಿಜಿಐ ಜೂನ್ 1 ರಂದು ನೀಡಿದ ನೋಟಿಸ್‌ನಲ್ಲಿ ತಿಳಿಸಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT